Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:11 - ಪರಿಶುದ್ದ ಬೈಬಲ್‌

11 ನಾನು ಅಸ್ವಸ್ಥನಾಗಿರುವುದರಿಂದ ನನ್ನ ಸ್ನೇಹಿತರಾಗಲಿ ನೆರೆಯವರಾಗಲಿ ನನ್ನನ್ನು ನೋಡಲು ಬರುವುದಿಲ್ಲ. ನನ್ನ ಕುಟುಂಬದವರು ನನ್ನ ಸಮೀಪಕ್ಕೂ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಕಣ್ಣುಗಳೂ ಮೊಬ್ಬಾಗಿಹೋದವು. ನನ್ನ ಆಪ್ತಸ್ನೇಹಿತರು ನನ್ನ ಜಾಡ್ಯವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:11
12 ತಿಳಿವುಗಳ ಹೋಲಿಕೆ  

ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.


ಯೇಸುವಿನ ಆತ್ಮೀಯ ಸ್ನೇಹಿತರೂ ಅಲ್ಲಿದ್ದರು. ಗಲಿಲಾಯದಿಂದ ಯೇಸುವನ್ನು ಹಿಂಬಾಲಿಸಿದ ಕೆಲವು ಸ್ತ್ರೀಯರೂ ಅಲ್ಲಿದ್ದರು. ಅವರೆಲ್ಲರೂ ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ಈ ಸಂಗತಿಗಳನ್ನು ನೋಡಿದರು.


ಯೆಹೋವನೇ, ಸ್ನೇಹಿತರೆಲ್ಲರನ್ನೂ ಪ್ರಿಯರನ್ನೂ ನೀನು ನನ್ನಿಂದ ದೂರಮಾಡಿದೆ. ಕೇವಲ ಕತ್ತಲೆಯೊಂದೇ ನನ್ನೊಂದಿಗೆ ಉಳಿದುಕೊಂಡಿದೆ.


ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.


ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.


ಆದರೆ ಪ್ರವಾದಿಗಳು ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಆದರೆ ಆತನು ನಮ್ಮ ಸಂಕಷ್ಟಗಳನ್ನು ತನ್ನ ಮೇಲೆ ಹೊತ್ತುಕೊಂಡನು. ನಮ್ಮ ಬೇನೆಯನ್ನು ಆತನು ಅನುಭವಿಸಿದನು. ದೇವರು ಆತನನ್ನು ಶಿಕ್ಷಿಸಿದ್ದಾನೆ ಎಂದು ನಾವು ನೆನಸಿದೆವು. ಆತನು ಏನೋ ಮಾಡಿದ್ದಕ್ಕಾಗಿ ದೇವರು ಆತನಿಗೆ ಹೊಡೆದನೆಂದು ಭಾವಿಸಿಕೊಂಡೆವು.


ಜನರು ಬಲವಂತದಿಂದ ಆತನನ್ನು ಕೊಂಡೊಯ್ದರು; ಆತನಿಗೆ ಅನ್ಯಾಯವಾದ ತೀರ್ಪನ್ನು ನೀಡಿದರು; ಆತನನ್ನು ಜೀವಲೋಕದಿಂದಲೇ ತೆಗೆದುಹಾಕಿ ಆತನಿಗೆ ಸಂತಾನವೇ ಇಲ್ಲದಂತೆ ಮಾಡಿದರು. ನನ್ನ ಜನರ ಪಾಪಗಳಿಗಾಗಿ ಆತನು ದಂಡಿಸಲ್ಪಟ್ಟನು.


ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು