Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:22 - ಪರಿಶುದ್ದ ಬೈಬಲ್‌

22 ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೆಹೋವನ ಆಶೀರ್ವಾದವು ಯಾರಿಗಿರುವದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವದೋ ಅವರು ತೆಗೆದುಹಾಕಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೆಹೋವ ದೇವರು ಆಶೀರ್ವದಿಸುವವರು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವರು; ಆದರೆ ದೇವರ ಶಾಪಕ್ಕೆ ಗುರಿಯಾಗುವವರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:22
18 ತಿಳಿವುಗಳ ಹೋಲಿಕೆ  

ದುಷ್ಟರ ಮನೆಯ ಮೇಲೆ ಯೆಹೋವನ ಶಾಪವಿರುವುದು; ಆದರೆ ನೀತಿವಂತರ ಮನೆಯ ಮೇಲೆ ಆತನ ಆಶೀರ್ವಾದವಿರುವುದು.


ಯಾವನಾದರೂ ಪ್ರಭುವನ್ನು ಪ್ರೀತಿಸದಿದ್ದರೆ, ಅವನು ಜೀವದಿಂದ ಬೇರ್ಪಟ್ಟು ನಿತ್ಯನಾಶನ ಹೊಂದಲಿ! ಪ್ರಭುವೇ ಬಾ!


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ದುಷ್ಟರಾದರೋ ನಾಶವಾಗುವರು. ಯೆಹೋವನಲ್ಲಿ ಮೊರೆಯಿಡುವವರಾದರೋ ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ಪಡೆದುಕೊಳ್ಳುವರು.


ಆದರೆ ನೀತಿವಂತರಾಗಲು ಧರ್ಮಶಾಸ್ತ್ರವನ್ನು ಅವಲಂಬಿಸಿಕೊಂಡಿರುವವರು ಶಾಪಗ್ರಸ್ತರಾಗಿದ್ದಾರೆ. ಏಕೆಂದರೆ ಪವಿತ್ರ ಗ್ರಂಥವು ಹೇಳುವಂತೆ, “ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಯಮಗಳನ್ನೆಲ್ಲಾ ಕೈಕೊಂಡು ನಡೆಯಬೇಕು. ಅವುಗಳಿಗೆ ಎಂದಾದರೂ ಅವಿಧೇಯನಾದವನು ಶಾಪಗ್ರಸ್ತನಾಗಿದ್ದಾನೆ.”


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಆತನ ಚಿತ್ತಾನುಸಾರವಾಗಿ ಜೀವಿಸುವವರೆಲ್ಲರು ಧನ್ಯರಾಗಿದ್ದಾರೆ.


ನೀನು ಗರ್ವಿಷ್ಠರನ್ನು ಖಂಡಿಸುವೆ. ನಿನ್ನ ಆಜ್ಞೆಗಳಿಗೆ ವಿಧೇಯರಾಗದ ಅವರು ಶಾಪಗ್ರಸ್ತರಾಗಿದ್ದಾರೆ.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಪರಲೋಕವನ್ನೂ ಭೂಲೋಕವನ್ನೂ ಸೃಷ್ಟಿಮಾಡಿದಾತನು ಆತನೇ.


ಯೆಹೋವನು ನ್ಯಾಯವನ್ನು ಪ್ರೀತಿಸುವನು. ಆತನು ತನ್ನ ಭಕ್ತರನ್ನು ತೊರೆದುಬಿಡದೆ ಅವರನ್ನು ಯಾವಾಗಲೂ ಕಾಪಾಡುವನು. ದುಷ್ಟರನ್ನಾದರೋ ಆತನು ನಾಶಮಾಡುವನು.


ಯೆಹೋವನು ತನ್ನ ಭಕ್ತರನ್ನು ಅವರ ಜೀವಮಾನ ಪೂರ್ತಿ ಕಾಪಾಡುವನು. ಅವರ ಭೂಮಿಯು ಸದಾಕಾಲ ಅವರದೇ ಆಗಿರುವುದು.


ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸಮಾಧಾನವನ್ನು ಅನುಭವಿಸುವರು.


ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.


ಅಭಿವೃದ್ಧಿಯಾಗುತ್ತಿರುವ ಮೂರ್ಖನನ್ನು ನಾನು ನೋಡಿದ್ದೇನೆ. ಇದ್ದಕ್ಕಿದ್ದಂತೆ ಅವನ ಮನೆಯು ಶಾಪಗ್ರಸ್ತವಾಯಿತು.


ನಿಮ್ಮ ದೇವರಾದ ಯೆಹೋವನು ಹೇಳಿದ ಆಜ್ಞೆಗಳಿಗನುಸಾರವಾಗಿ ನಡೆದರೆ ನೀವು ಜೀವಿಸುವಿರಿ. ಆಗ ನೀವು ಶುಭವನ್ನೇ ಹೊಂದುವಿರಿ. ನಿಮಗೆ ದೊರಕಿದ ಸ್ವಾಸ್ತ್ಯಭೂಮಿಯಲ್ಲಿ ನೀವು ಬಹುಕಾಲ ಬಾಳುವಿರಿ.


ಅವನು ಸುಖದಿಂದಿರುವನು. ಆತನು ವಾಗ್ದಾನ ಮಾಡಿದ ದೇಶವನ್ನು ಅವನ ಮಕ್ಕಳು ಅನುಭವಿಸುವರು.


ನಿಮಗೆ ಸಹಾಯದ ಅವಶ್ಯಕತೆ ಬಂದಾಗ ನೀವು ಆ ಸುಳ್ಳುದೇವರುಗಳನ್ನು ಕರೆಯುವಿರಿ. ಅವುಗಳನ್ನು ನಿಮ್ಮ ಸುತ್ತಲೂ ಸೇರಿಸಿಕೊಂಡಿರುವಿರಿ. ಆದರೆ ನಾನು ಹೇಳುವುದೇನೆಂದರೆ, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಅವುಗಳನ್ನೆಲ್ಲ ಉಸಿರಿನ ಗಾಳಿಯು ನಿಮ್ಮಿಂದ ದೂರಕ್ಕೆ ಕೊಂಡೊಯ್ಯುವುದು. ಆದರೆ ನನ್ನನ್ನು ಅವಲಂಬಿಸಿರುವವರು ಭೂಮಿಯನ್ನು ಪಡೆದುಕೊಳ್ಳುವರು. ನನ್ನ ಪವಿತ್ರ ಪರ್ವತವನ್ನು ಬಾಧ್ಯವಾಗಿ ಹೊಂದಿಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು