Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 17:4 - ಪರಿಶುದ್ದ ಬೈಬಲ್‌

4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 17:4
20 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ ಮತ್ತು ಎಚ್ಚರವಾಗಿರಿ! ಸೈತಾನನು ನಿಮ್ಮ ಶತ್ರು. ಗರ್ಜಿಸುವ ಸಿಂಹವು ಯಾರನ್ನು ತಿನ್ನಲಿ ಎಂದು ಹುಡುಕುತ್ತಿರುವಂತೆ ಅವನು ಮನುಷ್ಯನನ್ನು ಹುಡುಕುತ್ತಿದ್ದಾನೆ.


ನೀವಿನ್ನೂ ಆತ್ಮಿಕರಾಗಿಲ್ಲ. ನಿಮ್ಮ ನಡುವೆ ಹೊಟ್ಟೆಕಿಚ್ಚಿದೆ; ವಾಗ್ವಾದಗಳಿವೆ; ಜಗಳಗಳಿವೆ. ನೀವು ಆತ್ಮಿಕರಲ್ಲವೆಂಬುದನ್ನು ಇವು ಸೂಚಿಸುತ್ತವೆ. ನೀವು ಲೋಕದ ಜನರಂತೆಯೇ ವರ್ತಿಸುತ್ತಿದ್ದೀರಿ.


ನಮ್ಮ ಸಹೋದರರು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಸೋಲಿಸಿದರು. ಅವರು ತಮ್ಮ ಜೀವಗಳನ್ನು ಪ್ರೀತಿಸಲಿಲ್ಲ. ಅವರು ಮರಣಕ್ಕೆ ಭಯಪಡಲಿಲ್ಲ.


ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.


ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.


ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.


ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು! ‘ನಿನ್ನ ದೇವರಾದ ಪ್ರಭುವನ್ನೇ ಆರಾಧಿಸಬೇಕು, ಆತನೊಬ್ಬನನ್ನೇ ಸೇವಿಸಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದನು.


ಅದಕ್ಕೆ ಯೇಸು, “‘ನಿನ್ನ ದೇವರಾದ ಪ್ರಭುವನ್ನು ನೀನು ಪರೀಕ್ಷಿಸಕೂಡದು’ ಎಂಬುದಾಗಿಯೂ ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಉತ್ತರಕೊಟ್ಟನು.


ಯೇಸು ಅವನಿಗೆ, “‘ಮನುಷ್ಯನು ಬದುಕುವುದು ಕೇವಲ ರೊಟ್ಟಿಯಿಂದಲ್ಲ, ಮನುಷ್ಯನ ಜೀವಿತವು ದೇವರು ಹೇಳುವ ಪ್ರತಿಯೊಂದು ಮಾತನ್ನು ಅವಲಂಬಿಸಿಕೊಂಡಿದೆ’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂಬುದಾಗಿ ಉತ್ತರಕೊಟ್ಟನು.


ಮಿಡತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.


ಬೇರೆಯವರು ತಮ್ಮ ಪಾಪಗಳನ್ನು ಮರೆಮಾಡಲು ಪ್ರಯತ್ನಿಸಬಹುದು. ಆದರೆ ನಾನು ನನ್ನ ಯಾವ ಪಾಪವನ್ನೂ ಮರೆಮಾಡಲಿಲ್ಲ.


ಹೀಗಿರಲು ದುಷ್ಟತನವನ್ನು ನೀರಿನಂತೆ ಕುಡಿಯುತ್ತಾ ಅಸಹ್ಯನೂ ಕೆಟ್ಟವನೂ ಆಗಿರುವ ಮನುಷ್ಯನು ಎಷ್ಟೋ ಅಶುದ್ಧನಲ್ಲವೇ?


ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!


ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು