Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:7 - ಪರಿಶುದ್ದ ಬೈಬಲ್‌

7 ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅರಸನಿಗಿದೆ ಭರವಸೆ ಪ್ರಭುವಿನಲಿ I ಅವನಚಲನು, ಪರಾತ್ಪರನ ಕೃಪೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನ ಕೃಪೆಯ ದೆಸೆಯಿಂದ ಅವನು ಕದಲುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:7
17 ತಿಳಿವುಗಳ ಹೋಲಿಕೆ  

ನಾನು ಯೆಹೋವನನ್ನು ಯಾವಾಗಲೂ ನನ್ನ ಎದುರಿನಲ್ಲೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿರುವುದರಿಂದ ನಾನೆಂದಿಗೂ ಕದಲುವುದಿಲ್ಲ.


ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.


ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು.


ಆತನು ಮತ್ತೆ ಹೇಳುತ್ತಾನೆ: “ನಾನು ದೇವರಲ್ಲಿ ಭರವಸೆ ಇಡುತ್ತೇನೆ.” ಆತನು ಹೇಳುತ್ತಾನೆ: “ನಾನಿಲ್ಲಿದ್ದೇನೆ. ದೇವರು ನನಗೆ ದಯಪಾಲಿಸಿರುವ ಮಕ್ಕಳು ನನ್ನೊಂದಿಗಿದ್ದಾರೆ.”


“ಮನುಷ್ಯಕುಮಾರನಂತಿರುವ ಆ ವ್ಯಕ್ತಿಗೆ ದೊರೆತನ, ಮಹಿಮೆ ಮತ್ತು ಆಳುವ ಸಂಪೂರ್ಣ ಅಧಿಕಾರವನ್ನು ಕೊಡಲಾಯಿತು. ಸಕಲ ಜನರು, ಜನಾಂಗಗಳು ಮತ್ತು ಎಲ್ಲ ಭಾಷೆಯ ಜನರು ಆತನನ್ನು ಸೇವಿಸುವರು. ಆತನ ಅಧಿಕಾರವು ಶಾಶ್ವತ, ಆತನ ರಾಜ್ಯವು ಎಂದಿಗೂ ಅಳಿಯದು.


ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು.


ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು.


ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ, ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.


ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.


ನಿನ್ನ ಖಡ್ಗವನ್ನು ಕಟ್ಟಿಕೊ. ನಿನ್ನ ಮಹಿಮಾವಸ್ತ್ರವನ್ನು ಧರಿಸಿಕೊ.


ರಾಜನು ಎಂದೆಂದಿಗೂ ಪ್ರಸಿದ್ಧನಾಗಿರಲಿ. ಸೂರ್ಯನು ಇರುವವರೆಗೂ ಜನರು ಅವನ ಹೆಸರನ್ನು ಜ್ಞಾಪಿಸಿಕೊಳ್ಳಲಿ. ಅವನಿಂದ ಜನರಿಗೆ ಆಶೀರ್ವಾದವಾಗಲಿ. ಜನರೆಲ್ಲರೂ ಅವನನ್ನು ಆಶೀರ್ವದಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು