Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:20 - ಪರಿಶುದ್ದ ಬೈಬಲ್‌

20 ನನ್ನ ವೈರಿಗಳು ಶಾಂತಿಸ್ಥಾಪನೆಗಾಗಿ ಯಾವ ಆಲೋಚನೆಗಳನ್ನೂ ಮಾಡುತ್ತಿಲ್ಲ. ಈ ದೇಶದಲ್ಲಿ ಶಾಂತಿಯಿಂದಿರುವ ಜನರಿಗೆ ಕೇಡುಮಾಡಲು ಅವರು ಒಳಸಂಚುಗಳನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರಾಗಿ ಬಾಳುವವರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:20
15 ತಿಳಿವುಗಳ ಹೋಲಿಕೆ  

ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.


ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.


ಆತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಆತನ ಶಬ್ದ ಕೇಳಿಸುವುದಿಲ್ಲ.


ಕೊನೆಗೆ ಅವರು, “ದಾನಿಯೇಲನ ಮೇಲೆ ದೋಷಾರೋಪಣೆ ಮಾಡುವದಕ್ಕೆ ನಮಗೆ ಕಾರಣ ಸಿಕ್ಕುವುದೇ ಇಲ್ಲ. ಅವನ ದೇವರ ಧರ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿಯೇ ಏನಾದರೂ ತಪ್ಪು ಹುಡುಕಬೇಕು” ಎಂದು ಮಾತನಾಡಿಕೊಂಡರು.


ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.”


ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು ನಾಶನದ ಸಂಚುಗಳನ್ನೇ ಮಾಡುವುದು.


ನನ್ನ ವೈರಿಗಳು ಬಲೆಗಳನ್ನು ಒಡ್ಡಿದ್ದಾರೆ; ನನ್ನ ನಾಶನದ ಕುರಿತು ಅವರು ಮಾತಾಡುತ್ತಿದ್ದಾರೆ; ದಿನವೆಲ್ಲಾ ಕುತಂತ್ರವನ್ನು ಮಾಡುತ್ತಿದ್ದಾರೆ.


ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು