Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:12 - ಪರಿಶುದ್ದ ಬೈಬಲ್‌

12 ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವುದಿಲ್ಲ. ಅವು ನನ್ನ ತಲೆಯ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವದಿಲ್ಲ. ಅವು ನನ್ನ ತಲೇ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:12
13 ತಿಳಿವುಗಳ ಹೋಲಿಕೆ  

ನಾನು ಅಪರಾಧಿಯಾಗಿದ್ದೇನೆ. ನನ್ನ ಅಪರಾಧಗಳು ನನ್ನ ಭುಜಗಳ ಮೇಲೆ ಭಾರವಾದ ಹೊರೆಯಂತಿವೆ.


ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ಮರಣಕರವಾದ ಹಗ್ಗಗಳು ನನ್ನನ್ನು ಸುತ್ತಿಕೊಂಡಿದ್ದವು. ಸಮಾಧಿಯು ನನ್ನನ್ನು ಮುಚ್ಚಿಕೊಳ್ಳುತ್ತಿತ್ತು. ನಾನು ಭಯಗೊಂಡಿದ್ದೆನು; ಚಿಂತೆಗೊಳಗಾಗಿದ್ದೆನು.


ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲಾಡಿದೆವು. ನಮ್ಮ ಸ್ವಂತ ದಾರಿಯಲ್ಲಿ ನಾವು ಹೋದೆವು. ನಮ್ಮ ಅಪರಾಧಗಳಿಂದ ನಾವು ವಿಮುಕ್ತರಾಗುವಂತೆ ಯೆಹೋವನು ನಮ್ಮ ಅಪರಾಧಗಳನ್ನು ಆತನ ಮೇಲೆ ಹಾಕಿದನು.


ನಿಮ್ಮ ಪಾಪಗಳಿಗಾಗಿ ಕ್ರಿಸ್ತನು ಒಂದೇಸಾರಿ ಬಾಧೆ ಅನುಭವಿಸಿ ಸತ್ತನು. ನೀತಿವಂತನಾಗಿದ್ದ ಆತನು ಅಪರಾಧಿಗಳಿಗಾಗಿ ಪ್ರಾಣಕೊಟ್ಟನು. ನಿಮ್ಮೆಲ್ಲರನ್ನು ದೇವರ ಬಳಿಗೆ ನಡೆಸುವುದಕ್ಕಾಗಿ ಆತನು ಹೀಗೆ ಮಾಡಿದನು. ಆತನ ದೇಹವು ಕೊಲ್ಲಲ್ಪಟ್ಟಿತು, ಆದರೆ ಆತನು ಆತ್ಮಸಂಬಂಧದಲ್ಲಿ ಮತ್ತೆ ಜೀವಂತನಾದನು.


ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.


ಗ್ರಹಶಕ್ತಿಗಳು ಕದಲುವುದರಿಂದ ಭೂಮಿಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯದಿಂದ ಮನುಷ್ಯರು ದಿಗ್ಭ್ರಮೆಗೊಳ್ಳುವರು.


ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು.


ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು. ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು