Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:8 - ಪರಿಶುದ್ದ ಬೈಬಲ್‌

8 ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:8
17 ತಿಳಿವುಗಳ ಹೋಲಿಕೆ  

ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.


ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.


“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.


ಹೀಗಾಗಿ ಈ ಎಲ್ಲ ಅರಸರ ಸೈನ್ಯಗಳು ಒಟ್ಟುಗೂಡಿದವು. ಈ ಮಹಾಸೈನ್ಯದಲ್ಲಿ ಅಸಂಖ್ಯಾತ ಯೋಧರಿದ್ದರು, ಕುದುರೆಗಳಿದ್ದವು ಮತ್ತು ರಥಗಳಿದ್ದವು. ಸಮುದ್ರತೀರದ ಮರಳು ಕಣಗಳಷ್ಟೇ ಅಸಂಖ್ಯಾತ ಯೋಧರು ಆ ಸೈನ್ಯದಲ್ಲಿರುವಂತೆ ಕಾಣುತ್ತಿತ್ತು.


ದಾವೀದನು ಫಿಲಿಷ್ಟಿಯನಿಗೆ, “ನೀನಾದರೋ ಖಡ್ಗ, ಈಟಿ ಮತ್ತು ಭರ್ಜಿಗಳನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದಿರುವೆ. ನಾನಾದರೋ ಸರ್ವಶಕ್ತನೂ ಇಸ್ರೇಲರ ಸೈನ್ಯಗಳ ದೇವರೂ ಆಗಿರುವ ಯೆಹೋವನ ಹೆಸರಿನಲ್ಲಿ ನಿನ್ನ ಬಳಿಗೆ ಬಂದಿರುವೆ! ನೀನು ಹೀಯಾಳಿಸಿದ್ದು ಆತನನ್ನೇ.


ನೀನು ಯೆಹೋವನನ್ನು ನಿಂದಿಸಲು ನಿನ್ನ ಸಂದೇಶಕರನ್ನು ಬಳಸಿದೆ, ‘ನಾನು ನನ್ನ ಅನೇಕ ರಥಗಳೊಂದಿಗೆ ಉನ್ನತಗಿರಿಗಳಿಗೆ ಬಂದೆನು. ನಾನು ಲೆಬನೋನಿನ ದುರ್ಗಮ ಸ್ಥಳಗಳಿಗೆ ಹೋದೆನು. ನಾನು ಲೆಬನೋನಿನ ಎತ್ತರವಾದ ದೇವದಾರು ಮರಗಳನ್ನೂ ಲೆಬನೋನಿನ ಉತ್ತಮ ತುರಾಯಿಮರಗಳನ್ನೂ ಕಡಿದುರುಳಿಸಿದೆನು.


ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.


ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.


ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.


ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ. ಭುಜಬಲದಿಂದಲೇ ಯಾವ ಯುದ್ಧವೀರನೂ ಸುರಕ್ಷಿತನಾಗಿರಲಾರನು.


ಯುದ್ಧದಲ್ಲಿ ದೊರೆಯುವ ಜಯ ಕುದುರೆಗಳಿಂದಲ್ಲ. ಅವುಗಳ ಬಲವು ನಿನ್ನನ್ನು ರಕ್ಷಿಸಲಾರದು.


ನಮಗೆ ಸಹಾಯವು ಯೆಹೋವನಿಂದಲೇ ಬಂದಿತು. ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿದವನು ಆತನೇ.


ಯುದ್ಧಕ್ಕಾಗಿ ಕುದುರೆಗಳನ್ನು ಸಿದ್ಧಪಡಿಸುತ್ತಾರೆ; ಆದರೆ ಜಯದ ನಿರ್ಧಾರ ಯೆಹೋವನಿಂದಲೇ.


ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು