Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:5 - ಪರಿಶುದ್ದ ಬೈಬಲ್‌

5 ದೇವರಿಗೆ ಯೋಗ್ಯವಾದ ಯಜ್ಞಗಳನ್ನು ಅರ್ಪಿಸಿರಿ; ಯೆಹೋವನಲ್ಲಿಯೇ ಭರವಸೆಯಿಡಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:5
19 ತಿಳಿವುಗಳ ಹೋಲಿಕೆ  

ನೀನು ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದರೆ, ದೀರ್ಘಕಾಲ ಬದುಕುವೆ; ಭೂಮಿಯ ಅನೇಕ ಫಲಗಳನ್ನು ಅನುಭವಿಸುವೆ.


ಆಗ ಜನರು ಯಜ್ಞಗಳನ್ನೂ ಸರ್ವಾಂಗಹೋಮಗಳನ್ನೂ ಅರ್ಪಿಸಿ ನಿನಗೆ ಸಂತೋಷವನ್ನು ಉಂಟು ಮಾಡುವರು. ಜನರು ನಿನ್ನ ಯಜ್ಞವೇದಿಕೆಯ ಮೇಲೆ ಹೋರಿಗಳನ್ನು ಮತ್ತೆ ಅರ್ಪಿಸುವರು.


ಆದ್ದರಿಂದ ದೇವರ ಅಪೇಕ್ಷೆಯಂತೆ ಸಂಕಟಪಡುವವರು ತಮ್ಮ ಜೀವಾತ್ಮಗಳನ್ನು ಆತನಿಗೆ ಒಪ್ಪಿಸಿಕೊಡಬೇಕು. ಅವರನ್ನು ಸೃಷ್ಟಿಸಿದಾತನು ದೇವರೇ. ಆದ್ದರಿಂದ ಅವರು ಆತನಲ್ಲಿ ಭರವಸವಿಡತಕ್ಕದ್ದು. ಹೀಗಿರಲಾಗಿ ಅವರು ಒಳ್ಳೆಯದನ್ನು ಮಾಡುತ್ತಲೇ ಇರಬೇಕು.


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು. ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನೆತ್ತುವರು.”


“ಆದ್ದರಿಂದ ನೀವು ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಮುಂದೆ ದೇವರಿಗೆ ಅರ್ಪಿಸುವಾಗ, ನಿಮ್ಮ ಸಹೋದರನಿಗೆ ನಿಮ್ಮ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿಮ್ಮ ನೆನಪಿಗೆ ಬಂದರೆ,


ಯಾಕೆಂದರೆ ನಾನೇ ಯೆಹೋವನು. ನಾನು ನ್ಯಾಯದಲ್ಲಿ ಸಂತೋಷಿಸುವೆನು. ನಾನು ಕದಿಯುವದನ್ನೂ ಎಲ್ಲಾ ದುಷ್ಟತ್ವಗಳನ್ನೂ ದ್ವೇಷಿಸುತ್ತೇನೆ. ಅದಕ್ಕಾಗಿ ನಾನು ಅಂಥಾ ಜನರಿಗೆ ದೊರಕಬೇಕಾದ ಶಿಕ್ಷೆಯನ್ನು ಕೊಡುವೆನು. ನನ್ನ ಜನರೊಂದಿಗೆ ನಿತ್ಯಕಾಲದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.


ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ಯೆಹೋವನನ್ನು ಗೌರವಿಸುವ ಜನರು ಆತನ ಸೇವಕನ ಮಾತನ್ನು ಕೇಳುವರು. ಆ ಸೇವಕನು ಮುಂದೆ ಸಂಭವಿಸುವುದರ ಬಗ್ಗೆ ಚಿಂತೆ ಇಲ್ಲದೆ ಸಂಪೂರ್ಣವಾಗಿ ದೇವರ ಮೇಲೆ ನಂಬಿಕೆ ಇಡುವನು. ಅವನು ಪರಿಪೂರ್ಣವಾಗಿ ಯೆಹೋವನ ಹೆಸರಿನಲ್ಲಿ ನಂಬಿಕೆ ಇಟ್ಟು ತನ್ನ ದೇವರ ಮೇಲೆ ಅವಲಂಬಿಸಿಕೊಳ್ಳುವನು.


ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.


ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.


ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!


ನಾನು ಆಶ್ಚರ್ಯದಿಂದ ಹೀಗೆಂದುಕೊಳ್ಳುವೆನು: “ನಮ್ಮ ಯೆಹೋವನು ನಮ್ಮನ್ನು ಶಾಶ್ವತವಾಗಿ ಕೈಬಿಟ್ಟಿರುವನೇ? ಆತನು ನಮ್ಮನ್ನು ಮತ್ತೆಂದಾದರೂ ಅಪೇಕ್ಷಿಸುವನೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು