Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:13 - ಪರಿಶುದ್ದ ಬೈಬಲ್‌

13 ಜೆರುಸಲೇಮೇ, ದೇವರು ನಿನ್ನ ಬಾಗಿಲುಗಳ ಸರಳುಗಳನ್ನು ಬಲಪಡಿಸುವನು; ನಿನ್ನ ನಗರದಲ್ಲಿರುವ ಜನರನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ನಿನ್ನ ಹೆಬ್ಬಾಗಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ; ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:13
20 ತಿಳಿವುಗಳ ಹೋಲಿಕೆ  

ನಮ್ಮ ಯುವಕರು ಮಹಾವೃಕ್ಷಗಳಂತಿದ್ದಾರೆ. ನಮ್ಮ ಯುವತಿಯರು ಅರಮನೆಯಲ್ಲಿ ಸುಂದರವಾಗಿ ಕೆತ್ತಲ್ಪಟ್ಟ ಕಂಬಗಳಂತಿರುವರು.


ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ. ಯೆಹೋವನು ತನ್ನ ಜನರ ಸುತ್ತಲೂ ಇರುವನು. ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.


ಆದ್ದರಿಂದ ಯಾಜಕರೂ ಲೇವಿಯರೂ ಶಾಸ್ತ್ರೋಕ್ತವಾಗಿ ತಮ್ಮನ್ನು ಶುದ್ಧಪಡಿಸಿಕೊಂಡರು. ಅನಂತರ ಜನರನ್ನೂ ಜೆರುಸಲೇಮಿನ ಗೋಡೆಯನ್ನೂ ಬಾಗಿಲುಗಳನ್ನೂ ಶಾಸ್ತ್ರೋಕ್ತವಾಗಿ ಶುದ್ಧಿಮಾಡಿದರು.


ಗೋಡೆಯ ಕೆಲಸ ಪೂರ್ತಿಯಾದ ಬಳಿಕ ದ್ವಾರಗಳಿಗೆ ಬಾಗಿಲುಗಳನ್ನು ಇಡಲು ಪ್ರಾರಂಭಿಸಿದೆವು; ಬಾಗಿಲುಗಳಿಗೆ ಕಾವಲುಗಾರರನ್ನು ನೇಮಿಸಿದೆವು. ದೇವಾಲಯದಲ್ಲಿ ಬೇಕಾಗಿರುವ ಗಾಯಕರನ್ನು ಮತ್ತು ಯಾಜಕರಿಗೆ ಬೇಕಾದ ಸಹಾಯಕರನ್ನು ಆರಿಸಿದೆವು.


ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಭೂಲೋಕದ ರಾಜರಿಗೆ ಆಗಲಿಲ್ಲ. ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ ಲೋಕದ ಜನರಿಗೆ ಆಗಲಿಲ್ಲ. ಜೆರುಸಲೇಮ್ ಪಟ್ಟಣದ ಬಾಗಿಲುಗಳ ಮೂಲಕ ವೈರಿಗಳು ಬಂದರೆಂಬುದನ್ನು ಅವರಿಗೆ ನಂಬಲೂ ಆಗಲಿಲ್ಲ.


ಚೀಯೋನಿಗೆ ಕರುಣೆತೋರಿ ಜೆರುಸಲೇಮಿನ ಕೋಟೆಗಳನ್ನು ಮತ್ತೆ ನಿರ್ಮಿಸು.


ಹನಾನಿಗೆ ಮತ್ತು ಹನನ್ಯನಿಗೆ ನಾನು ಆಜ್ಞಾಪಿಸಿದ್ದೇನೆಂದರೆ: “ಸೂರ್ಯೋದಯವಾಗಿ ಕೆಲವು ತಾಸು ಕಳೆದ ಮೇಲೆಯೇ ನೀವು ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬೇಕು; ಸೂರ್ಯನು ಮುಳುಗುವ ಮೊದಲೇ ನೀವು ಬಾಗಿಲುಗಳನ್ನು ಮುಚ್ಚಿ ಬೀಗ ಹಾಕಬೇಕು. ಜೆರುಸಲೇಮಿನಲ್ಲಿ ವಾಸವಾಗಿರುವವರನ್ನೇ ಕಾವಲುಗಾರರನ್ನಾಗಿ ಆರಿಸಿಕೊಳ್ಳಿರಿ. ವಿಶೇಷವಾದ ಸ್ಥಳಗಳಲ್ಲಿ ಪಟ್ಟಣವನ್ನು ಕಾಯುವುದಕ್ಕಾಗಿ ಅವರಲ್ಲಿ ಕೆಲವರನ್ನು ನೇಮಿಸಿರಿ; ಉಳಿದವರನ್ನು ಅವರವರ ಮನೆಯ ಸಮೀಪದಲ್ಲಿಯೇ ಕಾಯಲು ನೇಮಿಸಿರಿ.”


ಸನ್ಬಲ್ಲಟನಿಗೆ, ಟೋಬೀಯನಿಗೆ, ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ.


“ದಾನಿಯೇಲನೇ, ಇದನ್ನು ತಿಳಿದುಕೊ. ಇದನ್ನು ಚೆನ್ನಾಗಿ ಅರ್ಥಮಾಡಿಕೊ. ‘ಹೋಗಿ ಜೆರುಸಲೇಮನ್ನು ಸರಿಪಡಿಸಿರಿ’ ಎಂಬ ದೈವೋಕ್ತಿಯು ಹೊರಡುವಂದಿನಿಂದ ಅಭಿಷಿಕ್ತನಾದ ರಾಜನು ಬರುವದರೊಳಗೆ ಏಳು ವಾರಗಳು ಕಳೆಯಬೇಕು. ಆಗ ಜೆರುಸಲೇಮು ಮತ್ತೆ ನಿರ್ಮಾಣವಾಗುವುದು. ಜನರು ಒಂದಾಗಿ ಸೇರುವದಕ್ಕೆ ಜೆರುಸಲೇಮಿನಲ್ಲಿ ಮತ್ತೆ ಸ್ಥಳಾವಕಾಶವಾಗುವುದು. ನಗರದ ಸುತ್ತಲೂ ಅದನ್ನು ರಕ್ಷಿಸುವುದಕ್ಕಾಗಿ ಒಂದು ಕಂದಕವನ್ನು ಕೊರೆಯಲಾಗುವುದು. ಅರವತ್ತೆರಡು ವಾರಗಳವರೆಗೆ ಜೆರುಸಲೇಮ್ ನಗರವನ್ನು ಕಟ್ಟಲಾಗುವುದು. ಆದರೆ ಆ ಅವಧಿಯಲ್ಲಿ ಹಲವಾರು ಕಷ್ಟನಷ್ಟಗಳು ಸಂಭವಿಸುವವು.


“‘ನಮ್ಮ ದೇಶವು ಒಂದು ಬರಿದಾದ ಮರುಭೂಮಿಯಾಗಿದೆ. ಅಲ್ಲಿ ಜನರಾಗಲಿ ಪ್ರಾಣಿಗಳಾಗಲಿ ವಾಸಿಸುವದಿಲ್ಲ’ ಎಂದು ನೀವು ಹೇಳುತ್ತಿರುವಿರಿ. ಜೆರುಸಲೇಮಿನ ಬೀದಿಗಳಲ್ಲಿ ಮತ್ತು ಯೆಹೂದದ ಊರುಗಳಲ್ಲಿ ಈಗ ಮೌನವಿದೆ. ಆದರೆ ಬೇಗನೆ ಅಲ್ಲಿ ಧ್ವನಿಕೇಳಿಸುವುದು.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು