Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 33:18 - ಪರಿಶುದ್ದ ಬೈಬಲ್‌

18 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 33:18
13 ತಿಳಿವುಗಳ ಹೋಲಿಕೆ  

ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.”


ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.


ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.


ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.


ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ. ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.


ನಾನಂತೂ ನಿನ್ನ ಶಾಶ್ವತವಾದ ಪ್ರೀತಿಯಲ್ಲಿ ಭರವಸೆಯಿಟ್ಟಿದ್ದೇನೆ. ನಿನ್ನ ರಕ್ಷಣೆಯ ನಿಮಿತ್ತ ನನ್ನ ಹೃದಯವು ಹರ್ಷಿಸುವುದು.


ಕಾಗೆಗಳು ಪ್ರತಿ ಮುಂಜಾನೆ ಮತ್ತು ಸಂಜೆ ಎಲೀಯನಿಗೆ ರೊಟ್ಟಿ ಮತ್ತು ಮಾಂಸವನ್ನು ತಂದುಕೊಡುತ್ತಿದ್ದವು. ಎಲೀಯನು ಹಳ್ಳದ ನೀರನ್ನು ಕುಡಿಯುತ್ತಿದ್ದನು.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು.


ಆತನು ತನ್ನ ಭಕ್ತರಿಗೆ ಆಹಾರವನ್ನು ಒದಗಿಸುವನು; ಆತನು ತನ್ನ ಒಡಂಬಡಿಕೆಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವನು.


ಆಗ ರಾಜನಾದ ಚಿದ್ಕೀಯನು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಡಬೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನ್ನು ತಂದುಕೊಡಬೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನ್ನು ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಬಂಧಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು