Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:3 - ಪರಿಶುದ್ದ ಬೈಬಲ್‌

3 ಯೆಹೋವನ ಪರ್ವತವನ್ನು ಹತ್ತುವವರು ಎಂಥವರಾಗಿರಬೇಕು? ಆತನ ಪವಿತ್ರ ಆಲಯದಲ್ಲಿ ನಿಂತುಕೊಳ್ಳುವವರು ಎಂಥವರಾಗಿರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭುವಿನ ಶಿಖರವನು ಏರಬಲ್ಲವನಾರು ? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ನಿಲ್ಲುವದಕ್ಕೆ ಎಂಥವನು ಯೋಗ್ಯನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:3
19 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಪವಿತ್ರ ಗುಡಾರದಲ್ಲಿ ಎಂಥವನು ವಾಸಿಸಬಲ್ಲನು? ನಿನ್ನ ಪವಿತ್ರ ಪರ್ವತದ ಮೇಲೆ ಎಂಥವನು ನೆಲಸಬಲ್ಲನು?


ಆದ್ದರಿಂದ, ನಡುಗಿಸಲಾಗದಿರುವ ರಾಜ್ಯವನ್ನು ನಾವು ಹೊಂದಿರುವುದರಿಂದ ದೇವರಿಗೆ ಕೃತಜ್ಞತೆಯಿಂದಿರಬೇಕು. ಆತನಿಗೆ ಮೆಚ್ಚಿಕೆಕರವಾದ ಆರಾಧನೆಯನ್ನು ಭಯಭಕ್ತಿಯಿಂದ ಮಾಡಬೇಕು.


ನಿನ್ನ ಸೇವಕರನ್ನು ಆರಿಸಿಕೊಂಡಾತನು ನೀನೇ. ನಿನ್ನ ಆಲಯಕ್ಕೆ ಬಂದು ನಿನ್ನನ್ನು ಆರಾಧಿಸಲು ನಮ್ಮನ್ನು ಆರಿಸಿಕೊಂಡಾತನು ನೀನೇ. ನಿನ್ನ ಮಹಾಪವಿತ್ರ ಆಲಯದ ಸೌಭಾಗ್ಯದಿಂದ ನಾವು ಉಲ್ಲಾಸಗೊಂಡಿದ್ದೇವೆ.


ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಾರ್ಗವನ್ನು ಸಿದ್ಧಮಾಡಲು ನಾನು ಮುಂದೂತನನ್ನು ಕಳುಹಿಸುತ್ತೇನೆ. ನೀವು ಹುಡುಕುತ್ತಿರುವ ಧಣಿಯು ತನ್ನ ಆಲಯಕ್ಕೆ ಬರುತ್ತಾನೆ. ಹೌದು, ನಿಮಗೆ ಬೇಕಾಗಿರುವ ಹೊಸ ಒಡಂಬಡಿಕೆಯ ಸಂದೇಶಕನು ನಿಜವಾಗಿಯೂ ಬರುತ್ತಿದ್ದಾನೆ.


ಆತನು ಸೆರೆಯಾಳುಗಳನ್ನು ನಡೆಸಿಕೊಂಡು ಬೆಟ್ಟದ ಮೇಲೇರಿ ಹೋದನು; ತನಗೆ ದ್ರೋಹಮಾಡಿದ ಜನರಿಂದ ಆತನು ಕಷ್ಟಕಾಣಿಕೆಗಳನ್ನು ತೆಗೆದುಕೊಳ್ಳುವನು. ದೇವರಾದ ಯೆಹೋವನು ಮೇಲೇರಿಹೋದದ್ದು ಅಲ್ಲಿ ವಾಸಿಸುವುದಕ್ಕಾಗಿಯೇ.


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳುವುದೇನೆಂದರೆ, ‘ನನ್ನ ಬಳಿಗೆ ಬರುವ ಯಾಜಕರು ನನ್ನನ್ನು ಗೌರವಿಸಬೇಕು. ಯಾಕೆಂದರೆ ನಾನು ಅವರ ಮೂಲಕ ಜನರಿಗೆ ಪ್ರಕಟಿಸಿಕೊಳ್ಳುವೆನು. ನಾನು ಪರಿಶುದ್ಧನೆಂದು ಅವರು ಮತ್ತು ಎಲ್ಲಾ ಜನರು ತಿಳಿದುಕೊಂಡು ನನ್ನನ್ನು ಘನಪಡಿಸಬೇಕು’” ಎಂದು ಹೇಳಿದನು. ಆದ್ದರಿಂದ ಆರೋನನು ತನ್ನ ಪುತ್ರರು ಸತ್ತಿದ್ದರ ಬಗ್ಗೆ ಏನೂ ಹೇಳದೆ ಸುಮ್ಮನಿದ್ದನು.


ದಾವೀದನಗರದಲ್ಲಿ ದಾವೀದನು ತನಗಾಗಿ ಮನೆಗಳನ್ನು ಕಟ್ಟಿಸಿದನು. ಆಮೇಲೆ ಅವನು ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಲು ಒಂದು ಸ್ಥಳವನ್ನು ಏರ್ಪಡಿಸಿ ಗುಡಾರವನ್ನು ನಿರ್ಮಿಸಿದನು.


ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ. ನಾನು ತಂದೆಯ ಬಳಿಗೆ ಇನ್ನೂ ಹಿಂತಿರುಗಿ ಹೋಗಿಲ್ಲ. ಆದರೆ ನೀನು ನನ್ನ ಸಹೋದರರ (ಶಿಷ್ಯರ) ಬಳಿಗೆ ಹೋಗಿ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತಿದ್ದೇನೆ’ ಎಂಬುದಾಗಿ ಹೇಳು” ಎಂದನು.


ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.


ಆಗ ಯೆಹೋವನು ಹೇಳಿದ್ದೇನೆಂದರೆ, “ನರಪುತ್ರನೇ, ಕಿವಿಯಾರೆ ಕೇಳು, ಕಣ್ಣಾರೆ ನೋಡಿ ಅರ್ಥಮಾಡಿಕೊ. ಪವಿತ್ರಾಲಯದ ಎಲ್ಲಾ ವಿಧಿನಿಯಮಗಳನ್ನು ಗಮನವಿಟ್ಟು ಕೇಳು. ಆಲಯದೊಳಕ್ಕೆ ಬರುವ ಪ್ರವೇಶ ದ್ವಾರಗಳನ್ನೂ ಪವಿತ್ರಸ್ಥಳದಿಂದ ಹೊರ ಹೋಗುವ ಪ್ರವೇಶ ದ್ವಾರಗಳನ್ನೂ ಗಮನವಿಟ್ಟು ನೋಡು.


ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲರೊಂದಿಗೆ ವಾಸವಾಗಿರುವ ಅನ್ಯಜನರೊಳಗೆ ತನುಮನಗಳಲ್ಲಿ ಸುನ್ನತಿಯಾಗಿಲ್ಲದವನು ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು