Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:4 - ಪರಿಶುದ್ದ ಬೈಬಲ್‌

4 ಆಗ ನಾನು, ಹಬ್ಬದ ಉತ್ಸಾಹದಲ್ಲಿ ಜನಸಮೂಹದೊಡನೆ ಹರ್ಷಿಸುತ್ತಾ ಸ್ತುತಿಗೀತೆಗಳನ್ನು ಹಾಡುತ್ತಾ ಅವರನ್ನು ದೇವಾಲಯಕ್ಕೆ ಮುನ್ನಡೆಸುತ್ತಿದ್ದದ್ದನ್ನು ನೆನಪಿಗೆ ತಂದುಕೊಂಡು ಹೃದಯದಲ್ಲಿ ಕೊರಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಭಜನೋತ್ಸವದಲ್ಲಿ ಸೇರಿ ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ ಸ್ತೋತ್ರಪದಗಳನ್ನು ಹಾಡುತ್ತಾ ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:4
28 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ನೀವು ಹರ್ಷಗಾನ ಹಾಡುವಿರಿ. ಅದು ಹಬ್ಬದ ರಾತ್ರಿಯ ಸಮಯದಂತಿರುವದು. ದೇವರ ಪರ್ವತದಲ್ಲಿ ನಡೆಯುತ್ತಿರುವಾಗ ನೀವು ಅತ್ಯಂತ ಸಂತೋಷಪಡುವಿರಿ. ಇಸ್ರೇಲಿನ ಬಂಡೆಯಾಗಿರುವ ಯೆಹೋವನನ್ನು ಆರಾಧಿಸಲು ಹೋಗುವಾಗ ಕೊಳಲಿನ ಗಾನವನ್ನು ಕೇಳಿ ಸಂತೋಷಿಸುವಿರಿ.


“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.


ಜನರೇ, ಯಾವಾಗಲೂ ದೇವರನ್ನೇ ನಂಬಿಕೊಂಡಿರಿ. ನಿಮ್ಮ ಕಷ್ಟಗಳನ್ನೆಲ್ಲಾ ಆತನಿಗೆ ಹೇಳಿಕೊಳ್ಳಿರಿ. ಆತನೇ ನಮ್ಮ ಆಶ್ರಯಸ್ಥಾನ.


ಯೆಹೂದವೇ, ನೋಡು! ಬೆಟ್ಟಗಳ ಮೇಲಿನಿಂದ ಬರುವವನನ್ನು ನೋಡು. ಅವನು ಶುಭಸಮಾಚಾರವನ್ನು ತರುವನು. ಸಮಾಧಾನ ಉಂಟೆಂದು ಅವನು ಸಾರುತ್ತಾನೆ. ಯೆಹೂದವೇ, ನಿನ್ನ ವಿಶೇಷ ಹಬ್ಬಗಳನ್ನು ಆಚರಿಸು. ನೀನು ವಾಗ್ದಾನ ಮಾಡಿದ್ದನ್ನು ನೆರವೇರಿಸು. ಕೆಲಸಕ್ಕೆ ಬಾರದ ಆ ಜನರು ನಿನ್ನ ಬಳಿಗೆ ಬಂದು ನಿನ್ನ ಮೇಲೆ ದಾಳಿ ಮಾಡುವದಿಲ್ಲ. ಯಾಕೆಂದರೆ ಆ ದುಷ್ಟ ಜನರೆಲ್ಲಾ ನಾಶವಾಗಿರುತ್ತಾರೆ.


ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.


ನಾವು ಜನಸಮೂಹದ ನಡುವೆ ದೇವಾಲಯಕ್ಕೆ ಹೋಗುವಾಗ, ಗುಟ್ಟಾದ ವಿಷಯಗಳನ್ನು ಮಾತಾಡುತ್ತಿದ್ದೆವಲ್ಲಾ!


“ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


“ನನ್ನ ಜೀವಿತವು ಕೆಲವು ತಿಂಗಳುಗಳ ಮುಂಚೆ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಒಳ್ಳೆಯದಿತ್ತು. ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಾ ಪರಿಪಾಲಿಸುತ್ತಿದ್ದನು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.


ಇಲ್ಲಿಂದ ಹೋಗುವಾಗ ಭಾಗ್ಯವಂತಳಾಗಿ ಹೋದೆನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು.


ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.


ನೋಡು, ಬಂಗಾರವು ಹೇಗೆ ಕಪ್ಪಾಗಿದೆ. ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.


ಯೆಹೋವನನ್ನು ನೀವು ನಂಬುವಂತೆ ಮಾಡಲು ಹಿಜ್ಕೀಯನಿಗೆ ಅವಕಾಶ ನೀಡಬೇಡಿ! ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ! ಅಶ್ಶೂರದ ರಾಜನು ಈ ನಗರವನ್ನು ಸೋಲಿಸಲಾಗುವುದಿಲ್ಲ!’ ಎಂದು ಹಿಜ್ಕೀಯನು ಹೇಳುತ್ತಾನೆ.


ನಾನು ಬಂದು, ನಿಮ್ಮನ್ನು ಈ ದೇಶಕ್ಕೆ ಸಮಾನವಾದ ಬೇರೊಂದು ದೇಶಕ್ಕೆ ಕರೆದೊಯ್ಯುವವರೆಗೆ ನೀವು ಹೀಗೆ ಮಾಡಬಹುದು. ಆ ದೇಶವು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಆಲೀವ್ ಮರ ಮತ್ತು ಜೇನುತುಪ್ಪ ಮುಂತಾದವುಗಳಿಂದ ಸಮೃದ್ಧಿಯಾಗಿದೆ. ನೀವು ಅಲ್ಲಿ ಸಾಯದೆ ಜೀವಿಸಬಹುದು. ಆದರೆ ಹಿಜ್ಕೀಯನ ಮಾತುಗಳನ್ನು ಕೇಳಬೇಡಿ! ಅವನು ನಿಮ್ಮ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾನೆ. “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಅವನು ಹೇಳುತ್ತಾನೆ.


ಅನ್ಯ ಜನಾಂಗಗಳು, “ನಿಮ್ಮ ದೇವರು ಎಲ್ಲಿ? ಆತನು ನಿಮಗೆ ಸಹಾಯಮಾಡಲಾರನೇ?” ಎಂದು ಹೇಳಲು ಅವಕಾಶ ಕೊಡಬೇಡ. ದೇವರೇ, ಅವರು ನಿನ್ನ ಸೇವಕರನ್ನು ಕೊಂದದ್ದಕ್ಕಾಗಿ ನಮ್ಮ ಕಣ್ಣೆದುರಿನಲ್ಲಿಯೇ ಅವರನ್ನು ದಂಡಿಸು.


ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.


ನೀನು ನನ್ನ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ನೀನು ನನ್ನನ್ನು ಮೇಲೆತ್ತಿ ಎಸೆದುಬಿಟ್ಟೆಯಲ್ಲಾ!


ಅವರ ದೇವರು ಎಲ್ಲಿದ್ದಾನೆಂದು ಜನಾಂಗಗಳು ಯಾಕೆ ಹೇಳಬೇಕು?


ನನ್ನ ಸಹೋದರರ ಮತ್ತು ನೆರೆಯವರ ಒಳ್ಳೆಯದಕ್ಕಾಗಿ ಅಲ್ಲಿ ಶಾಂತಿ ನೆಲೆಸಿರಲೆಂದು ಪ್ರಾರ್ಥಿಸುವೆನು.


ರಾಜನು ತನ್ನ ಜನರೊಂದಿಗೆ ಇರಬೇಕು. ಜನರು ಒಳಗೆ ಪ್ರವೇಶ ಮಾಡುವಾಗ ಅವನೂ ಅವರ ಜೊತೆಯಲ್ಲಿರಬೇಕು. ಅವರು ಹೊರಗೆ ಹೋಗುವಾಗಲೂ ಅವನು ಅವರ ಜೊತೆಯಲ್ಲಿರಬೇಕು.


ಯೆಹೋವನ ಸೇವಕರಾದ ಯಾಜಕರು ಮಂಟಪಕ್ಕೂ ವೇದಿಕೆಗೂ ಮಧ್ಯದಲ್ಲಿ ಗೋಳಾಡಲಿ. ಆ ಜನರೆಲ್ಲಾ ಹೀಗೆ ಹೇಳಬೇಕು, “ಯೆಹೋವನೇ, ನಿನ್ನ ಜನರ ಮೇಲೆ ಕರುಣೆ ಇಡು, ನಿನ್ನ ಜನರನ್ನು ನಾಚಿಕೆಗೆ ತುತ್ತಾಗುವಂತೆ ಮಾಡಬೇಡ. ನಿನ್ನ ಜನರ ವಿಷಯವಾಗಿ ಅನ್ಯಜನರು ಗೇಲಿ ಮಾಡದಿರಲಿ. ಇತರ ದೇಶದ ಜನರು ನಮಗೆ ಹಾಸ್ಯ ಮಾಡುತ್ತಾ, ‘ಅವರ ದೇವರು ಎಲ್ಲಿ?’ ಎಂದು ಹೇಳದ ಹಾಗೆ ಮಾಡು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು