Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:4 - ಪರಿಶುದ್ದ ಬೈಬಲ್‌

4 ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:4
20 ತಿಳಿವುಗಳ ಹೋಲಿಕೆ  

ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.


“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.


ನಾನು ಭಯಗೊಂಡಾಗ, ನಿನ್ನಲ್ಲೇ ಭರವಸೆ ಇಡುವೆ.


ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.


“ನಾನು ದೊಡ್ಡ ಆಪತ್ತಿನಲ್ಲಿದ್ದೆನು. ಸಹಾಯಕ್ಕಾಗಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಉತ್ತರ ದಯಪಾಲಿಸಿದನು. ನಾನು ಆಳವಾದ ಸಮಾಧಿಯೊಳಗಿದ್ದೆನು. ನಾನು ನಿನಗೆ ಮೊರೆಯಿಟ್ಟಾಗ, ಯೆಹೋವನೇ, ನೀನು ನನ್ನ ಸ್ವರವನ್ನು ಕೇಳಿದೆ.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ಕ್ರಿಸ್ತನು ಭೂಲೋಕದಲ್ಲಿ ಜೀವಿಸಿದ್ದಾಗ, ದೇವರಲ್ಲಿ ಪ್ರಾರ್ಥಿಸಿ, ಸಹಾಯವನ್ನು ಬೇಡಿದನು. ಆತನನ್ನು ಸಾವಿನಿಂದ ರಕ್ಷಿಸುವ ಶಕ್ತಿ ದೇವರೊಬ್ಬನಿಗೇ ಇತ್ತು. ಆದ್ದರಿಂದ ಆತನು ಗಟ್ಟಿಯಾಗಿ ರೋದಿಸುತ್ತಾ ಕಣ್ಣೀರು ಸುರಿಸುತ್ತಾ ದೇವರಲ್ಲಿ ಪ್ರಾರ್ಥಿಸಿದನು. ದೇವರ ಇಷ್ಟದಂತೆ ಆತನು ಎಲ್ಲವನ್ನೂ ಮಾಡಿದವನಾಗಿದ್ದನು ಮತ್ತು ದೀನಭಾವವನ್ನು ಹೊಂದಿದ್ದನು. ಆದ್ದರಿಂದ ದೇವರು ಆತನ ಪ್ರಾರ್ಥನೆಗಳಿಗೆ ಉತ್ತರಿಸಿದನು.


ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ತಟ್ಟಿರಿ, ಆಗ ನಿಮಗೆ ಬಾಗಿಲು ತೆರೆಯುವುದು.


ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.


ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.


ನನಗೆ ನ್ಯಾಯ ದೊರೆಯಲೆಂದು ಅಪೇಕ್ಷಿಸುವವರು ಸಂತೋಷಪಡಲಿ. “ಯೆಹೋವನು ಎಷ್ಟೋ ದೊಡ್ಡವನು! ಆತನು ತನ್ನ ಸೇವಕನಿಗೆ ಅತ್ಯುತ್ತಮವಾದುದನ್ನೇ ಮಾಡಿದನು” ಎಂದು ಅವರು ಹೇಳುತ್ತಲೇ ಇರಲಿ.


ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. ನನ್ನ ದೇವರೇ, ತಡಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು