Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 15:2 - ಪರಿಶುದ್ದ ಬೈಬಲ್‌

2 ಅವನು ನಿರ್ದೋಷಿಯೂ ಒಳ್ಳೆಯ ಕಾರ್ಯಗಳನ್ನು ಮಾಡುವವನೂ ಹೃದಯದಿಂದ ಸತ್ಯವನ್ನು ಮಾತಾಡುವವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಸಜ್ಜನನೂ, ನೀತಿವಂತನೂ, ಮನಃಪೂರ್ವಕವಾಗಿ ಸತ್ಯದ ಮಾತುಗಳನ್ನಾಡುವವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನು ಸಜ್ಜನನೂ ನೀತಿವಂತನೂ ಮನಃಪೂರ್ವಕವಾಗಿ ಸತ್ಯವಚನವನ್ನಾಡುವವನೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 15:2
23 ತಿಳಿವುಗಳ ಹೋಲಿಕೆ  

ಒಳ್ಳೆಯವನು ಕ್ಷೇಮವಾಗಿರುವನು; ಕೆಡುಕನಾದರೋ ಇದ್ದಕ್ಕಿದ್ದಂತೆ ಹಾಳಾಗುವನು.


ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.


ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಪ್ರಿಯ ಮಕ್ಕಳೇ, ನಿಮ್ಮನ್ನು ಯಾರೂ ತಪ್ಪುಮಾರ್ಗಕ್ಕೆ ಎಳೆಯದಂತೆ ನೋಡಿಕೊಳ್ಳಿರಿ. ಕ್ರಿಸ್ತನು ನೀತಿವಂತನಾಗಿದ್ದಾನೆ. ಆತನಂತೆ ನೀತಿವಂತನಾಗಿರಲು ಬಯಸುವವನು ಒಳ್ಳೆಯದನ್ನು ಮಾಡಬೇಕು.


ದೇವರಲ್ಲಿ ನೆಲೆಗೊಂಡಿದ್ದೇನೆ ಎಂದು ಹೇಳುವವನು, ಯೇಸು ಜೀವಿಸಿದಂತೆಯೇ ಜೀವಿಸಬೇಕು.


ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.


ತನ್ನನ್ನು ಆರಾಧಿಸುವ ನೀತಿವಂತರು ಯಾರೇ ಆಗಿದ್ದರೂ ಅವರನ್ನು ದೇವರು ಸ್ವೀಕರಿಸಿಕೊಳ್ಳುವನು. ಅವನು ಯಾವ ದೇಶದವನು ಎಂಬುದು ಮುಖ್ಯವಲ್ಲ.


ಆದರೆ ಯಾಕೋಬಿನ ಜನರೇ, ನಾನು ನಿಮಗೆ ಹೇಳಲೇಬೇಕು. ನಿಮ್ಮ ದುಷ್ಟತನದ ನಿಮಿತ್ತ ಯೆಹೋವನು ತನ್ನ ತಾಳ್ಮೆಯನ್ನು ಕಳೆದುಕೊಂಡಿದ್ದಾನೆ. ನೀವು ನ್ಯಾಯವಾದ ರೀತಿಯಲ್ಲಿ ಜೀವಿಸುತ್ತಿದ್ದರೆ ನಾನು ನಿಮಗೆ ಒಳ್ಳೆಯ ಸಂಗತಿಗಳನ್ನು ತಿಳಿಸುತ್ತಿದ್ದೆ.


ಅವರು ದುಷ್ಕೃತ್ಯಗಳನ್ನು ಮಾಡಿಲ್ಲದವರೂ ಶುದ್ಧ ಹೃದಯವುಳ್ಳವರೂ ನನ್ನ ಹೆಸರಿನಲ್ಲಿ ಮೋಸ ಪ್ರಮಾಣ ಮಾಡದವರೂ ವಿಗ್ರಹಗಳನ್ನು ಆರಾಧಿಸದವರೂ ಆಗಿರಬೇಕು.


ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;


ಪ್ರಾಮಾಣಿಕರಾಗಿರುವ ನೀತಿವಂತರು ಹಣಕ್ಕಾಗಿ ಇತರರಿಗೆ ಹಾನಿಮಾಡದವರಾಗಿದ್ದಾರೆ. ಅವರು ಆ ಬೆಂಕಿಯಲ್ಲಿ ವಾಸಿಸುವರು. ಅವರು ಲಂಚ ತೆಗೆದುಕೊಳ್ಳಲು ನಿರಾಕರಿಸುವರು. ಇತರರನ್ನು ಕೊಲೆಮಾಡುವ ಯೋಜನೆಯನ್ನು ಕೇಳಲು ಅವರು ಇಷ್ಟಪಡುವುದಿಲ್ಲ. ಅವರು ಕೆಟ್ಟಕಾರ್ಯಗಳ ಯೋಜನೆಗಳನ್ನು ನೋಡುವುದಿಲ್ಲ.


ಈ ಯೆಹೂದ್ಯರ ವರ್ತನೆಯನ್ನು ನಾನು ಗಮನಿಸಿದೆನು. ಅವರು ಸುವಾರ್ತೆಯ ಸತ್ಯವನ್ನು ಅನುಸರಿಸದೆ ಇರುವುದನ್ನು ಕಂಡು ಅಲ್ಲಿದ್ದ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ನಾನು ಪೇತ್ರನಿಗೆ, “ನೀನು ಯೆಹೂದ್ಯನಾಗಿರುವೆ. ಆದರೆ ನೀನು ಯೆಹೂದ್ಯನಂತೆ ಜೀವಿಸುತ್ತಿಲ್ಲ. ನೀನು ಯೆಹೂದ್ಯನಲ್ಲದವನಂತೆ ಜೀವಿಸುತ್ತಿರುವೆ. ಹೀಗಿರಲು ನೀನು ಯೆಹೂದ್ಯರಲ್ಲದವರಿಗೆ ಯೆಹೂದ್ಯರಂತೆ ಜೀವಿಸಬೇಕೆಂದು ಒತ್ತಾಯಮಾಡುವುದೇಕೆ?” ಎಂದು ಕೇಳಿದೆನು.


ಆದರೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಿಗೂ ಅಂದರೆ ಮೊದಲನೆಯದಾಗಿ ಯೆಹೂದ್ಯರಿಗೆ, ಅನಂತರ ಗ್ರೀಕರಿಗೆ ಸಹ ದೇವರು ಮಹಿಮೆಯನ್ನು, ಘನತೆಯನ್ನು ಮತ್ತು ಶಾಂತಿಯನ್ನು ಕೊಡುವನು.


ಆದರೆ ಹೇಡಿಗಳಿಗೆ, ನಂಬಿಕೆಯಿಲ್ಲದವರಿಗೆ, ಅಸಹ್ಯಕೃತ್ಯ ಮಾಡುವವರಿಗೆ, ಕೊಲೆಗಾರರಿಗೆ, ಲೈಂಗಿಕ ಪಾಪಮಾಡುವವರಿಗೆ, ಮಾಟಮಂತ್ರಗಾರರಿಗೆ, ವಿಗ್ರಹಾರಾಧಕರಿಗೆ, ಸುಳ್ಳುಗಾರರಿಗೆ ಸಿಕ್ಕುವ ಸ್ಥಳ ಬೆಂಕಿಗಂಧಕಗಳು ಉರಿಯುವ ಕೆರೆಯೇ. ಇದು ಎರಡನೆಯ ಮರಣವಾಗಿರುತ್ತದೆ.”


ಕ್ರಿಸ್ತನು ನೀತಿವಂತನೆಂಬುದು ನಿಮಗೆ ತಿಳಿದಿದೆ. ಆದ್ದರಿಂದ ಯೋಗ್ಯವಾದುದನ್ನು ಮಾಡುವ ಜನರೆಲ್ಲರೂ ದೇವರ ಮಕ್ಕಳೆಂಬುದು ನಿಮಗೆ ತಿಳಿದಿದೆ.


ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.


ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.


ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ. ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.


ಸಧರ್ಮಿಯು ಒಳ್ಳೆಯ ರೀತಿಯಲ್ಲಿ ಜೀವಿಸುತ್ತಾನೆ; ಅವನ ಮಕ್ಕಳಿಗೆ ಆಶೀರ್ವಾದವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು