Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:5 - ಪರಿಶುದ್ದ ಬೈಬಲ್‌

5 ಆತನನ್ನೇ ದೃಷ್ಟಿಸುವವರು ಸಹಾಯವನ್ನು ಹೊಂದಿಕೊಳ್ಳುವರು. ಅವರಿಗೆ ಆಶಾಭಂಗವಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಅವಮಾನಕ್ಕೆ ಈಡಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನನ್ನೇ ದೃಷ್ಟಿಸಿದವರು ಪ್ರಕಾಶವನ್ನು ಹೊಂದಿದರು; ಅವರ ಮುಖವು ಲಜ್ಜೆಯಿಂದ ಕೆಡುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:5
17 ತಿಳಿವುಗಳ ಹೋಲಿಕೆ  

ನಾವು ಯಾವಗಲೂ ಯೇಸುವನ್ನು ಮಾದರಿಯಾಗಿ ಇಟ್ಟುಕೊಂಡಿರಬೇಕು. ನಮ್ಮ ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆತನೇ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡನು. ಈಗ ಆತನು ದೇವರ ಸಿಂಹಾಸನದ ಬಲಭಾಗದಲ್ಲಿ ಕುಳಿತಿರುವನು.


ನಿನ್ನಲ್ಲಿ ಭರವಸವಿಟ್ಟಿರುವವರು ನಿರಾಶರಾಗುವುದಿಲ್ಲ ದ್ರೋಹಿಗಳಾದರೋ ನಿರಾಶರಾಗುವರು. ಅವರಿಗೆ ಏನೂ ದೊರೆಯುವುದಿಲ್ಲ.


ಯೆಹೋವನೇ, ನನ್ನ ದೀಪವನ್ನು ಹೊತ್ತಿಸುವವನು ನೀನೇ. ನನ್ನ ದೇವರು ನನ್ನ ಸುತ್ತಲೂ ಇರುವ ಕತ್ತಲೆಯನ್ನು ಬೆಳಕನ್ನಾಗಿ ಮಾಡುವನು.


ನೀತಿವಂತರಿಗೋಸ್ಕರ ಬೆಳಕೂ ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಪ್ರಕಾಶಿಸುತ್ತವೆ.


ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.


“ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.


ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು.


ನನ್ನ ದೇವರಾದ ಯೆಹೋವನೇ, ನನ್ನ ಮೇಲೆ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು. ಇಲ್ಲವಾದರೆ, ನಾನು ಸಾಯಲೇಬೇಕಾಗುವುದು!


ಯೆಹೋವನೇ, ತಾವು ನಿಜವಾಗಿಯೂ ಬಲಹೀನರೆಂಬುದನ್ನು ಅವರು ಕಲಿತುಕೊಳ್ಳುವಂತೆ ಮಾಡು; ಆಗ ಅವರು ನಿನ್ನ ಹೆಸರನ್ನು ಆರಾಧಿಸಬೇಕೆನ್ನುವರು.


ಯೆಹೂದ್ಯರಿಗೆ ಆ ದಿನ ಅತ್ಯಂತ ಸಂತೋಷದ ದಿನವಾಗಿತ್ತು. ಆ ದಿನ ಅವರಿಗೆ ಬಹಳ ಆನಂದ ಮತ್ತು ಹರ್ಷದ ದಿನವಾಗಿತ್ತು.


ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, “ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.


ಆದ್ದರಿಂದ ದಾವೀದನು ಮತ್ತು ಅವನ ಜನರು ಕೆಯೀಲಾವನ್ನು ಬಿಟ್ಟುಹೋದರು. ದಾವೀದನ ಜೊತೆಯಲ್ಲಿ ಸುಮಾರು ಆರುನೂರು ಜನರಿದ್ದರು. ದಾವೀದನು ಮತ್ತು ಅವನ ಜನರು ಸ್ಥಳದಿಂದ ಸ್ಥಳಕ್ಕೆ ಹೋಗುತ್ತಿದ್ದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂಬುದು ಸೌಲನಿಗೆ ತಿಳಿಯಿತು. ಆದ್ದರಿಂದ ಸೌಲನು ಆ ನಗರಕ್ಕೆ ಹೋಗಲಿಲ್ಲ.


ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ನನಗೆ ಕೃತಜ್ಞತಾಯಜ್ಞವನ್ನು ಅರ್ಪಿಸುವವನೇ ನನ್ನನ್ನು ಸನ್ಮಾನಿಸುವವನು. ಆದರೆ ನೀತಿವಂತನಾಗಿ ಜೀವಿಸುವವನಿಗೆ ನನ್ನ ರಕ್ಷಣಾಶಕ್ತಿಯನ್ನು ತೋರಿಸುವೆನು.”


ನಾನು ಸಹಾಯಕ್ಕಾಗಿ ನಿನಗೆ ಮೊರೆಯಿಟ್ಟಾಗ ನೀನು ನನಗೆ ಸದುತ್ತರವನ್ನು ದಯಪಾಲಿಸಿದೆ; ನನಗೆ ಬಲವನ್ನು ಅನುಗ್ರಹಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು