Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನ್ನ ಬಂಡೆ. ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ. ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ. ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ ಜನರು ನನ್ನನ್ನು ಪರಿಗಣಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:1
21 ತಿಳಿವುಗಳ ಹೋಲಿಕೆ  

ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು. ನನ್ನ ಆತ್ಮವು ಕುಂದಿಹೋಗುತ್ತಿದೆ. ನೀನು ನನಗೆ ವಿಮುಖನಾಗಬೇಡ. ಸತ್ತು ಸಮಾಧಿಯಲ್ಲಿರುವವರಂತೆ ನನ್ನನ್ನು ಸಾವಿಗೀಡು ಮಾಡಬೇಡ.


ಯೆಹೋವನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ಆಶ್ರಯಗಿರಿಯೂ ನನ್ನ ಗುರಾಣಿಯೂ ನನ್ನ ರಕ್ಷಣಾಬಲವೂ ನನ್ನ ದುರ್ಗವೂ ಆಗಿದ್ದಾನೆ.


ಅವರನ್ನು ಜೀವಂತವಾಗಿ ನುಂಗೋಣ; ಪಾತಾಳವು ನುಂಗುವಂತೆ ಸಂಪೂರ್ಣವಾಗಿ ನುಂಗಿಬಿಡೋಣ.


ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು.


ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


ದೇವರು ನನ್ನ ಆತ್ಮವನ್ನು ಪಾತಾಳಕ್ಕೆ ಹೋಗದಂತೆ ರಕ್ಷಿಸಿದನು. ಆದ್ದರಿಂದ ನಾನು ಜೀವನದಲ್ಲಿ ಮತ್ತೆ ಸುಖಪಡುವಂತಾಯಿತು’ ಎಂದು ಅರಿಕೆಮಾಡಿಕೊಳ್ಳುವನು.


ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ. ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.


ಯೆಹೋವನೇ, ಇದೆಲ್ಲವನ್ನೂ ನೀನು ನೋಡಿರುವೆ, ಆದ್ದರಿಂದ ಸುಮ್ಮನಿರಬೇಡ; ನನ್ನ ಕೈಬಿಡಬೇಡ.


“ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.


ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.


ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.


ನಾನು ಸ್ವರವೆತ್ತಿ ದೇವರಿಗೆ ಮೊರೆಯಿಡುವೆನು. ದೇವರೇ, ಸ್ವರವೆತ್ತಿ ಮೊರೆಯಿಡುವೆನು, ನನಗೆ ಕಿವಿಗೊಡು.


ಅಲೆಗಳು ನನ್ನನ್ನು ಮುಳುಗಿಸಲು ಬಿಡಬೇಡ. ಆಳವಾದ ಹಳ್ಳವು ನನ್ನನ್ನು ಎಳೆದುಕೊಳ್ಳಲು ಬಿಡಬೇಡ. ಸಮಾಧಿಯು ನನ್ನನ್ನು ನುಂಗಲು ಬಿಡಬೇಡ.


ನನ್ನ ರಾಜನೇ, ನನ್ನ ದೇವರೇ, ನಿನಗೇ ಮೊರೆಯಿಡುವೆನು. ನನ್ನ ಪ್ರಾರ್ಥನೆಯನ್ನು ಆಲೈಸು.


ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನನ್ನು ಕೂಗಿಕೊಳ್ಳುವೆನು.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು! ನನ್ನ ಮೊರೆಗೆ ಕಿವಿಗೊಡು! ನನ್ನ ಕಣ್ಣೀರನ್ನು ನೋಡು! ನಾನು ಈ ಜೀವಿತವನ್ನು ಕೇವಲ ಒಬ್ಬ ಪ್ರಯಾಣಿಕನಂತೆ ನಿನ್ನೊಂದಿಗೆ ಸಾಗಿಸುತ್ತಿರುವೆ. ನನ್ನ ಎಲ್ಲಾ ಪೂರ್ವಿಕರಂತೆ, ನಾನು ಇಲ್ಲಿ ಕೇವಲ ಸ್ವಲ್ಪಕಾಲ ಜೀವಿಸುವೆನು.


ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.


ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ! ಆತನ ಪರಿಶುದ್ಧ ಹೆಸರನ್ನು ಕೊಂಡಾಡಿರಿ.


ನನ್ನ ಕಷ್ಟಗಳನ್ನೂ ಚಿಂತೆಗಳನ್ನೂ ಆತನಿಗೆ ಅರಿಕೆಮಾಡಿಕೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು