Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 149:5 - ಪರಿಶುದ್ದ ಬೈಬಲ್‌

5 ಆತನ ಭಕ್ತರೇ, ನಿಮ್ಮ ವಿಜಯದಲ್ಲಿ ಉಲ್ಲಾಸಿಸಿರಿ! ಹಾಸಿಗೆಯ ಮೇಲಿರುವಾಗಲೂ ಸಂತೋಷದಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 149:5
12 ತಿಳಿವುಗಳ ಹೋಲಿಕೆ  

ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.


ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.


ನೀವು ಕ್ರಿಸ್ತನನ್ನು ನೋಡದಿದ್ದರೂ ಆತನನ್ನು ಪ್ರೀತಿಸುವಿರಿ. ಈಗ ಆತನನ್ನು ನೋಡದಿದ್ದರೂ ಆತನಲ್ಲಿ ನಂಬಿಕೆಯಿಟ್ಟಿದ್ದೀರಿ. ನಿಮ್ಮಲ್ಲಿ ಹೇಳಲಾಗದಷ್ಟು ಆನಂದವು ತುಂಬಿಕೊಂಡಿದೆ. ಆ ಆನಂದವು ಪ್ರಭಾವಪೂರ್ಣವಾಗಿದೆ.


ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.


ಜಯೋತ್ಸವವು ನೀತಿವಂತರ ಮನೆಗಳಲ್ಲಿ ಕೇಳಿಬರುತ್ತಿದೆ. ಯೆಹೋವನು ತನ್ನ ಮಹಾಶಕ್ತಿಯನ್ನು ಮತ್ತೆ ತೋರಿಸಿದ್ದಾನೆ.


ಈಗ ನಾವು ಆನಂದಿಸುತ್ತಿರುವ ದೇವರ ಕೃಪಾಶ್ರಯಕ್ಕೆ ಕ್ರಿಸ್ತನೇ ನಮ್ಮನ್ನು ನಮ್ಮ ನಂಬಿಕೆಯ ಮೂಲಕ ತಂದಿದ್ದಾನೆ. ದೇವರ ಮಹಿಮೆಯನ್ನು ಹೊಂದುವೆವು ಎಂಬ ನಿರೀಕ್ಷೆಯು ನಮಗಿರುವುದರಿಂದ ನಾವು ಬಹು ಸಂತೋಷವಾಗಿದ್ದೇವೆ.


ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು. ನನ್ನ ಭಕ್ತರು ಉಲ್ಲಾಸಿಸುವರು.


ಹತ್ತು ತಂತಿವಾದ್ಯಗಳನ್ನೂ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ನುಡಿಸುತ್ತಾ ನಿನ್ನ ಪ್ರೀತಿಯ ಕುರಿತು ಮುಂಜಾನೆಯಲ್ಲಿಯೂ ನಿನ್ನ ನಂಬಿಗಸ್ತಿಕೆಯ ಕುರಿತು ರಾತ್ರಿಯಲ್ಲಿಯೂ ಹಾಡುವುದು ಯುಕ್ತವಾಗಿದೆ.


ಯೆಹೋವನೇ ನನಗೆ ಕುರುಬನು. ನನಗೆ ಕೊರತೆಯೇ ಇಲ್ಲ.


ಯೆಹೋವನ ಪವಿತ್ರ ಪೆಟ್ಟಿಗೆಯನ್ನು ನಗರಕ್ಕೆ ತರುವಾಗ ದಾವೀದನು ಮತ್ತು ಇಸ್ರೇಲರೆಲ್ಲರು ಸಂತೋಷದಿಂದ ಆರ್ಭಟಿಸಿದರು; ತುತ್ತೂರಿಯನ್ನು ಊದಿದರು.


ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು