Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:15 - ಪರಿಶುದ್ದ ಬೈಬಲ್‌

15 ಆದರೆ ಅವರ ಬಿಲ್ಲುಗಳು ಮುರಿದುಹೋಗುತ್ತವೆ. ಅವರ ಖಡ್ಗಗಳು ಅವರ ಹೃದಯಗಳಿಗೇ ನಾಟಿಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:15
18 ತಿಳಿವುಗಳ ಹೋಲಿಕೆ  

ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ.


ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.”


ಸೈನ್ಯವು ಬಂದು ಬಾಬಿಲೋನನ್ನು ನಾಶಮಾಡುವುದು. ಬಾಬಿಲೋನಿನ ಸೈನಿಕರನ್ನು ವಶಪಡಿಸಿಕೊಳ್ಳಲಾಗುವುದು. ಅವರ ಬಿಲ್ಲುಗಳನ್ನು ಮುರಿಯಲಾಗುವುದು. ಏಕೆಂದರೆ ಯೆಹೋವನು ಜನರನ್ನು ಅವರು ಮಾಡುವ ದುಷ್ಕೃತ್ಯಗಳಿಗಾಗಿ ಶಿಕ್ಷಿಸುತ್ತಾನೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಸಂಪೂರ್ಣವಾಗಿ ಕೊಡುತ್ತಾನೆ.


ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.


ಅಹೀತೋಫೆಲನು ತನ್ನ ಸಲಹೆಯನ್ನು ಇಸ್ರೇಲರು ಸ್ವೀಕರಿಸಲಿಲ್ಲವೆಂಬುದನ್ನು ತಿಳಿದು ತನ್ನ ಹೇಸರಕತ್ತೆಯ ಮೇಲೆ ತಡಿಯನ್ನು ಹಾಕಿ ತನ್ನ ಸ್ವಂತ ಊರಿನಲ್ಲಿದ್ದ ಮನೆಗೆ ಹೋದನು. ಅವನು ತನ್ನ ಕುಟುಂಬಕ್ಕೆ ಯೋಜನೆಗಳನ್ನು ಮಾಡಿದನು. ನಂತರ ಅವನೇ ನೇಣು ಹಾಕಿಕೊಂಡು ಸತ್ತನು. ಅಹೀತೋಫೆಲನನ್ನು ಜನರು ಅವನ ತಂದೆಯ ಸಮಾಧಿಯ ಬಳಿ ಸಮಾಧಿ ಮಾಡಿದರು.


“ಆ ಸಮಯದಲ್ಲಿ ನಾನು ಇಸ್ರೇಲರಿಗೋಸ್ಕರವಾಗಿ ಅಡವಿಯ ಮೃಗಗಳೊಂದಿಗೂ ಆಕಾಶದ ಪಕ್ಷಿಗಳೊಂದಿಗೂ ನೆಲದ ಮೇಲೆ ಹರಿದಾಡುವ ಜಂತುಗಳೊಂದಿಗೂ ಒಡಂಬಡಿಕೆ ಮಾಡುವೆನು. ನಾನು ಯುದ್ಧದ ಆಯುಧ, ಬಿಲ್ಲು, ಖಡ್ಗಗಳನ್ನು ತುಂಡು ಮಾಡುವೆನು. ಆ ದೇಶದೊಳಗೆ ಯಾವ ಆಯುಧವೂ ಇರದು. ಆಗ ಇಸ್ರೇಲಿನ ಜನರು ನಿಶ್ಟಿಂತೆಯಿಂದ ಮಲಗುವರು.


ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.


ಸೌಲನು ತನ್ನ ಅಯುಧವಾಹಕನಿಗೆ, “ನಿನ್ನ ಖಡ್ಗದಿಂದ ಇರಿದು ನನ್ನನ್ನು ಕೊಂದುಬಿಡು. ಆಗ, ಈ ಪರದೇಶೀಯರು ನನ್ನನ್ನು ಗಾಯಗೊಳಿಸುವುದಕ್ಕಾಗಲಿ ಅಪಹಾಸ್ಯ ಮಾಡುವುದಕ್ಕಾಗಲಿ ಸಾಧ್ಯವಾಗುವುದಿಲ್ಲ” ಎಂದನು. ಆದರೆ ಸೌಲನ ಆಯುಧವಾಹಕನು ನಿರಾಕರಿಸಿದನು. ಸೌಲನ ಸಹಾಯಕನು ಬಹಳ ಭಯಗೊಂಡಿದ್ದನು. ಆದ್ದರಿಂದ ಸೌಲನು ತನ್ನ ಸ್ವಂತ ಖಡ್ಗದಿಂದಲೇ ಇರಿದು ಆತ್ಮಹತ್ಯೆ ಮಾಡಿಕೊಂಡನು.


ಶಕ್ತಿಶಾಲಿ ಯೋಧರ ಬಿಲ್ಲುಗಳು ಮುರಿದುಹೋಗುತ್ತವೆ. ಬಲಹೀನರು ಶಕ್ತಿವಂತರಾಗುವರು.


ಅವರು ತಮ್ಮ ಖಡ್ಗಗಳನ್ನು ಉಪಯೋಗಿಸಿ ಅಶ್ಶೂರದವರನ್ನು ಆಳುವರು. ಅವರು ನಿಮ್ರೋದನ ದೇಶವನ್ನು ಆಳುವರು. ಕೈಯಲ್ಲಿ ಖಡ್ಗವನ್ನು ಹಿಡಿದುಕೊಂಡು ಆ ಜನರನ್ನು ಆಳುವರು. ಆದರೆ ಇಸ್ರೇಲಿನ ರಾಜನು ಅಶ್ಶೂರದವರಿಂದ ನಮ್ಮನ್ನು ರಕ್ಷಿಸುವನು. ಅವರು ನಮ್ಮ ದೇಶದೊಳಕ್ಕೆ ಬಂದು ನಮ್ಮ ಪ್ರದೇಶವನ್ನು ತುಳಿದು ಹಾಳುಮಾಡುವಾಗ ನಾವು ರಕ್ಷಿಸಲ್ಪಡುವೆವು.


ಅದೇ ಸಮಯದಲ್ಲಿ ಇತರ ಸಂಸ್ಥಾನಗಳಲ್ಲಿದ್ದ ಯೆಹೂದ್ಯರು ತಾವು ಬಲಹೊಂದುವಂತೆ ಒಟ್ಟಾಗಿ ಸೇರಿ ಒಗ್ಗಟ್ಟಿನಲ್ಲಿದ್ದು ತಮ್ಮ ವೈರಿಗಳನ್ನು ಸಂಪೂರ್ಣವಾಗಿ ನಿರ್ನಾಮ ಮಾಡಿದರು. ಹೀಗೆ ಒಟ್ಟು ಎಪ್ಪತ್ತೈದು ಸಾವಿರ ಜನರು ಹತಿಸಲ್ಪಟ್ಟರು. ಆದರೆ ಅವರ ಆಸ್ತಿಯನ್ನು ಸೂರೆ ಮಾಡಲಿಲ್ಲ.


ಯಾಕೆಂದರೆ ಆ ದಿವಸದಲ್ಲಿ ಯೆಹೂದ್ಯರು ತಮ್ಮ ಶತ್ರುಗಳನ್ನು ಸದೆಬಡಿದರು. ಆ ದಿವಸದಲ್ಲಿ ಅವರಿಗೆ ಶೋಕದ ಬದಲಾಗಿ ಸಂತಸವು ಒದಗಿಬಂತು. ಆ ದಿವಸದಲ್ಲಿ ಅವರ ರೋಧನವು ಹರ್ಷಧ್ವನಿಯಾಗಿ ಮಾರ್ಪಟ್ಟಿತು. ಮೊರ್ದೆಕೈಯು ಎಲ್ಲಾ ಯೆಹೂದ್ಯರಿಗೆ ಪತ್ರ ಬರೆಯಿಸಿದನು. ಆ ದಿವಸದಲ್ಲಿ ಹಬ್ಬವನ್ನು ಆಚರಿಸಿ ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕೊಡಬೇಕು ಎಂಬುದಾಗಿ ಬರೆಯಿಸಿದನು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.


ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು