Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:4 - ಪರಿಶುದ್ದ ಬೈಬಲ್‌

4 ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:4
19 ತಿಳಿವುಗಳ ಹೋಲಿಕೆ  

“ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.


ಆ ನಗರಿಯು ಬೇರೆಯವರಿಗೆ ಕೊಟ್ಟಂತೆ ನೀವೂ ಅವಳಿಗೆ ಕೊಡಿರಿ. ಅವಳು ಮಾಡಿದ್ದಕ್ಕೆ ಪ್ರತಿಯಾಗಿ ಎರಡರಷ್ಟನ್ನು ಅವಳಿಗೆ ಕೊಡಿರಿ. ಅವಳು ಇತರರಿಗೆ ಕೊಟ್ಟ ದ್ರಾಕ್ಷಾರಸಕ್ಕಿಂತ ಎರಡರಷ್ಟು ಗಟ್ಟಿಯಾದ ದ್ರಾಕ್ಷಾರಸವನ್ನು ಅವಳಿಗೆ ಸಿದ್ಧಪಡಿಸಿಕೊಡಿರಿ.


ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ, “ಆ ಸಮಯದಲ್ಲಿ ನಿನ್ನ ಮನಸ್ಸಿಗೆ ಒಂದು ಆಲೋಚನೆಯು ಹೊಳೆಯುವುದು. ನೀನು ಒಂದು ದುಷ್ಟ ಯೋಜನೆಯನ್ನು ಮಾಡುವಿ.


ನಾವು ದೇವರಿಗೆ ವಿರೋಧವಾಗಿ ಪಾಪಮಾಡಿದೆವು. ಆದರೂ ತಕ್ಕ ದಂಡನೆಯನ್ನು ಆತನು ನಮಗೆ ಕೊಡಲಿಲ್ಲ.


ನನ್ನ ಒಡೆಯನೇ, ನೀನು ಪ್ರೀತಿಸ್ವರೂಪನಾಗಿರುವೆ. ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವವನು ನೀನೇ.


ದೇವರೇ, ಅವರನ್ನು ದಂಡಿಸು! ಅವರು ತಮ್ಮ ಬಲೆಗಳಿಗೇ ಸಿಕ್ಕಿಕೊಳ್ಳಲಿ. ಅವರು ನಿನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ. ಅವರ ಅನೇಕ ಅಪರಾಧಗಳ ನಿಮಿತ್ತ ಅವರನ್ನು ದಂಡಿಸು.


“ನಮಗೆ ಒದಗಿದ ಕೆಡುಕು, ಸಂಕಟಗಳಿಗೆ ನಾವೇ ಕಾರಣರು. ನಾವು ಅನೀತಿ ಕೆಲಸಗಳನ್ನು ಮಾಡಿದ್ದೆವು. ಅದಕ್ಕೆ ಅನುಭವಿಸಬೇಕಾಗಿದ್ದ ಶಿಕ್ಷೆಯನ್ನು ನೀನು ನಮಗೆ ವಿಧಿಸಲಿಲ್ಲ. ನಾವು ಅತಿಘೋರವಾದ ಪಾಪಗಳನ್ನು ಮಾಡಿದ್ದಕ್ಕೆ ಅತ್ಯಂತ ಘೋರ ಶಿಕ್ಷೆಯು ನಮಗೆ ದೊರಕ ಬೇಕಿತ್ತು. ಆದರೂ ನೀನು ನಮ್ಮವರಲ್ಲಿ ಕೆಲವರನ್ನು ಸೆರೆಯಿಂದ ತಪ್ಪಿಸಿಕೊಳ್ಳುವಂತೆ ಮಾಡಿದೆ.


ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ.


ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.


ಯೆಹೋವನೇ, ನೀನು ಅವರಿಗೆ ಮುಯ್ಯಿತೀರಿಸು! ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು