Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 16:4 - ಪರಿಶುದ್ದ ಬೈಬಲ್‌

4 ಆದರೆ ಅನ್ಯದೇವರುಗಳನ್ನು ಆಶ್ರಯಿಸಿಕೊಂಡವರಿಗೆ ಕೇಡುಗಳು ಹೆಚ್ಚಾಗುತ್ತವೆ. ಅವರು ಆ ವಿಗ್ರಹಗಳಿಗೆ ಅರ್ಪಿಸುವ ರಕ್ತದ ಕಾಣಿಕೆಗಳಲ್ಲಿ ನಾನು ಪಾಲುಗಾರನಾಗುವುದಿಲ್ಲ, ಆ ವಿಗ್ರಹಗಳ ಹೆಸರುಗಳನ್ನೂ ನಾನು ಉಚ್ಚರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 16:4
15 ತಿಳಿವುಗಳ ಹೋಲಿಕೆ  

“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.


ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.


ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.


ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು.


“ಕೆಲವು ಜನರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಪೂಜಿಸುತ್ತಾರೆ. ಆದರೆ ಆ ವಿಗ್ರಹಗಳು ಅವರಿಗೆ ಸಹಾಯ ಮಾಡುವುದಿಲ್ಲ.


ನದಿ ದಡದಲ್ಲಿರುವ ನುಣುಪಾದ ಕಲ್ಲುಗಳನ್ನು ಪೂಜಿಸಲು ಆಶಿಸುತ್ತೀರಿ. ಅದರ ಮೇಲೆ ದ್ರಾಕ್ಷಾರಸ ಸುರಿದು ಪೂಜೆ ಮಾಡುತ್ತೀರಿ. ಅವುಗಳಿಗೆ ಬಲಿಯರ್ಪಿಸುತ್ತೀರಿ. ಆದರೆ ಅದರಿಂದ ನಿಮಗೆ ದೊರಕುವುದು ಕಲ್ಲೇ. ಈ ವಿಷಯ ನನ್ನನ್ನು ಸಂತೋಷಗೊಳಿಸುತ್ತದೆಂದು ನೆನಸುತ್ತೀರೋ? ಇಲ್ಲ. ಅವು ನನ್ನನ್ನು ಸಂತೋಷಪಡಿಸುವದಿಲ್ಲ.


ಯೆಹೂದದ ಜನರು ಹೀಗೆ ಮಾಡುತ್ತಿದ್ದಾರೆ; ಮಕ್ಕಳು ಸೌದೆಯನ್ನು ಆರಿಸುತ್ತಾರೆ. ತಂದೆಗಳು ಆ ಸೌಧೆಯಿಂದ ಬೆಂಕಿಯನ್ನು ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದಿ ಸ್ವರ್ಗದ ರಾಣಿಗಾಗಿ ಹೋಳಿಗೆಗಳನ್ನು ಮಾಡುತ್ತಾರೆ. ಈ ಯೆಹೂದದ ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ. ಅವರು ನನ್ನನ್ನು ರೇಗಿಸುವದಕ್ಕಾಗಿಯೇ ಹೀಗೆ ಮಾಡುತ್ತಾರೆ.


ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.


“ಆದರೆ ನೀವು ಯೆಹೋವನನ್ನು ತೊರೆದಿರುವದರಿಂದ ಶಿಕ್ಷಿಸಲ್ಪಡುವಿರಿ. ನೀವು ನನ್ನ ಪವಿತ್ರ ಪರ್ವತವನ್ನು ಮರೆತುಬಿಟ್ಟಿದ್ದೀರಿ. ನೀವು ‘ಅದೃಷ್ಟ’ ಎಂಬ ಸುಳ್ಳುದೇವರನ್ನು ಪೂಜಿಸಲಾರಂಭಿಸಿದ್ದೀರಿ. ನೀವು ‘ಗತಿ’ ಎಂಬ ಸುಳ್ಳುದೇವರನ್ನು ಅವಲಂಭಿಸಿಕೊಂಡಿದ್ದೀರಿ.


ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.


ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು