Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:9 - ಪರಿಶುದ್ದ ಬೈಬಲ್‌

9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:9
14 ತಿಳಿವುಗಳ ಹೋಲಿಕೆ  

ಯೆಹೋವನೇ, ದುಷ್ಟರನ್ನು ಸಂಹರಿಸು. ಆ ಕೊಲೆಗಾರರನ್ನು ನನ್ನಿಂದ ದೂರಮಾಡು.


“ಆಗ ಕೆಟ್ಟಜನರು ಅಲ್ಲಿಂದ ಹೊರಟುಹೋಗುವರು. ಅವರಿಗೆ ನಿತ್ಯದಂಡನೆಯಾಗುವುದು. ಒಳ್ಳೆಯ ಜನರಾದರೋ ನಿತ್ಯಜೀವವನ್ನು ಹೊಂದುವರು.”


“ಅವರು, ‘ಪ್ರಭುವೇ, ನೀನು ಯಾವಾಗ ಹಸಿದಿದ್ದೆ ಮತ್ತು ಬಾಯಾರಿದ್ದೆ? ನೀನು ಯಾವಾಗ ಆಶ್ರಯವಿಲ್ಲದವನಾಗಿದ್ದೆ? ನಿನಗೆ ಯಾವಾಗ ಬಟ್ಟೆಯಿರಲಿಲ್ಲ? ನೀನು ಯಾವಾಗ ಕಾಯಿಲೆ ಬಿದ್ದಿದ್ದೆ ಮತ್ತು ಸೆರೆವಾಸದಲ್ಲಿದ್ದೆ? ಇವೆಲ್ಲವನ್ನು ನಾವು ನೋಡಿಯೂ ನಿನಗೆ ಸಹಾಯ ಮಾಡದೆ ಹೋದದ್ದು ಯಾವಾಗ?’ ಎಂದು ಉತ್ತರಿಸುವರು.


ಭೂಲೋಕದ ಜನರೆಲ್ಲರೂ ಆತನ ಮುಂದೆ ಒಟ್ಟುಗೂಡುತ್ತಾರೆ. ಕುರುಬನು ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸಿದಂತೆ ಆತನು ಅವರನ್ನು ಬೇರ್ಪಡಿಸುವನು;


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


ನೀವು ನನ್ನ ಬಳಿಗೆ ಹಿಂತಿರುಗಿ ಬರುವಿರಿ. ಆಗ ನೀವು ಒಳ್ಳೆಯವರಿಗೂ ಕೆಟ್ಟವರಿಗೂ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವಿರಿ. ಆಗ ನೀವು ದೇವರನ್ನು ಹಿಂಬಾಲಿಸುವವರಿಗೂ ಹಿಂಬಾಲಿಸದೆ ಇರುವವರಿಗೂ ಇರುವ ವ್ಯತ್ಯಾಸವನ್ನು ನೋಡುವಿರಿ.


ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.


ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!


ದಾವೀದನ ಕಾಲದಲ್ಲಿ ಒಮ್ಮೆ ಮೂರು ವರ್ಷಗಳವರೆಗೆ ಬರಗಾಲವಿತ್ತು. ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿದನು. ಆಗ ಯೆಹೋವನು, “ಸೌಲನು ಮತ್ತು ಕೊಲೆಗಾರರಾದ ಅವನ ಕುಟುಂಬದವರು ಈ ಬರಗಾಲಕ್ಕೆ ಕಾರಣ. ಸೌಲನು ಗಿಬ್ಯೋನ್ಯರನ್ನು ಕೊಂದದ್ದರಿಂದ ಈಗಿನ ಬರಗಾಲವು ಬಂದಿದೆ” ಎಂದು ಹೇಳಿದನು.


ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ!


ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು