Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:9 - ಪರಿಶುದ್ದ ಬೈಬಲ್‌

9 ಯೆಹೋವನೇ, ನನಗೆ ವಿಮುಖನಾಗಬೇಡ: ನಿನ್ನ ಸೇವಕನನ್ನು ಕೋಪದಿಂದ ತಳ್ಳಿಬಿಡಬೇಡ. ನನ್ನ ದೇವರೇ, ನನ್ನ ರಕ್ಷಕನು ನೀನೇ. ನನ್ನನ್ನು ಕೈ ಬಿಡಬೇಡ! ತೊರೆದುಬಿಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನು ನನಗೆ ಸಹಾಯಕನಾಗಿಯೇ ಇದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದುಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನಗೆ ವಿಮುಖನಾಗಿರಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ. ನೀನೇ ನನಗೆ ಸಹಾಯಕನಾಗಿದ್ದೆಯಲ್ಲವೇ; ನನ್ನನ್ನು ರಕ್ಷಿಸಿದ ದೇವರೇ, ಕೈಬಿಡಬೇಡ, ತೊರೆದು ಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:9
23 ತಿಳಿವುಗಳ ಹೋಲಿಕೆ  

ನಿನ್ನ ಸೇವಕನಿಗೆ ವಿಮುಖನಾಗಬೇಡ. ನಾನು ಆಪತ್ತಿನಲ್ಲಿದ್ದೇನೆ! ಬೇಗನೆ ನನಗೆ ಸಹಾಯಮಾಡು!


ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ಯೆಹೋವನೇ, ನಾನು ಆಪತ್ತುಗಳಲ್ಲಿರುವಾಗ ನನಗೆ ವಿಮುಖನಾಗಬೇಡ, ನನಗೆ ಕಿವಿಗೊಡು. ಸಹಾಯಕ್ಕಾಗಿ ಮೊರೆಯಿಡುವಾಗ ಬೇಗನೆ ಸದುತ್ತರವನ್ನು ದಯಪಾಲಿಸು.


ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”


“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.


ಅವರನ್ನು ಯೆಹೋವನು ಆಶೀರ್ವದಿಸಿ ಕಾಪಾಡುವನು; ದೇವರು ಅವರನ್ನು ನಿರಪರಾಧಿಗಳೆಂದು ಪ್ರಕಟಿಸುವನು.


ನ್ಯಾಯನೀತಿಗಳುಳ್ಳ ಕಾರ್ಯಗಳನ್ನೇ ನಾನು ಮಾಡಿರುವೆ, ಕೆಡುಕರಿಗೆ ನನ್ನನ್ನು ಒಪ್ಪಿಸಿಕೊಡಬೇಡ.


ಯೆಹೋವ ದೇವರೇ, ನೀನೇ ನನ್ನ ರಕ್ಷಕನು. ಹಗಲಿರುಳು ನಿನಗೆ ಪ್ರಾರ್ಥಿಸುತ್ತಿದ್ದೇನೆ.


ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!


ನೀನು ನಮಗೆ ಮರೆಯಾಗಿರುವುದೇಕೆ? ನೀನು ನಮ್ಮ ನೋವುಗಳನ್ನೂ ತೊಂದರೆಗಳನ್ನೂ ಮರೆತುಬಿಟ್ಟಿರುವೆಯಾ?


ಯೆಹೋವನೇ, ನನ್ನನ್ನು ಇನ್ನೆಷ್ಟುಕಾಲ ಮರೆತಿರುವೆ? ನನ್ನನ್ನು ಶಾಶ್ವತವಾಗಿ ಮರೆತುಬಿಡುವೆಯಾ? ಇನ್ನೆಷ್ಟುಕಾಲ ನನಗೆ ಮರೆಯಾಗಿರುವೆ?


ಅನಂತರ ಸಮುವೇಲನು ವಿಶೇಷವಾದ ಕಲ್ಲನ್ನು ನೆಡಿಸಿದನು. ಯೆಹೋವನು ಮಾಡಿದ ಕಾರ್ಯಗಳನ್ನು ಜನರು ಜ್ಞಾಪಿಸಿಕೊಳ್ಳುತ್ತಿರಲಿ ಎಂಬುದಕ್ಕಾಗಿ ಅವನು ಈ ರೀತಿ ಮಾಡಿದನು. ಸಮುವೇಲನು ಮಿಚ್ಪೆ ಮತ್ತು ಶೇನಿಗಳ ಮಧ್ಯೆ ಕಲ್ಲನ್ನು ನೆಟ್ಟು, “ಯೆಹೋವನು ಇಲ್ಲಿಯವರೆಗೂ ನಮಗೆ ಸಹಾಯ ಮಾಡಿದನು” ಎಂದು ಹೇಳಿ, ಅದಕ್ಕೆ “ಸಹಾಯದ ಕಲ್ಲು” ಎಂದು ಹೆಸರಿಟ್ಟನು.


ಯೆಹೋವನು ಹೇಳುವುದೇನೆಂದರೆ: “ಇಸ್ರೇಲ್ ಜನರೇ, ನಾನು ನಿಮ್ಮ ತಾಯಿಯಾದ ಜೆರುಸಲೇಮಿಗೆ ವಿವಾಹವಿಚ್ಛೇದನ ಕೊಟ್ಟಿರುವುದಾಗಿ ಹೇಳುತ್ತೀರಿ. ಆದರೆ ನಾನು ಆಕೆಗೆ ವಿವಾಹವಿಚ್ಛೇದನ ಕೊಟ್ಟಿರುವುದಕ್ಕೆ ದಾಖಲೆ ಪತ್ರವೆಲ್ಲಿದೆ? ನನ್ನ ಮಕ್ಕಳೇ, ನಿಮ್ಮಲ್ಲಿ ಯಾರಿಗಾದರೂ ನಾನು ಸಾಲ ತೀರಿಸಬೇಕಿತ್ತೇ? ಆ ಸಾಲವನ್ನು ತೀರಿಸಲು ನಾನು ನಿಮ್ಮನ್ನು ಮಾರಿದ್ದೆನೋ, ಇಲ್ಲ. ನಾನು ನಿಮ್ಮನ್ನು ಮಾರಿಬಿಟ್ಟಿದ್ದು ನೀವು ಮಾಡಿದ ದುಷ್ಟತನಕ್ಕಾಗಿಯೇ. ನಿಮ್ಮ ತಾಯಿಯಾದ ಜೆರುಸಲೇಮನ್ನು ಕಳುಹಿಸಿಬಿಟ್ಟದ್ದು ನಿಮ್ಮ ಅಪರಾಧಗಳಿಗಾಗಿಯೇ.


“ನನ್ನ ಮಗನಾದ ಸೊಲೊಮೋನನೇ, ನಿನ್ನ ತಂದೆಯ ದೇವರನ್ನು ನೀನು ಚೆನ್ನಾಗಿ ಅರಿತುಕೋ. ನೀನು ಪೂರ್ಣಹೃದಯದಿಂದಲೂ ಪೂರ್ಣಮನಸ್ಸಿನಿಂದಲೂ ನಿನ್ನ ದೇವರನ್ನು ಸೇವಿಸು. ದೇವರು ಪ್ರತಿಯೊಬ್ಬನ ಹೃದಯ ಮನಸ್ಸುಗಳನ್ನು ನೋಡುತ್ತಾನೆ. ನೀನು ದೇವರ ಸಹಾಯವನ್ನು ಕೇಳಿದರೆ ಆತನು ನಿನ್ನ ಪ್ರಾರ್ಥನೆಯನ್ನು ಲಾಲಿಸುವನು. ಆದರೆ ನೀನು ದೇವರನ್ನು ಬಿಟ್ಟರೆ ಆತನು ನಿನ್ನನ್ನು ಬಿಟ್ಟುಹೋಗುವನು.


ಆದರೆ ನಿಮ್ಮ ಪಾಪಗಳೇ ನಿಮ್ಮನ್ನು ದೇವರಿಂದ ದೂರ ಮಾಡಿರುತ್ತವೆ. ಯೆಹೋವನು ತನ್ನ ಮುಖವನ್ನು ಮರೆಮಾಡಿಕೊಳ್ಳುವಂತೆ ನೀವು ಪಾಪಗಳನ್ನು ಮಾಡಿದ್ದರಿಂದ, ಆತನು ನಿಮಗೆ ಕಿವಿಗೊಡುವುದಿಲ್ಲ.


ಬಂದು ನನ್ನ ಪ್ರಾಣವನ್ನು ರಕ್ಷಿಸು. ನನ್ನ ಶತ್ರುಗಳಿಂದ ನನ್ನನ್ನು ವಿಮೋಚಿಸು.


ನನ್ನ ಜೀವಮಾನವು ಹೊಗೆಯಂತೆ ಕಣ್ಮರೆಯಾಗುತ್ತಿದೆ. ನನ್ನ ಎಲುಬುಗಳು ಬೆಂಕಿಯಂತೆ ಸುಟ್ಟುಹೋಗುತ್ತಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು