Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:39 - ಪರಿಶುದ್ದ ಬೈಬಲ್‌

39 ಯೆಹೋವನು ನೀತಿವಂತರನ್ನು ಕಾಪಾಡುತ್ತಾನೆ. ಅವರು ಆಪತ್ತಿನಲ್ಲಿರುವಾಗ ಆತನೇ ಅವರಿಗೆ ಆಶ್ರಯಸ್ಥಾನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:39
20 ತಿಳಿವುಗಳ ಹೋಲಿಕೆ  

ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.


ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”


ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.


ಆತನ ಮಹಿಮಾಶಕ್ತಿಯಿಂದ ಪರಿಪೂರ್ಣ ಬಲ ಹೊಂದಿ ಆನಂದಪೂರ್ವಕವಾದ ತಾಳ್ಮೆಯನ್ನು, ದೀರ್ಘಶಾಂತಿಯನ್ನು ಯಾವಾಗಲೂ ತೋರಿಸುವವರಾಗಿರಬೇಕೆಂತಲೂ ನಾವು ಪ್ರಾರ್ಥಿಸುತ್ತಿದ್ದೇವೆ.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.


ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.


ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ. ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.


ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.


ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು.


ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು. ಅವನ ಬದಲಾಗಿ ದುಷ್ಟನು ಇಕ್ಕಟ್ಟಿನಲ್ಲಿ ಸಿಕ್ಕಿಬೀಳುವನು.


ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು