Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:12 - ಪರಿಶುದ್ದ ಬೈಬಲ್‌

12 ದುಷ್ಟರು ನೀತಿವಂತರ ವಿರುದ್ಧ ದುರಾಲೋಚನೆಗಳನ್ನು ಮಾಡುವರು. ನೀತಿವಂತರ ಮೇಲೆ ತಮಗಿರುವ ಕೋಪದಿಂದ ಅವರು ಹಲ್ಲುಕಡಿಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದುಷ್ಟನು ನೀತಿವಂತನಿಗೆ ವಿರೋಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ, ಆದರೆ ಅವನನ್ನು ಕಂಡು ಹಲ್ಲು ಕಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:12
16 ತಿಳಿವುಗಳ ಹೋಲಿಕೆ  

ಪಾಪಮಾಡಲು ಯೋಚಿಸುವವರಿಗೆ ಸಂಕಟವು ಒದಗುವದು. ಇವರು ಹಾಸಿಗೆಯ ಮೇಲೆ ಬಿದ್ದುಕೊಂಡು ಪಾಪಮಾಡಲು ಯೋಚಿಸುತ್ತಾರೆ. ಬೆಳಿಗ್ಗೆ ಸೂರ್ಯ ಮೂಡಲು ತಾವು ಯೋಚಿಸಿದ ಪಾಪವನ್ನು ಕಾರ್ಯಗತ ಮಾಡುತ್ತಾರೆ. ಯಾಕೆ? ಯಾಕೆಂದರೆ ಅವರಿಗೆ ತಮ್ಮ ಇಷ್ಟಪ್ರಕಾರ ನಡೆದುಕೊಳ್ಳಲು ಬಲವಿದೆ.


ಅವರು ಕೆಟ್ಟಮಾತಿನಿಂದ ನನ್ನನ್ನು ಹಾಸ್ಯಮಾಡಿದರು; ನನ್ನ ಮೇಲಿನ ಕೋಪದಿಂದ ಹಲ್ಲುಕಡಿದರು.


ಆ ಚಿಕ್ಕ ಕೊಂಬು ನಿತ್ಯಹೋಮಗಳನ್ನು ತಡೆಯುವ ಪಾಪವನ್ನು ಮಾಡಿತು. ಅದು ಒಳ್ಳೆಯತನವನ್ನು (ಸತ್ಯ, ಧರ್ಮವನ್ನು) ನೆಲಕ್ಕೆ ತಳ್ಳಿತು. ಇದೆಲ್ಲವನ್ನು ಮಾಡಿ ಆ ಚಿಕ್ಕ ಕೊಂಬು ತನ್ನ ಇಷ್ಟಾರ್ಥವನ್ನು ಸಾಧಿಸುವದರಲ್ಲಿ ಜಯ ಪಡೆಯಿತು.


ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ.


ಅಂದಿನಿಂದ ಯೇಸುವನ್ನು ಹಿಡಿದುಕೊಡಲು ಯೂದನು ಸಮಯ ಕಾಯುತ್ತಿದ್ದನು.


ಆ ಸಭೆಯಲ್ಲಿ ಅವರು ಯೇಸುವನ್ನು ಉಪಾಯದಿಂದ ಬಂಧಿಸಿ ಕೊಲ್ಲಲು ಸಮಾಲೋಚಿಸಿದರು.


ಈ ಅರಸನು ಬಹಳ ಪ್ರಬಲನಾಗಿರುವನು. ಆದರೆ ಆ ಪ್ರಾಬಲ್ಯ ಸ್ವಶಕ್ತಿಯಿಂದ ಬಂದುದಲ್ಲ. ಈ ಅರಸನು ಅಪಾರ ವಿನಾಶವನ್ನುಂಟು ಮಾಡುವನು. ಅವನು ಕೈಕೊಂಡ ಪ್ರತಿಯೊಂದು ಕೆಲಸದಲ್ಲಿ ಅವನಿಗೆ ಜಯ ಲಭಿಸುವುದು. ಅವನು ಬಲಿಷ್ಠರನ್ನೂ ದೇವಭಕ್ತರನ್ನೂ ನಾಶಮಾಡುವನು.


ಮೊರ್ದೆಕೈ ಯೆಹೂದ್ಯ ಜನಾಂಗಕ್ಕೆ ಸೇರಿದವನೆಂದು ಹಾಮಾನನಿಗೆ ತಿಳಿದುಬಂತು. ಕೇವಲ ಮೊರ್ದೆಕೈಯನ್ನು ಮಾತ್ರವೇ ಕೊಲ್ಲದೆ ಅಹಷ್ವೇರೋಷನ ಸಾಮ್ರಾಜ್ಯದಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೊಲ್ಲುವ ಉಪಾಯವನ್ನು ಹೂಡಿದನು.


ಸೌಲನು, “ನಾನು ದಾವೀದನನ್ನು ಬಲೆಗೆ ಬೀಳಿಸಲು ಮೀಕಲಳನ್ನು ಬಳಸಿಕೊಳ್ಳುತ್ತೇನೆ. ದಾವೀದನನ್ನು ಮದುವೆಯಾಗಲು ನಾನು ಮೀಕಲಳಿಗೆ ಅವಕಾಶ ಕೊಡುತ್ತೇನೆ. ನಂತರ ಅವನನ್ನು ಕೊಲ್ಲಲು ಫಿಲಿಷ್ಟಿಯರಿಗೆ ಬಿಟ್ಟುಕೊಡುತ್ತೇನೆ” ಎಂದು ಯೋಚಿಸಿದನು. ಹೀಗೆ ಸೌಲನು ಎರಡನೆಯ ಸಲ ದಾವೀದನಿಗೆ, “ನೀನು ನನ್ನ ಮಗಳನ್ನು ಇಂದು ಮದುವೆಯಾಗು” ಎಂದು ಹೇಳಿದನು.


ಕೆಡುಕರಾದರೋ ನೀತಿವಂತರಿಗೆ ಕೇಡುಮಾಡಲು ಹೊಂಚುಹಾಕುವರು.


ಆಕೆ ಆ ಮೇಲಂಗಿಯನ್ನು ತನ್ನ ಗಂಡನೂ ಯೋಸೇಫನಿಗೆ ಧಣಿಯೂ ಆಗಿದ್ದ ಪೋಟೀಫರನು ಬರುವ ತನಕ ಇಟ್ಟುಕೊಂಡಿದ್ದಳು.


ಮೊರ್ದೆಕೈ ತನಗೆ ಅಡ್ಡಬೀಳದಿರುವುದರಿಂದ ಮತ್ತು ಗೌರವಿಸದಿರುವುದರಿಂದ ಹಾಮಾನನು ಬಹಳ ಕೋಪಗೊಂಡನು.


ಆದರೆ ನಾನು ಹೆಬ್ಬಾಗಿಲ ಬಳಿಯಲ್ಲಿ ಕುಳಿತುಕೊಳ್ಳುತ್ತಿರುವ ಮೊರ್ದೆಕೈಯನ್ನು ನೋಡುವಾಗ ನನ್ನ ಸಂತೋಷವೆಲ್ಲವೂ ಮಾಯವಾಗುತ್ತದೆ” ಎಂದು ಹೇಳಿದನು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು