Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:3 - ಪರಿಶುದ್ದ ಬೈಬಲ್‌

3 ಅವರ ಒಡೆದ ಹೃದಯಗಳನ್ನು ಆತನು ವಾಸಿಮಾಡುವನು; ಅವರ ಗಾಯಗಳನ್ನು ಕಟ್ಟುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ; ಅವರ ಗಾಯಗಳನ್ನು ಕಟ್ಟುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:3
12 ತಿಳಿವುಗಳ ಹೋಲಿಕೆ  

ಮನಗುಂದಿದವರಿಗೆ ಯೆಹೋವನು ಸಮೀಪವಾಗಿದ್ದಾನೆ; ಕುಗ್ಗಿಹೋದ ಅವರನ್ನು ಆತನು ರಕ್ಷಿಸುವನು.


ಗಾಯ ಮಾಡುವವನೂ ಗಾಯ ಕಟ್ಟುವವನೂ ಆತನೇ. ಆತನು ಗಾಯಮಾಡಿದರೂ ಆತನ ಕೈಗಳೇ ವಾಸಿಮಾಡುತ್ತವೆ.


“‘ಅನಂತರ ನಾನು ಆ ನಗರದ ಜನರನ್ನು ಕ್ಷಮಿಸುವೆನು. ಆ ಜನರು ಶಾಂತಿಯನ್ನೂ ಸುರಕ್ಷಣೆಯನ್ನೂ ಪಡೆಯುವಂತೆ ಮಾಡುವೆನು.


ಯೆಹೋವನ ಸೇವಕನು ಹೇಳುವುದೇನೆಂದರೆ, “ಒಡೆಯನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ. ಬಡವರಿಗೆ ಸುವಾರ್ತೆಯನ್ನು ತಿಳಿಸಲೂ ದುಃಖಿಸುವವರನ್ನು ಸಂತೈಸಲೂ ಆತನು ನನ್ನನ್ನು ಆರಿಸಿರುತ್ತಾನೆ. ಸೆರೆಹಿಡಿಯಲ್ಪಟ್ಟಿರುವವರನ್ನು ಸ್ವತಂತ್ರರಾದರೆಂದು ಹೇಳಲೂ ಕೈದಿಗಳನ್ನು ಬಿಡುಗಡೆ ಮಾಡಲ್ಪಟ್ಟವರೆಂದು ಹೇಳಲೂ ದೇವರು ನನ್ನನ್ನು ಕಳುಹಿಸಿದನು.


“ಪ್ರಭುವಿನ (ದೇವರ) ಆತ್ಮವು ನನ್ನಲ್ಲಿ ಇದೆ. ಬಡಜನರಿಗೆ ಶುಭಸಂದೇಶವನ್ನು ತಿಳಿಸಲು ದೇವರು ನನ್ನನ್ನು ಅಭಿಷೇಕಿಸಿದ್ದಾನೆ. ಪಾಪಕ್ಕೆ ಸೆರೆಯಾಳುಗಳಾಗಿರುವ ಜನರಿಗೆ ‘ನೀವು ಬಿಡುಗಡೆಯಾಗಿದ್ದೀರಿ’ ಎಂತಲೂ ಕುರುಡರಿಗೆ, ‘ನಿಮಗೆ ಮತ್ತೆ ಕಣ್ಣು ಕಾಣಿಸುವುದು’ ಎಂತಲೂ ತಿಳಿಸುವುದಕ್ಕೆ ದೇವರು ನನ್ನನ್ನು ಕಳುಹಿಸಿದ್ದಾನೆ. ದಬ್ಬಾಳಿಕೆಗೆ ಗುರಿಯಾದವರನ್ನು ಬಿಡಿಸುವುದಕ್ಕೂ


ದೇವರೇ, ನೀನು ಅಪೇಕ್ಷಿಸುವ ಯಜ್ಞ ದೀನ ಮನಸ್ಸೇ. ದೀನತೆ ಮತ್ತು ವಿಧೇಯತೆಯುಳ್ಳ ಹೃದಯವನ್ನು ನೀನು ತಿರಸ್ಕರಿಸುವುದಿಲ್ಲ.


“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.


“ಕಳೆದುಹೋದ ಕುರಿಗಳನ್ನು ನಾನು ಹುಡುಕುವೆನು. ಚದರಿಹೋಗಿದ್ದ ಕುರಿಗಳನ್ನು ಹಿಂದಕ್ಕೆ ತರುವೆನು. ಗಾಯಗೊಂಡ ಕುರಿಗಳನ್ನು ಬಟ್ಟೆಯಿಂದ ಸುತ್ತುವೆನು. ಬಲಹೀನ ಕುರಿಗಳನ್ನು ಬಲಶಾಲಿಯಾಗಿ ಮಾಡುವೆನು. ಆದರೆ ನಾನು ಕೊಬ್ಬಿದ, ಶಕ್ತಿಶಾಲಿಯಾದ ಕುರುಬರನ್ನು ನಾಶಮಾಡುವೆನು. ಯೋಗ್ಯವಾದ ಶಿಕ್ಷೆಯನ್ನು ಅವರಿಗೆ ಉಣಿಸುವೆನು.”


ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು