Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 40:9 - ಪರಿಶುದ್ದ ಬೈಬಲ್‌

9 ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು, ಧಾರಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನೀತಿಯನ್ನು ಸಾಧಿಸಿದ ಶುಭಸಮಾಚಾರವನ್ನು ಧಾರಾಳವಾಗಿ ಮಹಾಸಭೆಯಲ್ಲಿ ಪ್ರಕಟಿಸಿದೆನು; ಯೆಹೋವನೇ, ನೀನೇ ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು; ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು ನೀವೇ ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 40:9
14 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ನನ್ನ ತುಟಿಗಳು ನಿನ್ನ ಜ್ಞಾನದ ನಿರ್ಧಾರಗಳ ಕುರಿತು ವರ್ಣಿಸುತ್ತವೆ.


ನಿನ್ನ ನಾಮದ ಕುರಿತು ನನ್ನ ಸಹೋದರರಿಗೆ ಹೇಳುವೆನು; ಮಹಾಸಭೆಯಲ್ಲಿ ನಿನ್ನನ್ನು ಸುತ್ತಿಸುವೆನು.


ಯೇಸು ಹೇಳುತ್ತಾನೆ: “ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ; ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.”


ಆಗ ನಾನು ನಿನ್ನನ್ನು ಮಹಾಸಭೆಯಲ್ಲಿ ಸ್ತುತಿಸುವೆನು; ಬಲಿಷ್ಠರ ಸಮೂಹದಲ್ಲಿ ನಿನ್ನನ್ನು ಕೊಂಡಾಡುವೆನು.


“ನಮ್ಮ ದೇವರು ಯೆಹೋವನೇ! ನಮ್ಮ ದೇವರು ಯೆಹೋವನೇ ಎಂದು ಇನ್ನೊಮ್ಮೆ ನಾವು ಹೇಳುತ್ತೇವೆ. ನಾವು ಇದನ್ನು ಏಕೆ ಮಾಡಿದೆವೆಂಬುದು ದೇವರಿಗೆ ತಿಳಿದಿದೆ. ನೀವೂ ಅದನ್ನು ತಿಳಿದುಕೊಂಡಿರಬೇಕೆಂಬುದು ನಮ್ಮ ಆಶೆ. ನಾವು ಮಾಡಿದ್ದನ್ನು ನೀವು ವಿವೇಚಿಸಿ ನೋಡಬಹುದು. ನಾವೇನಾದರೂ ತಪ್ಪುಮಾಡಿದ್ದೇವೆಂದು ಅನಿಸಿದ್ದಲ್ಲಿ ಆಗ ನೀವು ನಮ್ಮನ್ನು ಕೊಲ್ಲಬಹುದು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಕೇಳಿದನು. ಯೇಸು, “ನೀನು ನನ್ನನ್ನು ಪ್ರೀತಿಸುವೆಯೋ?” ಎಂದು ಮೂರು ಸಾರಿ ಕೇಳಿದ್ದರಿಂದ ಪೇತ್ರನಿಗೆ ದುಃಖವಾಯಿತು. ಪೇತ್ರನು, “ಪ್ರಭುವೇ, ನಿನಗೆ ಪ್ರತಿಯೊಂದೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು.


ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.


ಯೆಹೋವನ ಉಪದೇಶವು ನೀತಿವಂತನ ಹೃದಯದಲ್ಲಿರುತ್ತದೆ. ಅವನು ನೀತಿಮಾರ್ಗದಲ್ಲಿ ನಡೆಯವನು.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು