Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:3 - ಪರಿಶುದ್ದ ಬೈಬಲ್‌

3 ಮಹಾಸೈನ್ಯವೇ ನನಗೆ ಮುತ್ತಿಗೆ ಹಾಕಿದರೂ ನಾನು ಭಯಪಡುವುದಿಲ್ಲ. ಸೈನಿಕರು ನನ್ನ ಮೇಲೆ ಆಕ್ರಮಣ ಮಾಡಿದರೂ ನಾನು ಹೆದರುವುದಿಲ್ಲ. ಯಾಕೆಂದರೆ ನಾನು ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ, ಭರವಸವುಳ್ಳವನಾಗಿಯೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನಗೆ ವಿರೋಧವಾಗಿ ದಂಡುಬಂದಿಳಿದರೂ ನನಗೇನೂ ಭಯವಿಲ್ಲ; ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ ಭರವಸವುಳ್ಳವನಾಗಿಯೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:3
17 ತಿಳಿವುಗಳ ಹೋಲಿಕೆ  

ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.


ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”


ಅಲ್ಲದೆ ನಿಮ್ಮನ್ನು ವಿರೋಧಿಸುವ ಜನರಿಗೆ ನೀವು ಹೆದರಿಕೊಳ್ಳುವುದಿಲ್ಲ. ನಿಮ್ಮ ರಕ್ಷಣೆಗೂ ನಿಮ್ಮ ವೈರಿಗಳ ನಾಶಕ್ಕೂ ಇವುಗಳು ದೇವರಿಂದಾದ ಪ್ರಮಾಣಗಳಾಗಿವೆ.


ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.


ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.


ಒಳ್ಳೆಯವರು ಇದನ್ನು ಕಂಡು ದೇವರಲ್ಲಿ ಭಯಭಕ್ತಿಯುಳ್ಳವರಾಗುವರು. ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು:


ಸಭೆಯ ಮಧ್ಯದಲ್ಲಿ ನಿಂತುಕೊಂಡು ಯೆಹಜೀಯೇಲನು ಅವರಿಗೆ, “ರಾಜನಾದ ಯೆಹೋಷಾಫಾಟನೇ, ನನ್ನ ಮಾತನ್ನು ಕೇಳು. ಜೆರುಸಲೇಮಿನಲ್ಲಿಯೂ ಯೆಹೂದದ ರಾಜ್ಯದಲ್ಲಿಯೂ ವಾಸಿಸುವ ಸರ್ವಜನರೇ, ನನ್ನ ಮಾತನ್ನು ಕೇಳಿರಿ. ಯೆಹೋವನು ನಿಮಗೆ ಹೀಗೆನ್ನುತ್ತಾನೆ: ‘ಆ ದೊಡ್ಡ ಸೈನ್ಯಕ್ಕೆ ಹೆದರಿ ಚಿಂತೆಗೊಳಗಾಗಬೇಡಿ. ಯಾಕೆಂದರೆ ಯುದ್ಧವು ನಿಮ್ಮದಲ್ಲ, ಅದು ದೇವರದೇ!


ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿಬಿಟ್ಟನು.


ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ಒಳ್ಳೆಯವನು ಕೆಟ್ಟಸುದ್ದಿಗೆ ಭಯಪಡಬೇಕಿಲ್ಲ. ಅವನು ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ ಅವನ ಮನಸ್ಸು ಸ್ಥಿರವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು