Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:14 - ಪರಿಶುದ್ದ ಬೈಬಲ್‌

14 ಆತನು ನಿಮ್ಮ ದೇಶದಲ್ಲಿ ಶಾಂತಿಯನ್ನು ನೆಲೆಗೊಳಿಸಿದನು. ನಿಮ್ಮನ್ನು ಶ್ರೇಷ್ಠವಾದ ಗೋಧಿಯಿಂದ ತೃಪ್ತಿಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ನಿನ್ನ ಪ್ರಾಂತದೊಳಗೆ ಸೌಭಾಗ್ಯವನ್ನುಂಟುಮಾಡುತ್ತಾನೆ; ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:14
15 ತಿಳಿವುಗಳ ಹೋಲಿಕೆ  

ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”


ಯೆಹೋವನು ತನ್ನ ಜನರಿಗೆ ಬಲವನ್ನು ದಯಪಾಲಿಸಲಿ. ಆತನು ತನ್ನ ಜನರಿಗೆ ಶಾಂತಿಯನ್ನು ಸ್ಥಾಪಿಸಲಿ.


ನಾನು ಚೀಯೋನಿಗೆ ಬೇಕಾದದ್ದನ್ನೆಲ್ಲಾ ಒದಗಿಸುವೆನು; ಇಲ್ಲಿಯ ಬಡವರಿಗೂ ಆಹಾರವನ್ನು ಸಮೃದ್ಧಿಯಾಗಿ ದಯಪಾಲಿಸುವೆನು;


ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.


ಶತ್ರುಸೈನ್ಯವು ಅದರೊಳಗಿಂದ ದಾಟಿಹೋಗಲು ನಾನು ಬಿಡೆನು. ಇನ್ನು ಮುಂದೆ ನನ್ನ ಜನರಿಗೆ ಅವರು ಹಾನಿಮಾಡದಂತೆ ಮಾಡುವೆನು. ಕಳೆದುಹೋದ ಸಮಯಗಳಲ್ಲಿ ಅವರೆಷ್ಟು ಸಂಕಟ ಅನುಭವಿಸಿದರೆಂದು ನನ್ನ ಸ್ವಂತ ಕಣ್ಣುಗಳಿಂದ ನೋಡಿರುತ್ತೇನೆ.”


ಯೆಹೋವನು ಹೇಳುವುದೇನೆಂದರೆ: “ಇಗೋ, ನಾನು ನಿನಗೆ ಸಮಾಧಾನವನ್ನು ಕೊಡುತ್ತೇನೆ. ಒಂದು ದೊಡ್ಡ ಹೊಳೆಯು ಹರಿಯುವಂತೆ ನಿನಗೆ ಸಮಾಧಾನವು ಹರಿದುಕೊಂಡು ಬರುವದು. ಭೂಮಿಯ ಮೇಲಿರುವ ಎಲ್ಲಾ ದೇಶಗಳ ಐಶ್ವರ್ಯವು ನಿನ್ನ ಬಳಿಗೆ ಹರಿದುಬರುವದು. ಅದು ಪ್ರವಾಹದಂತೆ ಹರಿದುಬರುವದು. ನೀವು ಸಣ್ಣ ಮಕ್ಕಳಂತೆ ಆ ಹಾಲನ್ನು ಕುಡಿಯುವಿರಿ. ನಾನು ನಿಮ್ಮನ್ನೆತ್ತಿ ಕೈಗಳಲ್ಲಿ ಅಪ್ಪಿಕೊಳ್ಳುವೆನು. ನನ್ನ ತೊಡೆಯ ಮೇಲೆ ನಿಮ್ಮನ್ನು ಕುಳ್ಳಿರಿಸಿ ಆಟವಾಡಿಸುವೆನು.


ಜೆರುಸಲೇಮಿನ ಶಾಂತಿಗೋಸ್ಕರ ಪ್ರಾರ್ಥಿಸಿರಿ: “ನಿನ್ನನ್ನು ಪ್ರೀತಿಸುವ ಜನರು ಅಲ್ಲಿ ಶಾಂತಿಯನ್ನು ಕಂಡುಕೊಳ್ಳಲಿ.


ಆದರೆ ನಿನ್ನ ನಂತರ ಬರುವ ನಿನ್ನ ಮಗನು ಸಮಾಧಾನ ಪುರುಷನಾಗಿರುವನು. ಅವನ ರಾಜ್ಯದಲ್ಲಿ ನಾನು ಶಾಂತಿಯನ್ನು ನೆಲೆಗೊಳಿಸುವೆನು. ಅವನ ಸುತ್ತಮುತ್ತಲಿರುವ ವೈರಿಗಳಿಂದ ಅವನಿಗೆ ಯಾವ ಕೇಡೂ ಉಂಟಾಗದು. ಅವನೇ ಸೊಲೊಮೋನನು. ಅವನ ಕಾಲದಲ್ಲಿ ಇಸ್ರೇಲರು ಸಮಾಧಾನದಿಂದ ವಾಸಿಸುವರು.


ನಾನು ನಿಮ್ಮ ದೇಶಕ್ಕೆ ಸಮಾಧಾನವನ್ನು ಅನುಗ್ರಹಿಸುವೆನು. ನೀವು ನಿರ್ಭಯವಾಗಿ ಮಲಗಿಕೊಳ್ಳುವಿರಿ. ನಿಮ್ಮನ್ನು ಭಯಪಡಿಸಲು ಯಾರೂ ಬರುವುದಿಲ್ಲ. ದುಷ್ಟಮೃಗಗಳು ನಿಮ್ಮ ದೇಶದಲ್ಲಿರದಂತೆ ಮಾಡುವೆ. ಶತ್ರುಸೈನ್ಯಗಳು ನಿಮ್ಮ ದೇಶದೊಳಕ್ಕೆ ಬರುವುದಿಲ್ಲ.


“‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.


ಯೆಹೋವನು ದಾವೀದನಿಗೆ ಸ್ಥಿರವಾದ ವಾಗ್ದಾನವನ್ನು ಮಾಡಿದನು. ಆತನು ಅದನ್ನು ಬದಲಾಯಿಸುವುದೇ ಇಲ್ಲ. “ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.


ನಿನ್ನ ಚಿನ್ನ, ಬೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಬಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನ್ನು ಊಟ ಮಾಡಿದೆ: ಉತ್ತಮ ಗೋಧಿಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು