Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:8 - ಪರಿಶುದ್ದ ಬೈಬಲ್‌

8 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:8
18 ತಿಳಿವುಗಳ ಹೋಲಿಕೆ  

“ಎಚ್ಚರಿಕೆ! ತಿನ್ನುವುದರಲ್ಲಿಯೂ ಕುಡಿದು ಮತ್ತರಾಗುವುದರಲ್ಲಿಯೂ ಪ್ರಾಪಂಚಿಕ ಚಿಂತೆಗಳಲ್ಲಿಯೂ ಮಗ್ನರಾಗಿರಬೇಡಿರಿ. ಇಲ್ಲವಾದರೆ, ನಿಮ್ಮ ಹೃದಯಗಳು ಭಾರವಾಗಿರುವಾಗಲೇ ಅಂತ್ಯವು ಫಕ್ಕನೆ ಬಂದೀತು.


ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.


ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


“ಆದರೆ ವಿಪತ್ತು ನಿನಗೆ ಪ್ರಾಪ್ತವಾಗುವದು. ಅವು ಯಾವಾಗ ಸಂಭವಿಸುತ್ತದೋ ನಿನಗೆ ತಿಳಿಯದು. ಆದರೆ ವಿಪತ್ತು ಸಂಭವಿಸುವದು. ನೀನು ಏನೇ ಮಾಡಿದರೂ ಆ ವಿಪತ್ತನ್ನು ತಡೆಯಲಾಗದು.


ನನ್ನನ್ನು ಬಂಧಿಸಲು ನನ್ನ ವೈರಿಗಳು ನನಗೆ ಬಲೆಯೊಡ್ಡಿದ್ದಾರೆ. ನನ್ನನ್ನು ಬೀಳಿಸಲು ಕುಣಿ ತೋಡಿದರು. ಆದರೆ ಅವರೇ ಅದರಲ್ಲಿ ಬಿದ್ದುಹೋದರು.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ಆದರೆ ಸೌಲನು ದಾವೀದನನ್ನು ಕೊಲ್ಲಬೇಕೆಂದಿದ್ದನು. ದಾವೀದನಿಗೆ ಮೋಸಮಾಡಲು ಸೌಲನು ಒಂದು ಉಪಾಯವನ್ನು ಹೂಡಿ ಅವನಿಗೆ, “ನನ್ನ ಹಿರಿಯ ಮಗಳಾದ ಮೇರಬಳು ಇದ್ದಾಳೆ. ನಾನು ಅವಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆಗ ನೀನೊಬ್ಬ ಬಲಶಾಲಿಯಾದ ಸೈನಿಕನಾಗುವೆ. ನೀನು ನನಗೆ ಮಗನಂತಿರುವೆ! ನಂತರ ನೀನು ಹೋಗಿ ಯೆಹೋವನ ಯುದ್ಧಗಳಲ್ಲಿ ಹೋರಾಡು” ಎಂದು ಹೇಳಿದನು. ಆದರೆ ಇದೊಂದು ಮೋಸವಾಗಿತ್ತು. “ಈಗ ನಾನು ದಾವೀದನನ್ನು ಕೊಲ್ಲುವ ಅಗತ್ಯವಿಲ್ಲ. ನನಗೋಸ್ಕರ ಫಿಲಿಷ್ಟಿಯರೇ ಅವನನ್ನು ಕೊಲ್ಲುವಂತೆ ಮಾಡುತ್ತೇನೆ” ಎಂಬದು ಸೌಲನ ನಿಜವಾದ ಆಲೋಚನೆಯಾಗಿತ್ತು.


ಆದರೆ ದೇವರು ಇದ್ದಕ್ಕಿದ್ದಂತೆ ತನ್ನ ಬಾಣಗಳನ್ನು ಎಸೆಯುವನು. ಆಗ ಆ ದುಷ್ಟರು ಗಾಯಗೊಳ್ಳುವರು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು