Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:50 - ಪರಿಶುದ್ದ ಬೈಬಲ್‌

50 ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

50 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

50 ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

50 ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

50 ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:50
20 ತಿಳಿವುಗಳ ಹೋಲಿಕೆ  

ರಾಜರುಗಳಿಗೆ ಸಹಾಯಮಾಡಿ ಯುದ್ಧಗಳಲ್ಲಿ ಗೆಲ್ಲಿಸುವವನೂ ನೀನೇ. ನಿನ್ನ ಸೇವಕನಾದ ದಾವೀದನನ್ನು ಅವನ ಶತ್ರುಗಳ ಖಡ್ಗಗಳಿಂದ ರಕ್ಷಿಸಿದವನೂ ನೀನೇ.


ಅವನು ನನ್ನ ಹೆಸರಿಗಾಗಿ ಒಂದು ಆಲಯವನ್ನು ನಿರ್ಮಿಸುತ್ತಾನೆ. ಅವನ ರಾಜ್ಯವು ಸದಾಕಾಲಕ್ಕೂ ಇರುವಂತೆ ನಾನು ಮಾಡುತ್ತೇನೆ.


ಆತನು, ತಾನು ಕರೆಯುವ ಜನರ ವಿಷಯವಾಗಿಯೂ ತಾನು ಅವರಿಗೆ ಕೊಡುವ ವರಗಳ ವಿಷಯವಾಗಿಯೂ ತನ್ನ ಮನಸ್ಸನ್ನು ಬದಲಾಯಿಸುವುದೇ ಇಲ್ಲ; ತಾನು ಜನರಿಗೆ ನೀಡಿದ ಕರೆಯನ್ನು ಹಿಂತೆಗೆದುಕೊಳ್ಳುವುದೇ ಇಲ್ಲ.


ನಿನ್ನ ಸೇವಕನಾದ ದಾವೀದನಿಗೆ ನೀನು ವಾಗ್ದಾನ ಮಾಡಿರುವೆ. ನೀನು ಅಭಿಷೇಕಿಸಿರುವ ರಾಜನನ್ನು ತಿರಸ್ಕರಿಸಬೇಡ.


ದೇವರು ಅಬ್ರಹಾಮನಿಗೂ ಅವನ ಸಂತಾನದವರಿಗೂ ವಾಗ್ದಾನಗಳನ್ನು ಮಾಡಿದನು. “ನಿನ್ನ ಸಂತತಿಗಳಿಗೆ” ಎಂದು ದೇವರು ಹೇಳಲಿಲ್ಲ. ಏಕೆಂದರೆ ಅನೇಕ ಜನರು ಎಂಬರ್ಥವನ್ನು ಅದು ಕೊಡುತ್ತದೆ. ಆದರೆ ದೇವರು ಅವನಿಗೆ, “ನಿನ್ನ ಸಂತತಿಗೆ” ಎಂದು ಹೇಳಿದನು. ಅದರರ್ಥವೇನೆಂದರೆ, ಒಬ್ಬನೇ ಒಬ್ಬ ವ್ಯಕ್ತಿ. ಆತನೇ ಕ್ರಿಸ್ತನು.


ತನ್ನ ಸೇವಕನಾದ ದಾವೀದನ ಮನೆತನದಿಂದ ದೇವರು ವೀರರಕ್ಷಕನನ್ನು ನಮಗೆ ಕೊಟ್ಟಿದ್ದಾನೆ.


ನನ್ನ ಸಂತತಿಯವರನ್ನು ಆಶೀರ್ವದಿಸಿ ನಿನ್ನ ಕರುಣೆಯನ್ನು ತೋರಿಸಿದೆ. ನನ್ನ ಸಂತತಿಯವರು ಸದಾಕಾಲ ನಿನ್ನ ಸೇವೆಮಾಡುತ್ತಾರೆಂದು ನೀನು ವಾಗ್ದಾನ ಮಾಡಿರುವೆ. ಯೆಹೋವನೇ, ನೀನಾಗಿಯೇ ನನ್ನ ಸಂತತಿಯವರನ್ನು ಆಶೀರ್ವದಿಸಿದ್ದರಿಂದ ನನ್ನ ಸಂತತಿಯವರು ಸದಾಕಾಲಕ್ಕೂ ಆಶೀರ್ವಾದ ಹೊಂದಿಕೊಳ್ಳುವರು!” ಎಂದು ಪ್ರಾರ್ಥಿಸಿದನು.


ಯೆಹೋವನು ತನ್ನ ಶತ್ರುಗಳನ್ನು ನಾಶಗೊಳಿಸುವನು. ಮಹೋನ್ನತನಾದ ದೇವರು ಪರಲೋಕದಲ್ಲಿ ಜನರಿಗೆ ವಿರುದ್ಧವಾಗಿ ಗುಡುಗುವನು. ಯೆಹೋವನು ಬಹುದೂರದ ದೇಶಗಳಿಗೂ ತೀರ್ಪನ್ನು ಕೊಡುವನು. ಆತನು ತನ್ನ ರಾಜನಿಗೆ ಶಕ್ತಿಯನ್ನು ಕೊಡುವನು. ತಾನು ಅಭಿಷೇಕಿಸಿದ ರಾಜನನ್ನು ಬಲಗೊಳಿಸುವನು.”


ದೇವರ ಮಗನೂ ನಮ್ಮ ಪ್ರಭುವೂ ಆಗಿರುವ ಯೇಸು ಕ್ರಿಸ್ತನ ವಿಷಯವೇ ಆ ಸುವಾರ್ತೆ. ಮನುಷ್ಯತ್ವದ ಮಟ್ಟಿಗೆ ಆತನು ದಾವೀದನ ಕುಟುಂಬದಲ್ಲಿ ಹುಟ್ಟಿದನು. ಆದರೆ ಯೇಸು ಪರಿಶುದ್ಧ ಆತ್ಮನ ಮೂಲಕ ಮಹಾಶಕ್ತಿಯೊಡನೆ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದು ತಾನೇ ದೇವರ ಮಗನೆಂಬುದನ್ನು ತೋರಿಸಿಕೊಟ್ಟನು.


ಯೆಹೋವನು ಸಮುವೇಲನಿಗೆ, “ನೀನು ಸೌಲನಿಗಾಗಿ ಎಷ್ಟುಕಾಲ ಶೋಕಿಸುವೆ? ನಾನು ಸೌಲನನ್ನು ಇಸ್ರೇಲರ ರಾಜತ್ವದಿಂದ ತಿರಸ್ಕರಿಸಿರುತ್ತೇನೆ. ನೀನು ಕೊಂಬಿನಲ್ಲಿ ಎಣ್ಣೆಯನ್ನು ತುಂಬಿಕೊಂಡು ಬಾ. ನಾನು ನಿನ್ನನ್ನು ಇಷಯನೆಂಬ ಮನುಷ್ಯನ ಬಳಿಗೆ ಕಳುಹಿಸುತ್ತೇನೆ. ಇಷಯನು ಬೆತ್ಲೆಹೇಮಿನಲ್ಲಿ ವಾಸಿಸುತ್ತಿದ್ದನು. ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಹೊಸ ರಾಜನನ್ನಾಗಿ ಆರಿಸಿದ್ದೇನೆ” ಎಂದು ಹೇಳಿದನು.


ಯಾಕೆಂದರೆ ನಿನ್ನ ಪ್ರೀತಿಯು ಮುಗಿಲನ್ನು ಮುಟ್ಟುವಷ್ಟೂ ನಿನ್ನ ನಂಬಿಗಸ್ತಿಕೆಯು ಆಕಾಶವನ್ನು ನಿಲುಕುವಷ್ಟೂ ದೊಡ್ಡದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು