Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:4 - ಪರಿಶುದ್ದ ಬೈಬಲ್‌

4 ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಅಪರಾಧಗಳು ನನ್ನನ್ನು ಮುಣುಗಿಸಿ ಬಿಟ್ಟವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತೆ ನನ್ನನ್ನು ಅದಿವಿುಬಿಟ್ಟವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:4
9 ತಿಳಿವುಗಳ ಹೋಲಿಕೆ  

ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.


ಚಾಚಿ ಹೀಗೆ ಪ್ರಾರ್ಥಿಸಿದೆನು: “ನನ್ನ ದೇವರೇ, ನಿನ್ನ ಕಡೆಗೆ ಮುಖವೆತ್ತಲು ನನಗೆ ನಾಚಿಕೆಯಾಗುತ್ತದೆ; ಯಾಕೆಂದರೆ ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿದೆ. ನಮ್ಮ ಅಪರಾಧಗಳ ರಾಶಿಯು ಪರಲೋಕದವರೆಗೂ ಏರಿಹೋಗಿದೆ.


“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.


ಕ್ರಿಸ್ತನು ನಮ್ಮ ಪಾಪಗಳನ್ನೆಲ್ಲಾ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನೇರಿದನು. ನಾವು ಪಾಪಕ್ಕೋಸ್ಕರ ಜೀವಿಸದೆ, ನೀತಿವಂತರಾಗಿ ಜೀವಿಸಬೇಕೆಂಬುದೇ ಆತನ ಉದ್ದೇಶವಾಗಿತ್ತು. ಆತನ (ಕ್ರಿಸ್ತನ) ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


“ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ.


ಆತನು ತನ್ನ ಆತ್ಮದಲ್ಲಿ ಬಹಳವಾಗಿ ಸಂಕಟಪಡುವನು. ಆದರೆ ಒಳ್ಳೆಯ ಕಾರ್ಯಗಳಾಗುವುದನ್ನು ಆತನು ನೋಡುವನು. ತಾನು ಕಲಿತ ವಿಷಯಗಳಲ್ಲಿ ಸಂತುಷ್ಟನಾಗುವನು. ಅನೇಕರು ತಮ್ಮ ಪಾಪಗಳಿಂದ ಬಿಡುಗಡೆ ಹೊಂದುವಂತೆ ನನ್ನ ಒಳ್ಳೇ ಸೇವಕನು ಮಾಡುವನು. ಅವರ ಪಾಪಗಳನ್ನು ಹೊತ್ತುಕೊಂಡು ಹೋಗುವನು.


ಒಬ್ಬನು ತನ್ನ ಸಮಾಧಾನಯಜ್ಞದಲ್ಲಿ ಉಳಿದದ್ದನ್ನು ಮೂರನೆಯ ದಿನದಲ್ಲಿ ತಿಂದರೆ, ಯೆಹೋವನು ಅವನ ವಿಷಯದಲ್ಲಿ ಸಂತೋಷಗೊಳ್ಳುವುದಿಲ್ಲ. ಯೆಹೋವನು ಆ ಯಜ್ಞವನ್ನು ಅವನ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆ ಯಜ್ಞವು ಅಸಹ್ಯವಸ್ತುವಾಗುವುದು. ಆ ಮಾಂಸವನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸುವನು.


“ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.


ಕೆಲವರು ತಮ್ಮ ಪಾಪಗಳಿಂದಲೂ ದೋಷಗಳಿಂದಲೂ ಮೂಢರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು