Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:17 - ಪರಿಶುದ್ದ ಬೈಬಲ್‌

17 ಯೆಹೋವನಿಗೆ ಪ್ರಾರ್ಥಿಸಿರಿ, ಆತನು ನಿಮಗೆ ಕಿವಿಗೊಡುವನು; ನಿಮ್ಮನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ನೀತಿವಂತರ ಕೂಗನ್ನು ಕೇಳಿ, ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:17
17 ತಿಳಿವುಗಳ ಹೋಲಿಕೆ  

ಅವರು ಕೇಳುವ ಮೊದಲೇ ಅವರಿಗೆ ಏನುಬೇಕು ಎಂಬುದನ್ನು ಅರಿತುಕೊಳ್ಳುವೆನು. ಅವರ ಪ್ರಾರ್ಥನೆ ಮುಗಿಯುವ ಮೊದಲೇ ಅವರಿಗೆ ಸಹಾಯ ಮಾಡುವೆನು.


ನೀತಿವಂತರಿಗೆ ಅನೇಕ ಕಷ್ಟಗಳು ಬಂದರೂ ಯೆಹೋವನು ಅವೆಲ್ಲವುಗಳಿಂದ ಬಿಡಿಸುವನು.


ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ಯೆಹೋವನು ನೀತಿವಂತರನ್ನು ಕಾಪಾಡುವನು. ಆತನು ಅವರ ಪ್ರಾರ್ಥನೆಗಳಿಗೆ ಕಿವಿಗೊಡುವನು.


ಆ ಸಮಯದಲ್ಲಿ ಹಿಜ್ಕೀಯನು ಮರಣಕರವಾದ ರೋಗದಿಂದ ನರಳುತ್ತಾ ಇದ್ದದರಿಂದ ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಹಿಜ್ಕೀಯನೊಂದಿಗೆ ಮಾತನಾಡಿ ಅವನಿಗೊಂದು ಗುರುತನ್ನು ಕೊಟ್ಟನು.


“‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು. ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು.


ಆದರೆ ದೇವರು ಒಬ್ಬ ನಿರಪರಾಧಿಯನ್ನೂ ಕೈಬಿಡುವುದಿಲ್ಲ. ಆತನು ದುಷ್ಟರಿಗೆ ಸಹಾಯ ಮಾಡುವುದಿಲ್ಲ.


ನಾನಂತೂ ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಆಲಯಕ್ಕೆ ಬರುವೆನು, ನಿನ್ನಲ್ಲಿ ಭಯಭಕ್ತಿಯುಳ್ಳವನಾಗಿ ನಿನ್ನ ಪವಿತ್ರ ಆಲಯದ ಕಡೆಗೆ ಅಡ್ಡಬೀಳುವೆನು.


ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ; ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ.


ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.


ನೀತಿವಂತರ ನೆನಪು ಆಶೀರ್ವಾದದಾಯಕ. ಕೆಡುಕರಾದರೋ ಬಹುಬೇಗನೆ ಮರೆಯಲ್ಪಡುವರು.


ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.


ಶತ್ರುಗಳು ಅವರನ್ನು ಸೆರೆಹಿಡಿದರೆ ನಾನು ಅವರನ್ನು ಕೊಂದುಹಾಕಲು ಕತ್ತಿಗೆ ಆಜ್ಞಾಪಿಸುವೆನು. ಹೌದು ನಾನು ಅವರನ್ನು ಗಮನಿಸುತ್ತಾ ಕಾಯುವೆನು. ಅವರಿಗೆ ಒಳ್ಳೆಯದು ಮಾಡುವುದಕ್ಕಾಗಿ ಅಲ್ಲ. ಅವರಿಗೆ ಸಂಕಟ ಕೊಡುವುದಕ್ಕಾಗಿ ಅವರನ್ನು ಕಾಯುತ್ತೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು