Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:1 - ಪರಿಶುದ್ದ ಬೈಬಲ್‌

1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:1
22 ತಿಳಿವುಗಳ ಹೋಲಿಕೆ  

“ಅವರಿಗೆ ದೇವರಲ್ಲಿ ಭಯವಾಗಲಿ ಗೌರವವಾಗಲಿ ಇಲ್ಲ.”


ಪ್ರೀತಿ ಮತ್ತು ನಂಬಿಗಸ್ತಿಕೆಗಳು ದೋಷಕ್ಕೆ ಪ್ರಾಯಶ್ಚಿತ್ತವಾಗಿವೆ. ಯೆಹೋವನಲ್ಲಿ ಭಯಭಕ್ತಿಯಿಂದಿರಿ, ಆಗ ನೀವು ದುಷ್ಟತನದಿಂದ ದೂರವಾಗುವಿರಿ.


ನನ್ನ ಬಲವಾಗಿರುವ ಯೆಹೋವನೇ, ನಿನ್ನನ್ನೇ ಪ್ರೀತಿಸುವೆನು!


ಇದು ಯೇಸು ಕ್ರಿಸ್ತನ ಪ್ರಕಟನೆ. ದೇವರು ಬೇಗನೆ ಸಂಭವಿಸಲಿರುವುದನ್ನು ತನ್ನ ಸೇವಕರಿಗೆ ತೋರ್ಪಡಿಸುವುದಕ್ಕಾಗಿ ಯೇಸುವಿಗೆ ಇವುಗಳನ್ನು ಪ್ರಕಟಿಸಿದನು. ಕ್ರಿಸ್ತನು ತನ್ನ ಸೇವಕನಾದ ಯೋಹಾನನಿಗೆ ಇವುಗಳನ್ನು ತೋರಿಸಲು ತನ್ನ ದೂತನನ್ನು ಕಳುಹಿಸಿದನು.


ಯೇಸು ಕ್ರಿಸ್ತನ ಸೇವಕನೂ ಯಾಕೋಬನ ಸಹೋದರನೂ ಆಗಿರುವ ಯೂದನು ದೇವರಿಂದ ಕರೆಯಲ್ಪಟ್ಟವರಿಗೂ ತಂದೆಯಾದ ದೇವರಿಗೆ ಪ್ರಿಯರಾದವರಿಗೂ ಯೇಸು ಕ್ರಿಸ್ತನಲ್ಲಿ ಸುರಕ್ಷಿತವಾಗಿಡಲ್ಪಟ್ಟವರಿಗೂ ಬರೆಯವ ಪತ್ರ.


ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.


ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.


ದೇವರ ಸೇವಕನಾದ ಮತ್ತು ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಬರೆಯುವ ಪತ್ರ. ದೇವರು ಆರಿಸಿಕೊಂಡ ಜನರ ನಂಬಿಕೆಯನ್ನು ವೃದ್ಧಿಗೊಳಿಸುವುದಕ್ಕಾಗಿ ಮತ್ತು ಅವರಿಗೆ ಸತ್ಯವನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಲಾಯಿತು. ದೇವರ ಸೇವೆಯನ್ನು ಹೇಗೆ ಮಾಡಬೇಕೆಂಬುದನ್ನು ಆ ಸತ್ಯವು ತೋರ್ಪಡಿಸುತ್ತಿದೆ.


ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


ಬಾಲಕನೊಬ್ಬನು ಒಳ್ಳೆಯವನೋ ಕೆಟ್ಟವನೋ ಎಂಬುದು ಅವನ ನಡತೆಯಿಂದಲೇ ತೋರಿಬರುವುದು.


ಯೆಹೋವನಲ್ಲಿ ಭಯಭಕ್ತಿಯಿರುವವನು ಪಾಪವನ್ನು ದ್ವೇಷಿಸುತ್ತಾನೆ. ಜ್ಞಾನವೆಂಬ ನಾನು ಗರ್ವವನ್ನೂ ಅಹಂಭಾವವನ್ನೂ ದುರ್ಮಾರ್ಗತನವನ್ನೂ ಸುಳ್ಳಾಡುವ ಬಾಯನ್ನೂ ದ್ವೇಷಿಸುತ್ತೇನೆ.


ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನನ್ನನ್ನು ಕೊಲ್ಲಬೇಕೆಂದಿರುವ ಶತ್ರುಗಳನ್ನು ಸೋಲಿಸು. ನಾನು ನಿನ್ನ ಸೇವಕನಾಗಿರುವೆ.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ಯೆಹೋವನೇ, ತಲತಲಾಂತರಗಳಿಂದಲೂ ನೀನೇ ನಮ್ಮ ವಾಸಸ್ಥಾನ.


ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.


ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.


ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.


ಸೌಲನು ತನ್ನ ಅಧಿಕಾರಿಗಳಿಗೆ ಅಪ್ಪಣೆ ಮಾಡಿದನು. ಸೌಲನು ಅವರಿಗೆ, “ದಾವೀದನೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ‘ರಾಜನು ನಿನ್ನನ್ನು ಇಷ್ಟಪಟ್ಟಿದ್ದಾನೆ. ಅವನ ಅಧಿಕಾರಿಗಳೂ ನಿನ್ನನ್ನು ಇಷ್ಟಪಡುತ್ತಾರೆ. ನೀನು ಅವನ ಮಗಳನ್ನು ಮದುವೆಯಾಗಬೇಕು’ ಎಂದು ಹೇಳಿರಿ” ಎಂಬುದಾಗಿ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು