Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:40 - ಪರಿಶುದ್ದ ಬೈಬಲ್‌

40 ಯೆಹೋವನು ನೀತಿವಂತರಿಗೆ ಸಹಾಯಕನಾಗಿ ಅವರನ್ನು ರಕ್ಷಿಸುತ್ತಾನೆ. ನೀತಿವಂತರು ಆತನನ್ನು ಆಶ್ರಯಿಸಿಕೊಂಡಾಗ ಆತನು ಅವರನ್ನು ದುಷ್ಟರಿಂದ ತಪ್ಪಿಸಿ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿಬಿಡುವನು; ಅವರು ಆತನ ಆಶ್ರಿತರಾದ್ದರಿಂದ ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:40
13 ತಿಳಿವುಗಳ ಹೋಲಿಕೆ  

ಆತನು ಜೆರುಸಲೇಮನ್ನು ಹಕ್ಕಿಯು ತನ್ನ ಗೂಡಿನ ಸುತ್ತಲೂ ಹಾರಾಡುತ್ತಾ ಕಾಪಾಡುವಂತೆ ಸಂರಕ್ಷಿಸುವನು. ಯೆಹೋವನು ಜೆರುಸಲೇಮನ್ನು ರಕ್ಷಿಸುವನು. ಯೆಹೋವನು “ಹಾದುಹೋಗಿ” ಜೆರುಸಲೇಮನ್ನು ರಕ್ಷಿಸುವನು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ಅರಸನಾದ ದಾರ್ಯಾವೆಷನಿಗೆ ಬಹಳ ಸಂತೋಷವಾಯಿತು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಮೇಲಕ್ಕೆ ಎತ್ತಿಸಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ದಾನಿಯೇಲನನ್ನು ಸಿಂಹಗಳ ಗುಹೆಯಿಂದ ಹೊರತೆಗೆದು ನೋಡಲಾಗಿ ಸಿಂಹಗಳಿಂದ ಅವನಿಗೆ ಯಾವ ಗಾಯಗಳೂ ಆಗಿರಲಿಲ್ಲ. ದಾನಿಯೇಲನು ತನ್ನ ದೇವರಲ್ಲಿ ನಂಬಿಕೆಯಿಟ್ಟಿದ್ದರಿಂದ ಅವನಿಗೆ ಸಿಂಹಗಳಿಂದ ಯಾವ ನೋವೂ ಆಗಿರಲಿಲ್ಲ.


ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.


ನೀನು ನಮ್ಮನ್ನು ಉರಿಯುವ ಕೊಂಡದಲ್ಲಿ ಎಸೆದರೆ ನಾವು ಆರಾಧಿಸುವ ದೇವರು ನಮ್ಮನ್ನು ರಕ್ಷಿಸಬಲ್ಲನು. ಆತನು ಇಚ್ಛಿಸಿದರೆ ನಮ್ಮನ್ನು ನಿನ್ನ ಕೈಯಿಂದ ಬಿಡಿಸಬಲ್ಲನು.


ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”


ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.


ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು.


ಯೆಹೋವನೇ, ಎದ್ದೇಳು, ವೈರಿಗಳ ಬಳಿಗೆ ಹೋಗು. ಅವರನ್ನು ಶರಣಾಗತರನ್ನಾಗಿ ಮಾಡು. ನಿನ್ನ ಖಡ್ಗವನ್ನು ಪ್ರಯೋಗಿಸಿ ದುಷ್ಟರಿಂದ ನನ್ನನ್ನು ರಕ್ಷಿಸು.


ಆತನು ಅವರ ಎಲುಬುಗಳನ್ನೆಲ್ಲ ಕಾಪಾಡುವನು. ಅವುಗಳಲ್ಲಿ ಒಂದಾದರೂ ಮುರಿದುಹೋಗುವುದಿಲ್ಲ.


“ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡುತ್ತೇನೆ” ಎಂದು ಹೇಳಬೇಡ. ಯೆಹೋವನಿಗಾಗಿ ಕಾದುಕೊಂಡಿರು! ಆತನು ನಿನ್ನನ್ನು ಜಯಶಾಲಿಯನ್ನಾಗಿ ಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು