Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:2 - ಪರಿಶುದ್ದ ಬೈಬಲ್‌

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ರಕ್ಷಿಸುವನು. ಅವನು ಭೂಮಿಯ ಮೇಲೆ ಧನ್ಯನೆನಸಿಕೊಳ್ಳುವನು. ಯೆಹೋವನೇ, ಅವನನ್ನು ಶತ್ರುಗಳ ಕೈಗೆ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನೇ, ಅವನನ್ನು ಶತ್ರುಗಳ ಅಧೀನಕ್ಕೆ ಕೊಡಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:2
16 ತಿಳಿವುಗಳ ಹೋಲಿಕೆ  

ವೈರಿಗಳು ನನ್ನ ಮೇಲೆ ಆಕ್ರಮಣ ಮಾಡಿದ್ದಾರೆ. ನನಗೆ ಕೇಡಾಗಲೆಂದು ಸುಳ್ಳುಗಳನ್ನು ಹೇಳಿದ್ದಾರೆ. ಯೆಹೋವನೇ, ಇಂಥ ವೈರಿಗಳ ಕೈಗೆ ನನ್ನನ್ನು ಕೊಡಬೇಡ.


ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.


ನೀತಿವಂತರು ಆಶೀರ್ವದಿಸಿದರೆ, ವಾಗ್ದಾನಮಾಡಲ್ಪಟ್ಟ ಭೂಮಿಯನ್ನು ಜನರು ಪಡೆದುಕೊಳ್ಳುವರು. ಆದರೆ ಅವರು ಶಪಿಸಿದರೆ, ಜನರು ನಾಶವಾಗುವರು.


ಅವರನ್ನು ಸಾವಿನಿಂದ ರಕ್ಷಿಸುವಾತನು ಆತನೇ. ಅವರು ಹಸಿವೆಯಿಂದಿರುವಾಗ ಆತನು ಅವರಿಗೆ ಶಕ್ತಿಕೊಡುವನು.


ಇದು ಲೇವಿಯರಿಗಾಗಿ. ಯಾಕೆಂದರೆ ಅವರಿಗೆ ಸ್ವಂತ ಭೂಮಿ ಇಲ್ಲವಲ್ಲಾ. ಅಲ್ಲದೆ ಈ ಧಾನ್ಯವನ್ನು ನಿಮ್ಮ ಊರಲ್ಲಿರುವ ಬಡಜನರಿಗೋಸ್ಕರವಾಗಿಯೂ ಪರದೇಶಿಗಳಿಗಾಗಿಯೂ ವಿಧವೆಯರಿಗಾಗಿಯೂ ಅನಾಥ ಮಕ್ಕಳಿಗಾಗಿಯೂ ಉಪಯೋಗಿಸಬೇಕು. ಅವರು ಬಂದು ಊಟಮಾಡಿ ತೃಪ್ತರಾಗಲಿ. ನೀವು ಹೀಗೆ ಮಾಡಿದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಕಾರ್ಯಗಳನ್ನೆಲ್ಲಾ ಸಫಲಪಡಿಸಿ ಆಶೀರ್ವದಿಸುವನು.


ಅವಳ ಅತ್ತೆಯು ಅವಳಿಗೆ, “ಈ ಧಾನ್ಯವನ್ನೆಲ್ಲಾ ನೀನು ಎಲ್ಲಿಂದ ಶೇಖರಿಸಿದೆ? ನೀನು ಎಲ್ಲಿ ಕೆಲಸ ಮಾಡಿದೆ? ನಿನಗೆ ಸಹಾಯ ಮಾಡಿದ ಮನುಷ್ಯನಿಗೆ ಶುಭವಾಗಲಿ” ಎಂದಳು. ಅದಕ್ಕೆ ರೂತಳು, “ನಾನು ಇಂದು ಯಾರ ಹತ್ತಿರ ಕೆಲಸ ಮಾಡಿದೆನೋ ಆ ಮನುಷ್ಯನ ಹೆಸರು ಬೋವಜ” ಎಂದು ಹೇಳಿದಳು.


ದಯೆಯುಳ್ಳವನು ತನಗೆ ಲಾಭ ಮಾಡಿಕೊಳ್ಳುವನು. ಕ್ರೂರಿಯು ತನಗೇ ಕೇಡುಮಾಡಿಕೊಳ್ಳುವನು.


ನೆರೆಯವರನ್ನು ತಿರಸ್ಕರಿಸುವುದು ತಪ್ಪು. ನೀವು ಸಂತೋಷದಿಂದ ಇರಬೇಕಾದರೆ ಬಡವರಿಗೆ ದಯೆತೋರಿಸಿ.


ಬಡಜನರಿಗೆ ಉದಾರವಾಗಿ ಕೊಡುವವನು ಯೆಹೋವನಿಗೆ ಸಾಲಕೊಡುತ್ತಾನೆ; ಅವನ ಕರುಣೆಯ ಕಾರ್ಯಕ್ಕೆ ಯೆಹೋವನು ಅವನ ಗೆ ಮರುಪಾವತಿ ಮಾಡುವನು.


ಆಕೆ ಯಾವಾಗಲೂ ಬಡವರಿಗೆ ಕೊಡುವಳು; ಕೊರತೆಯಲ್ಲಿರುವ ಜನರಿಗೆ ಸಹಾಯ ಮಾಡುವಳು.


ಆದರೆ ಅಂದು ಎಬೆದ್ಮೆಲೆಕನೇ, ನಾನು ನಿನ್ನನ್ನು ರಕ್ಷಿಸುತ್ತೇನೆ.’ ಇದು ಯೆಹೋವನ ನುಡಿ. ‘ನೀನು ಊಹಿಸಿ ಭಯಪಟ್ಟಂತೆ ನಿನ್ನನ್ನು ಆ ಜನರ ಕೈಗೆ ಒಪ್ಪಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು