Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:3 - ಪರಿಶುದ್ದ ಬೈಬಲ್‌

3 ಅವನು ಕಾಯಿಲೆಯಿಂದ ಹಾಸಿಗೆಯಲ್ಲಿರುವಾಗ ಯೆಹೋವನು ಅವನಿಗೆ ಬಲವನ್ನು ಕೊಡುವನು. ಅವನು ಕಾಯಿಲೆಯಿಂದ ಹಾಸಿಗೆಯಲ್ಲಿದ್ದರೂ ಯೆಹೋವನು ಅವನನ್ನು ಗುಣಪಡಿಸುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ, ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ, ಆರೋಗ್ಯವನ್ನು ಅನುಗ್ರಹಿಸಿದ್ದಿಯಲ್ಲಾ ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ರೋಗದಿ ಹಾಸಿಗೆ ಹಿಡಿದಿರಲು ಪ್ರಭು ಸುಧಾರಿಸುವನು I ರೋಗ ನಿವಾರಿಸಿ ಅವನಿಗೆ ಆರೋಗ್ಯವನೀಯುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಅಸ್ವಸ್ಥನಾಗಿ ಬಿದ್ದುಕೊಂಡಿರುವಾಗ ಯೆಹೋವನು ಅವನನ್ನು ಉದ್ಧರಿಸುವನು; ಅವನ ರೋಗವನ್ನೆಲ್ಲಾ ಪರಿಹರಿಸಿ ಆರೋಗ್ಯವನ್ನುಂಟುಮಾಡಿದಿಯಲ್ಲಾ, ಸ್ವಾಮೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:3
7 ತಿಳಿವುಗಳ ಹೋಲಿಕೆ  

ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.


ಎಲೀಯನು ಅಹಜ್ಯನಿಗೆ, “ಇಸ್ರೇಲಿನಲ್ಲಿ ದೇವರಿದ್ದಾನೆ. ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ಪ್ರಶ್ನೆಗಳನ್ನು ಕೇಳಲು ಸಂದೇಶಕರನ್ನು ಏಕೆ ಕಳುಹಿಸಿದೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ನೀನು ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ! ಎಂಬುದಾಗಿ ಯೆಹೋವನು ಅನ್ನುತ್ತಾನೆ.” ಎಂದು ಹೇಳಿದನು.


ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನೆಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!’” ಎಂಬುದಾಗಿ ಹೇಳಿದರು.


ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು