Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:6 - ಪರಿಶುದ್ದ ಬೈಬಲ್‌

6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:6
29 ತಿಳಿವುಗಳ ಹೋಲಿಕೆ  

ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.


ಹೌದು, ದೇವರ ಐಶ್ವರ್ಯವು ಎಷ್ಟೋ ಅಪಾರವಾಗಿದೆ! ದೇವರ ವಿವೇಕಕ್ಕೂ ಜ್ಞಾನಕ್ಕೂ ಕೊನೆಯೇ ಇಲ್ಲ! ದೇವರು ನಿರ್ಧರಿಸುವ ಸಂಗತಿಗಳನ್ನು ಯಾವನೂ ವಿವರಿಸಲಾರನು. ದೇವರ ಮಾರ್ಗಗಳನ್ನು ಯಾವನೂ ಅರ್ಥಮಾಡಿಕೊಳ್ಳಲಾರನು.


ನೀನು ಸಮುದ್ರದಲ್ಲಿ ಮಾರ್ಗಮಾಡಿದೆ; ಆಳವಾದ ಜಲರಾಶಿಗಳನ್ನು ದಾಟಿದೆ. ಆದರೆ ನಿನ್ನ ಹೆಜ್ಜೆಯ ಗುರುತು ಕಾಣಲೇ ಇಲ್ಲ.


ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.


ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ. ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ. ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.


ಯೆಹೋವನು ಪ್ರತಿಯೊಬ್ಬನಿಗೂ ಒಳ್ಳೆಯವನಾಗಿದ್ದಾನೆ. ಆತನು ತಾನು ನಿರ್ಮಿಸಿದವುಗಳಿಗೆಲ್ಲಾ ಕನಿಕರ ತೋರಿಸುವನು.


ಕಾರ್ಮೋಡಗಳು ಆತನನ್ನು ಕವಿದುಕೊಂಡಿವೆ. ನೀತಿಯೂ ನ್ಯಾಯವೂ ಆತನ ರಾಜ್ಯದ ಬಲವಾಗಿವೆ.


ಯೆಹೋವನೇ, ನೀನು ಅಂತಹ ಮಹಾಕಾರ್ಯಗಳನ್ನು ಮಾಡಿರುವೆ. ನಿನ್ನ ಆಲೋಚನೆಗಳನ್ನು ಗ್ರಹಿಸಿಕೊಳ್ಳಲು ನಮ್ಮಿಂದಾಗದು.


ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.


ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು.


ದೇವರಾದ ಯೆಹೋವನು ಜ್ಞಾನಿಯೆಂಬುದನ್ನು ನೀನು ಖಂಡಿತವಾಗಿಯೂ ಕೇಳಿರುವೆ. ಆತನು ತಿಳಿದಿರುವ ಪ್ರತಿಯೊಂದನ್ನೂ ಕಲಿತುಕೊಳ್ಳಲು ಜನರಿಗೆ ಸಾಧ್ಯವಿಲ್ಲ. ಆತನು ಆಯಾಸಗೊಳ್ಳುವದಿಲ್ಲ; ಆತನಿಗೆ ವಿಶ್ರಾಂತಿಯ ಅವಶ್ಯವಿಲ್ಲ. ಭೂಮಿಯಲ್ಲಿರುವ ದೂರ ಸ್ಥಳಗಳನ್ನೆಲ್ಲಾ ಮಾಡಿದವನು ಆತನೇ. ಆತನು ನಿರಂತರಕ್ಕೂ ಜೀವಿಸುವಾತನಾಗಿದ್ದಾನೆ.


ದೇವರು ಪ್ರಾಣಿಗಳಿಗೂ ಪಕ್ಷಿಯ ಮರಿಗಳಿಗೂ ಆಹಾರ ಕೊಡುವನು.


“ಸರ್ವಶಕ್ತನಾದ ದೇವರು ಮಹೋನ್ನತನೇ ಸರಿ! ನಾವು ಆತನನ್ನು ಅರ್ಥಮಾಡಿಕೊಳ್ಳಲು ನಮಗೆ ಸಾಧ್ಯವಿಲ್ಲ. ದೇವರು ಮಹಾ ಬಲಿಷ್ಠನಾಗಿದ್ದರೂ ನಮಗೆ ಒಳ್ಳೆಯವನೂ ನ್ಯಾಯವಂತನೂ ಆಗಿದ್ದಾನೆ; ಆತನು ನಮ್ಮನ್ನು ಹಿಂಸಿಸಲು ಇಷ್ಟಪಡುವುದಿಲ್ಲ.


ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನೀನು ನನ್ನನ್ನು ಗುರಿಯನ್ನಾಗಿ ಮಾಡಿಕೊಂಡದ್ದೇಕೆ? ನಾನು ನಿನಗೆ ಸಮಸ್ಯೆಯಾದೆನೇ?


ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.


ಹೊರವಲಯದ ಪಾಳೆಯದಲ್ಲಿದ್ದ ಮತ್ತು ಕೋಟೆಯಲ್ಲಿದ್ದ ಎಲ್ಲಾ ಫಿಲಿಷ್ಟಿಯ ಸೈನಿಕರು ಭಯದಿಂದ ನಡುಗಿದರು. ಹೊಲದಲ್ಲಿದ್ದ ಸೈನಿಕರು ಸಹ ಹೆದರಿಕೊಂಡಿದ್ದರು. ಅತ್ಯಂತ ಧೈರ್ಯವಂತರಾದ ಸೈನಿಕರು ಸಹ ಹೆದರಿಕೊಂಡಿದ್ದರು. ಭೂಮಿಯು ನಡುಗಿದ್ದರಿಂದ ಫಿಲಿಷ್ಟಿಯ ಸೈನಿಕರು ನಿಜವಾಗಿಯೂ ಹೆದರಿಕೊಂಡರು.


“ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.


ಭಯಂಕರವಾದ ಗುಡುಗೂ ಆಲಿಕಲ್ಲಿನ ಮಳೆಯೂ ಬಹಳ ಹೆಚ್ಚಾದವು. ಇವುಗಳನ್ನು ನಿಲ್ಲಿಸಬೇಕೆಂದು ದೇವರನ್ನು ಪ್ರಾರ್ಥಿಸಿರಿ; ನಿಮ್ಮನ್ನು ಈ ದೇಶದಿಂದ ಕಳುಹಿಸಿಕೊಡುತ್ತೇನೆ; ತಡೆಯುವುದಿಲ್ಲ” ಎಂದು ಹೇಳಿದನು.


ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರ ತಲೆಮಾರುಗಳವರೆಗೂ ಮುಂದುವರಿಯುವವು.


ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.


ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು