Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:22 - ಪರಿಶುದ್ದ ಬೈಬಲ್‌

22 ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನಂತೂ ಭಯಭ್ರಾಂತನಾಗಿ, “ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನು” ಎಂದು ಅಂದುಕೊಂಡೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನಂತೂ ಭಯಭ್ರಾಂತನಾಗಿ - ನಿನ್ನ ಸಾನ್ನಿಧ್ಯದಿಂದ ತೆಗೆದುಹಾಕಲ್ಪಟ್ಟೆನೆಂದು ಹೇಳಿಕೊಂಡಿದ್ದೆನು; ಆದರೂ ನಾನು ಮೊರೆಯಿಡಲು ನೀನು ಕೇಳಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:22
20 ತಿಳಿವುಗಳ ಹೋಲಿಕೆ  

ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.


ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.


ನೀನು ನನ್ನ ಮೇಲೆ ಕೋಪಗೊಂಡಿದ್ದರಿಂದ ನಿನ್ನ ದಂಡನೆಯು ನನ್ನನ್ನು ಕೊಲ್ಲುತ್ತಿದೆ.


ಯೆಹೋವನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ. ಆತನು ನನ್ನ ಪ್ರಾರ್ಥನೆಯನ್ನು ಸ್ವೀಕರಿಸಿ ಸದುತ್ತರವನ್ನು ದಯಪಾಲಿಸುವನು.


ಯೋಬನೇ, ನೀನು, ‘ದೇವರನ್ನು ಕಾಣಲಾರೆನು’ ಎಂದು ಹೇಳುವಾಗ ಆತನು ನಿನಗೆ ಕಿವಿಗೊಡುವುದಿಲ್ಲ. ನಿನ್ನ ವ್ಯಾಜ್ಯವು ಆತನ ಮುಂದೆ ಇರುವುದರಿಂದ ನೀನು ಆತನಿಗಾಗಿ ಕಾದುಕೊಂಡಿರಬೇಕು.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಆಗ ನಾನು, ‘ನಾನು ನಿನ್ನ ಕಣ್ಣೆದುರಿನಿಂದ ಹೊರದೂಡಲ್ಪಟ್ಟಿದ್ದೇನೆ’ ಅಂದುಕೊಂಡೆನು. ಆದರೂ ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ನೋಡುವೆನು.


ಆದರೆ ಈಗ ಚೀಯೋನ್ ಹೇಳುವುದೇನೆಂದರೆ, “ಯೆಹೋವನು ನನ್ನನ್ನು ಬಿಟ್ಟುಹೋಗಿದ್ದಾನೆ. ನನ್ನ ಒಡೆಯನು ನನ್ನನ್ನು ತೊರೆದಿದ್ದಾನೆ.”


ಆಗ ನಾನು ಬಹು ಭಯಗೊಂಡು, “ಅಯ್ಯೋ, ನಾನು ನಾಶವಾಗುತ್ತಿದ್ದೇನೆ. ನಾನು ದೇವರೊಂದಿಗೆ ಮಾತನಾಡುವಷ್ಟು ಯೋಗ್ಯನಲ್ಲ. ದೇವರೊಂದಿಗೆ ಮಾತಾಡಲು ಯೋಗ್ಯರಲ್ಲದ ಜನರೊಂದಿಗೆ ನಾನು ಜೀವಿಸುತ್ತಿದ್ದೇನೆ. ಆದರೂ ನಾನು ಸರ್ವಶಕ್ತನಾದ ಯೆಹೋವನನ್ನು, ರಾಜಾಧಿರಾಜನನ್ನು ನೋಡಿದೆನು” ಎಂದೆನು.


ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.


ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು.


ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.


ಆಗ ದಾವೀದನು ಅಬೀಗೈಲಳಿಗೆ, “ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ದೇವರೇ ನಿನ್ನನ್ನು ನನ್ನ ಬಳಿಗೆ ಕಳುಹಿಸಿದ್ದಾನೆ.


ದೇವರೇ, ನಿನ್ನಲ್ಲಿ ಭರವಸೆಯಿಟ್ಟಿರುವ ಭಕ್ತರಿಗೆ ನೀನು ಸಹಾಯಮಾಡುವೆ; ಅವರು ನಿನ್ನ ಬಲಗಡೆಯಲ್ಲಿ ಸುರಕ್ಷಿತವಾಗಿರುವರು. ಆದ್ದರಿಂದ ನಿನ್ನ ಭಕ್ತನಾದ ನನ್ನ ಪ್ರಾರ್ಥನೆಗೂ ಕಿವಿಗೊಡು.


ದೇವರಿಗೆ ಸ್ತೋತ್ರವಾಗಲಿ! ಆತನು ನನಗೆ ವಿಮುಖನಾಗದೆ, ನನ್ನ ಪ್ರಾರ್ಥನೆಯನ್ನು ಆಲಿಸಿ, ತನ್ನ ಪ್ರೀತಿಯನ್ನು ತೋರಿದನು!


ಹೌದು, ಎಡಬಿಡದೆ ಬೇಡಿಕೊಳ್ಳುವವನಿಗೆ ದೊರೆಯುವುದು. ಎಡಬಿಡದೆ ಹುಡುಕುವವನು ಕಂಡುಕೊಳ್ಳುವನು. ಒಬ್ಬನು ಎಡಬಿಡದೆ ತಟ್ಟುತ್ತಿದ್ದರೆ, ಅವನಿಗೆ ಬಾಗಿಲು ತೆರೆಯಲ್ಪಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು