Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:1 - ಪರಿಶುದ್ದ ಬೈಬಲ್‌

1 ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ಕರುಣೆತೋರಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ; ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನಿನ್ನ ಮರೆಹೊಕ್ಕಿದ್ದೇನೆ; ನನಗೆ ಎಂದಿಗೂ ಆಶಾಭಂಗಪಡಿಸಬೇಡ. ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:1
11 ತಿಳಿವುಗಳ ಹೋಲಿಕೆ  

ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”


ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರ ಕೊಡು.


ಯೆಹೋವನೇ, ನಾವು ಮತ್ತು ನಮ್ಮ ಪೂರ್ವಿಕರು ನಿನಗೆ ಪಾಪಮಾಡಿದ್ದರಿಂದ ಇದೆಲ್ಲಾ ಆಗುತ್ತಿದೆ. ಜೆರುಸಲೇಮಿನ ಮೇಲೆ ಕೋಪ ಮಾಡುವದನ್ನು ದಯವಿಟ್ಟು ನಿಲ್ಲಿಸು. ಜೆರುಸಲೇಮ್ ನಗರವು ನಿನ್ನ ಪವಿತ್ರವಾದ ಬೆಟ್ಟದ ಮೇಲೆ ಇದೆ. ನೀನು ಸರಿಯಾದದ್ದನ್ನು ಮಾಡುವೆ. ಆದ್ದರಿಂದ ಜೆರುಸಲೇಮಿನ ಮೇಲೆ ಕೋಪಗೊಳ್ಳುವದನ್ನು ದಯವಿಟ್ಟು ನಿಲ್ಲಿಸಿಬಿಡು. ನಮ್ಮ ಸುತ್ತಮುತ್ತಲಿನ ಜನರೆಲ್ಲ ನಮ್ಮನ್ನು ನಿಂದಿಸುವರು ಮತ್ತು ನಮ್ಮ ಜನರನ್ನು ಗೇಲಿ ಮಾಡುವರು.


ನಿನ್ನ ಮಕ್ಕಳಿಗೆ ಅರಸರು ಉಪಾಧ್ಯಾಯರಾಗಿರುವರು. ರಾಜಪುತ್ರಿಯರು ನಿನ್ನ ಮಕ್ಕಳನ್ನು ನೋಡಿಕೊಳ್ಳುವರು. ಆ ಅರಸರೂ ರಾಜಪುತ್ರಿಯರೂ ನಿನಗೆ ಅಡ್ಡಬೀಳುವರು. ನಿನ್ನ ಕಾಲಿನ ಧೂಳಿಗೆ ಮುತ್ತು ಕೊಡುವರು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ. ನನ್ನ ಮೇಲೆ ಭರವಸವಿಡುವವನು ಆಶಾಭಂಗಪಡನು ಎಂದು ಆಗ ನೀನು ತಿಳಿದುಕೊಳ್ಳುವಿ.”


ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.


ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು