Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:13 - ಪರಿಶುದ್ದ ಬೈಬಲ್‌

13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:13
21 ತಿಳಿವುಗಳ ಹೋಲಿಕೆ  

ಅನೇಕ ಜನರು ನನ್ನ ವಿರುದ್ಧವಾಗಿ ಮೆಲುಧ್ವನಿಯಲ್ಲಿ ಮಾತನಾಡುವದು ನನ್ನ ಕಿವಿಗೆ ಬೀಳುತ್ತಿದೆ, ಅದು ನನ್ನನ್ನು ಭಯಗೊಳಿಸುತ್ತಿದೆ. ನನ್ನ ಸ್ನೇಹಿತರು ಸಹ ನನ್ನ ವಿರುದ್ಧ ಮಾತನಾಡುತ್ತಿದ್ದಾರೆ. ನಾನು ಯಾವುದಾದರೂ ತಪ್ಪನ್ನು ಮಾಡಲಿ ಎಂದು ಜನರು ಹೊಂಚುಹಾಕಿ ಕಾದಿದ್ದಾರೆ. “ಅವನು ದುಷ್ಕೃತ್ಯವನ್ನು ಮಾಡಿದ್ದಾನೆಂದು ನಾವು ಸುಳ್ಳು ಹೇಳೋಣ. ಯೆರೆಮೀಯನನ್ನು ನಾವು ವಂಚಿಸಲು ಸಾಧ್ಯವಾಗಬಹುದು. ನಾವು ಅವನನ್ನು ಹಿಡಿದುಕೊಳ್ಳಬಹುದು. ಕೊನೆಗೆ ಅವನನ್ನು ತೊಲಗಿಸಬಹುದು. ನಾವು ಅವನನ್ನು ಹಿಡಿದು ಅವನ ಮೇಲೆ ನಮ್ಮ ಸೇಡನ್ನು ತೀರಿಸಿಕೊಳ್ಳೋಣ” ಎಂದು ಮಾತನಾಡುತ್ತಿದ್ದಾರೆ.


ಮರುದಿನ ಮುಂಜಾನೆ, ಮಹಾಯಾಜಕರೆಲ್ಲರೂ ಮತ್ತು ಹಿರಿಯ ನಾಯಕರೆಲ್ಲರೂ ಯೇಸುವನ್ನು ಕೊಲ್ಲಲು ತೀರ್ಮಾನಿಸಿದರು.


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು.


ಅದಕ್ಕೆ ಅವರು, “ಇವನು ಜುದೇಯ ಪ್ರಾಂತ್ಯದಲ್ಲೆಲ್ಲಾ ಉಪದೇಶಿಸಿ ಕ್ರಾಂತಿ ಎಬ್ಬಿಸಿದ್ದಾನೆ. ಗಲಿಲಾಯದಲ್ಲಿ ಪ್ರಾರಂಭಿಸಿದ ಇವನು ಈಗ ಇಲ್ಲಿಗೂ ಬಂದಿದ್ದಾನೆ” ಎಂದು ಪದೇಪದೇ ಹೇಳಿದರು.


ಮಹಾಯಾಜಕರು ಮತ್ತು ಯೆಹೂದ್ಯರ ಸಮಿತಿಯವರು ಯೇಸುವಿಗೆ ಮರಣದಂಡನೆ ವಿಧಿಸಲು ಅಗತ್ಯವಾದ ಸುಳ್ಳುಸಾಕ್ಷಿಗಳನ್ನು ಹುಡುಕಿದರು.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ಊರ ಹೊರಗೆ ಹೋಗಬೇಡಿರಿ. ರಸ್ತೆಗಳ ಮೇಲೆ ಹೋಗಬೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.


ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.


ನನ್ನ ಪ್ರಾಣವು ಅಪಾಯದಲ್ಲಿದೆ. ನನ್ನ ಶತ್ರುಗಳು ನನ್ನನ್ನು ಮುತ್ತಿಕೊಂಡಿದ್ದಾರೆ. ಅವರು ಸಿಂಹಗಳಂತಿದ್ದಾರೆ. ಅವರ ಹಲ್ಲುಗಳು ಬಾಣಗಳಂತಿವೆ; ಅವರ ನಾಲಿಗೆಗಳು ಹರಿತವಾದ ಖಡ್ಗಗಳಂತಿವೆ.


ಹಗಲಿರುಳು, ಈ ನಗರದಲ್ಲೆಲ್ಲಾ ಅಪರಾಧ ಮತ್ತು ಬಲಾತ್ಕಾರಗಳು ತುಂಬಿಕೊಂಡಿವೆ.


“‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?


ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು