Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:2 - ಪರಿಶುದ್ದ ಬೈಬಲ್‌

2 ನನ್ನ ಆತ್ಮವು ಜೀವಸ್ವರೂಪನಾದ ದೇವರಿಗಾಗಿ ಬಾಯಾರಿದೆ. ನಾನು ಯಾವಾಗ ಆತನನ್ನು ಸಂಧಿಸುವೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಮನಸ್ಸು ದೇವರಿಗಾಗಿ, ಚೈತನ್ಯ ಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:2
20 ತಿಳಿವುಗಳ ಹೋಲಿಕೆ  

ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.


ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.


ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.


ಆಗ ದೇವದೂತನು ನನಗೆ ಜೀವಜಲದ ನದಿಯನ್ನು ತೋರಿಸಿದನು. ಆ ನದಿಯು ಸ್ಫಟಿಕದಂತೆ ಪ್ರಕಾಶಮಾನವಾಗಿತ್ತು. ಆ ನದಿಯು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಆಗಮಿಸಿ,


ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.


ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು.


ನನ್ನ ದೇವರೇ, ನಿನ್ನ ಯಜ್ಞವೇದಿಕೆಯ ಬಳಿಗೆ ಬರುವೆನು. ನನ್ನ ಸಂತೋಷಕ್ಕೆ ನೀನೇ ಆಧಾರನಾಗಿರುವೆ. ದೇವರೇ, ನನ್ನ ದೇವರೇ, ಹಾರ್ಪ್‌ವಾದ್ಯವನ್ನು ಬಾರಿಸುತ್ತಾ ನಿನ್ನನ್ನು ಕೊಂಡಾಡುವೆನು.


ಆಹಾ, ದೇವರ ದರ್ಶನವು ನನಗೆ ಎಲ್ಲಿ ಆಗುವುದು? ಆತನ ಬಳಿಗೆ ನಾನು ಹೇಗೆ ಹೋಗಬೇಕು? ನನಗೆ ಗೊತ್ತಾಗಿದ್ದರೆ ಎಷ್ಟೋ ಮೇಲು!


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.


ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು,


ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.


“ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.


ನಾನೊಂದು ಹೊಸ ಶಾಸನವನ್ನು ಮಾಡುತ್ತಿದ್ದೇನೆ. ಈ ಶಾಸನವು ನನ್ನ ರಾಜ್ಯದ ಎಲ್ಲ ಭಾಗಗಳ ಜನರಿಗೆ ಅನ್ವಯಿಸುವುದು. ನೀವೆಲ್ಲರೂ ದಾನಿಯೇಲನ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ದಾನಿಯೇಲನ ದೇವರೇ ಜೀವಸ್ವರೂಪನಾದ ದೇವರು. ಆತನು ನಿರಂತರವೂ ಇರುವಾತನಾಗಿದ್ದಾನೆ. ಆತನ ಸಾಮ್ರಾಜ್ಯವು ಎಂದಿಗೂ ಹಾಳಾಗುವದಿಲ್ಲ. ಆತನ ಆಧಿಪತ್ಯವು ಎಂದಿಗೂ ಮುಗಿಯುವದಿಲ್ಲ.


ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.


ಚೈತನ್ಯಸ್ವರೂಪನಾದ ದೇವರು ನಿಜವಾಗಿಯೂ ನಿಮ್ಮ ಸಂಗಡ ಇದ್ದಾನೆ ಎಂಬುದಕ್ಕೆ ಇಲ್ಲಿ ಒಂದು ಸಾಕ್ಷಿ ಇದೆ. ಆತನು ನಿಜವಾಗಿಯೂ ನಿಮ್ಮ ವೈರಿಗಳನ್ನು ಸೋಲಿಸುತ್ತಾನೆ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ. ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು, ಇವರನ್ನೆಲ್ಲಾ ಆತನು ಸೋಲಿಸುತ್ತಾನೆ. ಆ ದೇಶದಿಂದ ಅವರನ್ನು ಬಲವಂತವಾಗಿ ಹೊರಗಟ್ಟುತ್ತಾನೆ.


ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ.


ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು