Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:14 - ಪರಿಶುದ್ದ ಬೈಬಲ್‌

14 ನೆಲದ ಮೇಲೆ ಸುರಿದ ನೀರಿನಂತೆ ನನ್ನ ಬಲವು ಇಲ್ಲವಾಗಿದೆ; ನನ್ನ ಮೂಳೆಗಳೆಲ್ಲಾ ಸಡಿಲಗೊಂಡಿವೆ; ಹೃದಯವು ಮೇಣದಂತೆ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿದೆ. ನನ್ನ ಹೃದಯ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಹೊಯ್ಯಲ್ಪಟ್ಟ ನೀರಿನಂತಿದ್ದೇನೆ; ನನ್ನ ಎಲುಬುಗಳೆಲ್ಲಾ ಸಡಲಿಹೋಗಿವೆ. ನನ್ನ ಗುಂಡಿಗೆ ಮೇಣದಂತೆ ನನ್ನಲ್ಲಿ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:14
15 ತಿಳಿವುಗಳ ಹೋಲಿಕೆ  

ರಾಜನಾದ ಬೇಲ್ಶಚ್ಚರನು ಬಹಳ ಹೆದರಿದನು. ಭಯದಿಂದ ಅವನ ಮುಖವು ಕಳೆಗುಂದಿತು; ಮತ್ತು ಅವನ ಮೊಣಕಾಲುಗಳು ನಡುಗಿ ಒಂದಕ್ಕೊಂದು ಬಡಿಯುತ್ತಿದ್ದವು. ಅವನ ಕಾಲುಗಳು ತುಂಬ ಬಲಹೀನವಾಗಿ ಅವನಿಗೆ ನಿಲ್ಲಲಾಗಲಿಲ್ಲ.


ನನ್ನ ಜೀವಿತವು ದುಃಖದಲ್ಲಿ ಕೊನೆಗೊಳ್ಳುತ್ತಿದೆ. ನನ್ನ ವರ್ಷಗಳು ನಿಟ್ಟುಸಿರಿನಲ್ಲೇ ಕಳೆದುಹೋಗುತ್ತಿವೆ. ನನ್ನ ಇಕ್ಕಟ್ಟುಗಳು ನನ್ನ ಶಕ್ತಿಯನ್ನು ಕುಂದಿಸುತ್ತಿವೆ. ನನ್ನ ಬಲವು ನನ್ನನ್ನು ಬಿಟ್ಟುಹೋಗುತ್ತಿದೆ.


ನನ್ನ ಹೃದಯವನ್ನು ಕುಂದಿಸಿದವನೂ ದೇವರೇ. ನನ್ನನ್ನು ಭಯಭ್ರಾಂತನನ್ನಾಗಿ ಮಾಡಿದವನೂ ಸರ್ವಶಕ್ತನಾದ ದೇವರೇ.


ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.


ಈಗ ನಿನೆವೆಯು ಖಾಲಿಯಾಯಿತು. ಎಲ್ಲಾ ದೋಚಲ್ಪಟ್ಟಿತು. ನಗರವು ನಾಶವಾಯಿತು. ಜನರು ತಮ್ಮ ಧೈರ್ಯ ಕಳೆದುಕೊಂಡಿದ್ದಾರೆ. ಭಯದಿಂದ ಅವರ ಹೃದಯವು ಕರಗುತ್ತಿದೆ. ಮೊಣಕಾಲುಗಳು ನಡುಗುತ್ತಿದೆ. ಅವರ ದೇಹವು ಅಲ್ಲಾಡುತ್ತಿದೆ. ಭಯದಿಂದ ಅವರ ಮುಖವು ರಕ್ತಹೀನವಾಗಿದೆ.


ಗಾಳಿ ಬಡಿದುಕೊಂಡು ಹೋಗುವ ಹೊಗೆಯಂತೆ ನಿನ್ನ ಶತ್ರುಗಳು ಚದರಿಹೋಗಲಿ. ಬೆಂಕಿಯಲ್ಲಿ ಕರಗಿಹೋಗುವ ಮೇಣದಂತೆ ನಿನ್ನ ಶತ್ರುಗಳು ನಾಶವಾಗಲಿ.


ನನ್ನ ಮೂಳೆಗಳೆಲ್ಲಾ ಎದ್ದುಕಾಣುತ್ತಿವೆ! ಜನರು ನನ್ನನ್ನು ದಿಟ್ಟಿಸಿ ನೋಡುತ್ತಿದ್ದಾರೆ! ಅವರು ನನ್ನನ್ನೇ ನೋಡುತ್ತಿದ್ದಾರೆ!


“ಈಗ ನನ್ನ ಜೀವಿತವು ಕೊನೆಗೊಂಡಿದೆ; ಸಾವು ಸಮೀಪವಾಗಿದೆ. ಸಂಕಟದ ದಿನಗಳು ನನ್ನನ್ನು ಹಿಡಿದುಕೊಂಡಿವೆ.


ಯೇಸುವಿಗೆ ತುಂಬಾ ವೇದನೆಯಿತ್ತು. ಆತನು ಪ್ರಾರ್ಥನೆಯಲ್ಲಿ ಕಷ್ಟಪಟ್ಟು ಹೋರಾಡಿದನು. ಆತನ ಮುಖದಲ್ಲಿ ಬೆವರು ರಕ್ತದೋಪಾದಿಯಲ್ಲಿ ತೊಟ್ಟಿಕ್ಕತೊಡಗಿತು.


ಅವರಿಗೆ, “ನನ್ನ ಆತ್ಮವು ದುಃಖದಿಂದ ತುಂಬಿಹೋಗಿದೆ. ನನ್ನ ಹೃದಯವು ದುಃಖದಿಂದ ಒಡೆದುಹೋಗುವಂತಿದೆ. ನೀವು ನನ್ನೊಂದಿಗೆ ಎಚ್ಚರವಾಗಿದ್ದು ಇಲ್ಲೇ ಇರಿ” ಎಂದು ಹೇಳಿದನು.


ಜನರು ನನ್ನ ಸುತ್ತಲೂ ಗುಂಪುಕೂಡಿದ್ದಾರೆ; ಅವರು ನನ್ನ ಮುಖಕ್ಕೆ ಹೊಡೆದು ಗೇಲಿ ಮಾಡುತ್ತಿದ್ದಾರೆ.


ನನ್ನ ವೈರಿಗಳು ನನ್ನನ್ನು ದೂಷಿಸುವರು. “ಆಹಾ! ನೀನು ಮಾಡುತ್ತಿರುವುದು ನಮಗೆ ಗೊತ್ತು!” ಎನ್ನುವರು.


ನಮ್ಮ ಶತ್ರುಗಳೆಲ್ಲಾ ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು