Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:8 - ಪರಿಶುದ್ದ ಬೈಬಲ್‌

8 ಯೆಹೋವನು ಎಷ್ಟು ಒಳ್ಳೆಯವನೆಂಬುದನ್ನು ಅನುಭವದಿಂದಲೇ ತಿಳಿದುಕೊಳ್ಳಿರಿ. ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಭಾಗ್ಯವಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:8
17 ತಿಳಿವುಗಳ ಹೋಲಿಕೆ  

ನಿನ್ನ ನುಡಿಗಳು ನನ್ನ ಬಾಯಲ್ಲಿ ಜೇನಿಗಿಂತಲೂ ಸಿಹಿಯಾಗಿವೆ.


ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು. ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.” ಇದು ಯೆಹೋವನ ನುಡಿ.


ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.


ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!


ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.


ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.


ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು.


ನನ್ನ ಪ್ರಿಯೇ, ನನ್ನ ವಧುವೇ, ನನ್ನ ತೋಟವನ್ನು ಪ್ರವೇಶಿಸಿದ್ದೇನೆ. ನನ್ನ ಸುಗಂಧದ್ರವ್ಯದೊಡನೆ ಗೋಲರಸವನ್ನು ಶೇಖರಿಸಿದ್ದೇನೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿದ್ದೇನೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ತಿನ್ನಿರಿ, ಕುಡಿಯಿರಿ! ಪ್ರೀತಿಯಿಂದ ಮತ್ತರಾಗಿ!


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ನನ್ನ ಪ್ರಿಯನೇ, ಕಾಡುಮರಗಳ ನಡುವೆ ಇರುವ ಒಂದು ಸೇಬಿನ ಮರದಂತೆ ನೀನು ಯುವಕರಲ್ಲೆಲ್ಲಾ ಶ್ರೇಷ್ಠನು. ನಾನು ಅವನ ನೆರಳಲ್ಲಿ ಕುಳಿತುಕೊಂಡು ಸಂತೋಷಿಸಿದೆ; ಅವನ ಫಲವು ನನ್ನ ನಾಲಿಗೆಗೆ ಸಿಹಿಯಾಗಿತ್ತು.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


ನನ್ನನ್ನು ಎಲ್ಲಾ ತೊಂದರೆಗಳಿಂದ ಕಾಪಾಡಿದ ದೂತನೇ ಆತನು. ಈ ಹುಡುಗರನ್ನು ಆಶೀರ್ವದಿಸಬೇಕೆಂದು ನಾನು ಆತನಲ್ಲಿ ಪ್ರಾರ್ಥಿಸುವೆನು. ಇಂದಿನಿಂದ ಈ ಮಕ್ಕಳು ನನ್ನ ಹೆಸರನ್ನೇ ಹೊಂದಿಕೊಳ್ಳುವರು. ನನ್ನ ಪೂರ್ವಿಕರಾದ ಅಬ್ರಹಾಮ್ ಮತ್ತು ಇಸಾಕರ ಹೆಸರನ್ನು ಇವರು ಹೊಂದಿಕೊಳ್ಳುವರು. ಇವರು ಭೂಮಿಯ ಮೇಲೆ ಬೆಳೆದು ದೊಡ್ಡ ಕುಟುಂಬಗಳಾಗುವಂತೆಯೂ ದೊಡ್ಡ ಜನಾಂಗಗಳಾಗುವಂತೆಯೂ ನಾನು ಪ್ರಾರ್ಥಿಸುವೆನು.”


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು