Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:5 - ಪರಿಶುದ್ದ ಬೈಬಲ್‌

5 ಯೆಹೋವನನ್ನು ಆಶ್ರಯಿಸಿಕೊ, ಆತನಲ್ಲಿ ಭರವಸವಿಡು. ನಿನಗೆ ಅಗತ್ಯವಾದದ್ದನ್ನು ಆತನೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:5
14 ತಿಳಿವುಗಳ ಹೋಲಿಕೆ  

ನಿಮ್ಮ ಕಾರ್ಯಗಳನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಯೋಜನೆಗಳೆಲ್ಲಾ ಸಫಲವಾಗುವವು.


ಆತನು ನಿಮ್ಮನ್ನು ಪರಿಪಾಲಿಸುವುದರಿಂದ ನಿಮ್ಮ ಚಿಂತೆಗಳನ್ನೆಲ್ಲಾ ಆತನಿಗೆ ಒಪ್ಪಿಸಿರಿ.


“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು. ಆತನು ನಿನ್ನನ್ನು ಉದ್ಧಾರ ಮಾಡುವನು. ಸಜ್ಜನರಿಗೆ ಸೋಲಾಗಲು ಯೆಹೋವನೆಂದಿಗೂ ಬಿಡನು.


ಆದ್ದರಿಂದ, ನೀವು ಹೀಗೆ ಹೇಳಬೇಕು, “ಪ್ರಭುವು ಇಚ್ಛೆಪಟ್ಟರೆ, ನಾವು ಜೀವಿಸಿರುತ್ತೇವೆ. ಇಂಥಿಂಥದ್ದನ್ನು ಮಾಡುತ್ತೇವೆ.”


“ಯೆಹೋವನಿಗೆ ಮೊರೆಯಿಡು, ಆತನು ನಿನ್ನನ್ನು ರಕ್ಷಿಸಬಹುದು. ಆತನು ನಿನ್ನನ್ನು ಬಹಳವಾಗಿ ಇಷ್ಟಪಡುವುದಾದರೆ ನಿನ್ನನ್ನು ಖಂಡಿತವಾಗಿ ರಕ್ಷಿಸುವನು” ಎಂದು ಹೇಳುತ್ತಾರೆ.


ನಿನ್ನ ಕಾರ್ಯಗಳೆಲ್ಲಾ ಜಯಪ್ರಧವಾಗುವುದು; ನಿನ್ನ ಭವಿಷ್ಯತ್ತು ಪ್ರಕಾಶಮಾನವಾಗುವುದು;


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ಯೇಸು ತನ್ನ ಶಿಷ್ಯರಿಗೆ ಹೀಗೆ ಹೇಳಿದನು: “ಈ ಕಾರಣದಿಂದ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಪ್ರಾಣಧಾರಣೆಗೆ ಬೇಕಾದ ಊಟಕ್ಕಾಗಿ ಮತ್ತು ತೊಟ್ಟುಕೊಳ್ಳಲು ಬೇಕಾದ ಬಟ್ಟೆಗಾಗಿ ಚಿಂತಿಸಬೇಡಿರಿ.


ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.


ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.


ಇಸ್ರೇಲರು, “ಇಲ್ಲ, ನೀನು ನಮಗೆ ಕೆಟ್ಟದ್ದೇನನ್ನೂ ಮಾಡಿಲ್ಲ. ನೀನು ನಮ್ಮನ್ನು ಎಂದೂ ವಂಚಿಸಿಲ್ಲ; ನಮ್ಮಿಂದ ಏನನ್ನೂ ತೆಗೆದುಕೊಂಡಿಲ್ಲ” ಎಂದು ಉತ್ತರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು