Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 148:8 - ಪರಿಶುದ್ದ ಬೈಬಲ್‌

8 ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳು, ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಬೆಂಕಿ, ಕಲ್ಮಳೆ, ಹಿಮ, ಹಬೆ ಇವುಗಳೂ ಆತನ ಅಪ್ಪಣೆಯನ್ನು ನೆರವೇರಿಸುವ ಬಿರುಗಾಳಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 148:8
24 ತಿಳಿವುಗಳ ಹೋಲಿಕೆ  

ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲುಗಳು ಬಿದ್ದವು. ಆ ಆಲಿಕಲ್ಲುಗಳು ನೂರು ಪೌಂಡುಗಳಷ್ಟು ಭಾರವಾಗಿದ್ದವು. ಈ ಉಪದ್ರವದ ಕಾಟದಿಂದ ಜನರು ದೇವರನ್ನು ದೂಷಿಸಿದರು. ಈ ಉಪದ್ರವವು ಬಹಳ ಭೀಕರವಾಗಿತ್ತು.


ಆದರೆ ಯೆಹೋವನು ಸಮುದ್ರದ ಮೇಲೆ ದೊಡ್ಡ ಬಿರುಗಾಳಿ ಬೀಸುವಂತೆ ಮಾಡಿದನು. ಬಿರುಗಾಳಿಯು ಸಮುದ್ರದಲ್ಲಿ ದೊಡ್ಡ ಅಲೆಗಳನ್ನು ಎಬ್ಬಿಸಿತು. ಬಿರುಗಾಳಿಯು ಬಲವಾಗಿದ್ದುದರಿಂದ ಹಡಗು ಒಡೆದುಹೋಗುವುದರಲ್ಲಿತ್ತು.


ನನ್ನ ಒಡೆಯನಾದ ಯೆಹೋವನು ಈ ವಿಷಯಗಳನ್ನು ನನಗೆ ತೋರಿಸಿದನು. ದೇವರಾದ ಯೆಹೋವನು ಬೆಂಕಿಯಿಂದ ನ್ಯಾಯತೀರಿಸುವುದಕ್ಕಾಗಿ ಕರೆಯುವುದನ್ನು ಕಂಡೆನು. ಆ ಬೆಂಕಿಯು ಮಹಾ ಸಾಗರವನ್ನು ನಾಶಮಾಡಿತು. ಭೂಮಿಯನ್ನು ತಿಂದುಬಿಡಲೂ ಪ್ರಾರಂಭಿಸಿತು.


ನಾನು ಯಾರು? ನಾನೇ ಪರ್ವತಗಳನ್ನು ನಿರ್ಮಿಸಿದಾತನು. ನಿಮ್ಮಲ್ಲಿ ಮನಸ್ಸನ್ನು ಉಂಟುಮಾಡಿದಾತನು ನಾನೇ. ನಾನು ಜನರಿಗೆ ಮಾತನಾಡಲು ಕಲಿಸಿದೆನು. ಕತ್ತಲೆಯನ್ನು ಬೆಳಕು ಮಾಡಿದೆನು. ಭೂಮಿಯ ಮೇಲಿರುವ ಪರ್ವತಗಳ ಮೇಲೆ ನಾನು ನಡಿಯುತ್ತೇನೆ. ನಾನು ಯಾರು? ನನ್ನ ಹೆಸರು ಸೈನ್ಯಗಳ ದೇವರಾದ ಯೆಹೋವನು.


ಭೂಮ್ಯಾಕಾಶಗಳಲ್ಲಿ ವಿಚಿತ್ರ ಸಂಗತಿಗಳನ್ನು ನಾನು ತೋರಿಸುವೆನು. ಅಲ್ಲಿ ರಕ್ತ, ಬೆಂಕಿ ಮತ್ತು ದಟ್ಟವಾದ ಹೊಗೆಯು ಇರುವುದು.


ಯೆಹೋವನು ಜನರಿಗೆ ನ್ಯಾಯತೀರ್ಪು ಮಾಡುವನು. ಆ ಬಳಿಕ ಯೆಹೋವನು ಜನರನ್ನು ಬೆಂಕಿಯಿಂದಲೂ ಖಡ್ಗದಿಂದಲೂ ನಾಶಮಾಡುವನು. ಯೆಹೋವನು ಅನೇಕಾನೇಕ ಜನರನ್ನು ನಾಶಮಾಡುವನು.


ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.


ಬಳಿಕ, ಆತನ ಉಜ್ವಲವಾದ ಪ್ರಕಾಶವು ಮೋಡಗಳನ್ನು ಛೇದಿಸಿಕೊಂಡು ನುಗ್ಗಲು ಆಲಿಕಲ್ಲಿನ ಮಳೆಯು ಸುರಿಯಿತು; ಮಿಂಚುಗಳು ಹೊಳೆದವು.


ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ಈ ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಈ ಆಲಿಕಲ್ಲಿನ ಮಳೆಯಿಂದ ಸತ್ತರು.


ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಆದ್ದರಿಂದ ಯೆಹೋವನಿಂದ ಬೆಂಕಿ ಹೊರಟುಬಂದು ಅವರಿಬ್ಬರನ್ನು ನಾಶಮಾಡಿತು. ಅವರು ಯೆಹೋವನ ಸನ್ನಿಧಿಯಲ್ಲಿ ಸತ್ತರು.


ಮೋಶೆಯು ತನ್ನ ಕೈಯನ್ನು ಕೆಂಪುಸಮುದ್ರದ ಮೇಲೆ ಚಾಚಿದನು; ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿಯನ್ನು ಬೀಸುವಂತೆ ಮಾಡಿದನು. ಗಾಳಿಯು ರಾತ್ರಿಯೆಲ್ಲಾ ಬೀಸಿತು. ಸಮುದ್ರವು ಇಬ್ಭಾಗವಾಗಿ ಮಧ್ಯದಲ್ಲಿ ಒಣನೆಲವಾಯಿತು.


ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ.


ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು.


ಆಗ ಯೆಹೋವನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಮೇಲೆ ಆಕಾಶದಿಂದ ಉರಿಯುವ ಗಂಧಕದ ಮಳೆಯನ್ನು ಸುರಿಸಿದನು.


ಭೂಮಂಡಲದಲ್ಲೆಲ್ಲಾ ಚಲಿಸಲು ದೇವರು ಮೋಡಗಳಿಗೆ ಆಜ್ಞಾಪಿಸುವನು. ಮೋಡಗಳು ಆತನ ಆಜ್ಞೆಗನುಸಾರವಾಗಿ ಮಾಡುತ್ತವೆ.


ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು