Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:21 - ಪರಿಶುದ್ದ ಬೈಬಲ್‌

21 ದುಷ್ಟನು ತಾನು ಮಾಡಿದ ಸಾಲವನ್ನು ತೀರಿಸುವುದಿಲ್ಲ. ನೀತಿವಂತನಾದರೋ ಬೇರೆಯವರಿಗೆ ಉದಾರವಾಗಿ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು. ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:21
18 ತಿಳಿವುಗಳ ಹೋಲಿಕೆ  

ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ದಯಾವಂತನಿಗೂ ಉದಾರಿಗೂ ಒಳ್ಳೆಯದಾಗುವುದು. ನ್ಯಾಯವಾದ ವ್ಯಾಪಾರಸ್ಥನಿಗೆ ಒಳ್ಳೆಯದಾಗುವುದು.


ಬಡವನು ಐಶ್ವರ್ಯವಂತನಿಗೆ ಗುಲಾಮನಾಗಿದ್ದಾನೆ. ಸಾಲ ತೆಗೆದುಕೊಳ್ಳುವವನು ಸಾಲಕೊಡುವವನಿಗೆ ಸೇವಕನಾಗಿದ್ದಾನೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ಅವನು ಬಡವರಿಗೆ ಉದಾರವಾಗಿ ಕೊಡುವನು. ಅವನ ಸತ್ಕಾರ್ಯಗಳು ಶಾಶ್ವತವಾಗಿವೆ. ಅವನು ಗೌರವವನ್ನು ಪಡೆದುಕೊಳ್ಳುವನು.


ಯೆಹೋವನು ತನ್ನ ಆಶೀರ್ವಾದಗಳೆಂಬ ಭಂಡಾರವನ್ನೇ ನಿಮಗೆ ತೆರೆಯುವನು. ಕಾಲಕ್ಕೆ ತಕ್ಕಹಾಗೆ ಮಳೆ ಸುರಿಯುವಂತೆ ಮಾಡುವನು; ನಿಮ್ಮ ಕಾರ್ಯವನ್ನೆಲ್ಲಾ ಸಫಲ ಮಾಡುವನು. ಇತರ ದೇಶಗಳಿಗೆ ಸಾಲ ಕೊಡಲು ನಿಮ್ಮಲ್ಲಿ ಹಣವಿರುವುದು; ಬೇರೆಯವರಿಂದ ಸಾಲ ತೆಗೆದುಕೊಳ್ಳುವ ಅವಶ್ಯಕತೆ ನಿಮಗೆ ಬಾರದು.


ನಿಮ್ಮನ್ನು ಬೇಡುವ ಪ್ರತಿಯೊಬ್ಬನಿಗೆ ಕೊಡಿ. ಒಬ್ಬನು ನಿಮ್ಮಿಂದ ಏನಾದರೂ ತೆಗೆದುಕೊಂಡಾಗ ಅದನ್ನು ಹಿಂದಕ್ಕೆ ಕೊಡೆಂದು ಕೇಳಬೇಡಿ.


ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.


ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.


ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.


ಆದರೆ ಒಬ್ಬ ಒಳ್ಳೆಯ ನಾಯಕನು ಒಳ್ಳೆಯ ಕಾರ್ಯಗಳನ್ನು ಮಾಡಲು ಆಲೋಚಿಸುವನು. ಅಂಥವನು ಒಳ್ಳೆಯ ನಾಯಕನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು