Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:14 - ಪರಿಶುದ್ದ ಬೈಬಲ್‌

14 ಯೆಹೋವನು ತನಗೆ ವಿಧೇಯರಾಗಿರುವವರಿಗೆ ಆಪ್ತಮಿತ್ರನಂತಿರುವನು. ಆತನು ಅವರಿಗೆ ತನ್ನ ಒಡಂಬಡಿಕೆಯನ್ನು ಉಪದೇಶಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತವಿುತ್ರನಂತಿರುವನು; ಅವರಿಗೇ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:14
18 ತಿಳಿವುಗಳ ಹೋಲಿಕೆ  

ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.


ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.


ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು.


ಆತ್ಮಿಕನಲ್ಲದ ವ್ಯಕ್ತಿಯು ದೇವಾರಾತ್ಮನ ವಿಷಯಗಳನ್ನು ಸ್ವೀಕರಿಸಿಕೊಳ್ಳವುದಿಲ್ಲ. ಅವನು ಆ ವಿಷಯಗಳನ್ನು ಮೂರ್ಖತನವೆಂದು ಯೋಚಿಸುತ್ತಾನೆ. ಅವನು ಪವಿತ್ರಾತ್ಮನ ವಿಷಯಗಳನ್ನು ಅರ್ಥಮಾಡಿಕೊಳ್ಳಲಾರನು; ಏಕೆಂದರೆ ಆ ವಿಷಯಗಳನ್ನು ಆತ್ಮಿಕವಾಗಿ ವಿಚಾರಣೆ ಮಾಡಲು ಮಾತ್ರ ಸಾಧ್ಯ.


ನೀವು ನಿಮ್ಮ ಹೃದಯದಲ್ಲಿ ಇನ್ನೂ ಹೆಚ್ಚಿನ ತಿಳುವಳಿಕೆಯನ್ನು ಹೊಂದಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ. ನಾವು ಎಂಥ ನಿರೀಕ್ಷೆಯನ್ನು ಹೊಂದಿಕೊಳ್ಳಬೇಕೆಂದು ದೇವರು ನಮ್ಮನ್ನು ಆರಿಸಿಕೊಂಡನೆಂಬುದನ್ನು ಆಗ ತಿಳಿದುಕೊಳ್ಳುವಿರಿ; ಆತನು ತನ್ನ ಪರಿಶುದ್ಧ ಜನರಿಗೆ ವಾಗ್ದಾನ ಮಾಡಿದ ಆಶೀರ್ವಾದಗಳು ಎಷ್ಟು ಮಹಿಮಾತಿಶಯವಾಗಿವೆ ಎಂಬುದನ್ನು ತಿಳಿದುಕೊಳ್ಳುವಿರಿ.


“ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. “ಜಯಗಳಿಸಿದ ಪ್ರತಿಯೊಬ್ಬ ವ್ಯಕ್ತಿಗೂ ನಾನು ಅಡಗಿಸಿಟ್ಟಿರುವ ಮನ್ನವನ್ನು ಕೊಡುತ್ತೇನೆ. ಅವನಿಗೆ ನಾನು ಬಿಳುಪಾದ ಕಲ್ಲನ್ನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಹೊಸ ಹೆಸರನ್ನು ಕೆತ್ತಲಾಗಿದೆ. ಈ ಹೊಸ ಹೆಸರು ಯಾರಿಗೂ ತಿಳಿದಿಲ್ಲ. ಈ ಕಲ್ಲನ್ನು ಪಡೆದುಕೊಂಡ ವ್ಯಕ್ತಿಯು ಮಾತ್ರ ಹೊಸ ಹೆಸರನ್ನು ತಿಳಿದುಕೊಳ್ಳುತ್ತಾನೆ.


“ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.


ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.


ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.


ಯೆಹೋವನಿಗೆ ವಕ್ರಬುದ್ಧಿಯುಳ್ಳವರು ಅಸಹ್ಯ. ಆದರೆ ಆತನು ಯಥಾರ್ಥರೊಂದಿಗೆ ಸ್ನೇಹದಿಂದಿರುವನು.


ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ.


ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು.


ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು