Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:1 - ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:1
21 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ವ್ಯಾಜ್ಯಗಳಲ್ಲಿ ವಾದಿಸು! ನನ್ನ ಯುದ್ಧಗಳಲ್ಲಿ ಹೋರಾಡು!


ಯೆಹೋವನೇ, ನನಗೆ ನ್ಯಾಯವನ್ನು ನಿರ್ಣಯಿಸು; ನನ್ನ ಜೀವಿತ ಶುದ್ಧವಾಗಿತ್ತೆಂದು ನಿರೂಪಿಸು. ನಾನು ಯೆಹೋವನಲ್ಲಿಯೇ ಭರವಸವಿಟ್ಟಿದ್ದೆನು.


ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.


ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದ ಕೊಡಬೇಡ.


ಯೆಹೋವನೇ ನಮ್ಮಿಬ್ಬರಿಗೂ ನ್ಯಾಯಾಧೀಶನಾಗಿದ್ದು ತೀರ್ಪು ನೀಡಲಿ. ಯೆಹೋವನು ನನ್ನ ಪರವಾಗಿ ವಾದಿಸಿ ನಾನು ನೀತಿವಂತನೆಂದು ನಿರೂಪಿಸಿ ನನ್ನನ್ನು ನಿನ್ನಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.


ನನ್ನ ದೇವರೇ, ದುಷ್ಟರಿಂದಲೂ ಕ್ರೂರವಾದ ಕೆಟ್ಟವರಿಂದಲೂ ನನ್ನನ್ನು ರಕ್ಷಿಸು.


ಸುಳ್ಳಾಡುವವರನ್ನು ನೀನು ನಾಶಪಡಿಸುವೆ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವನು ದ್ವೇಷಿಸುವನು.


ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ. ಆದ್ದರಿಂದ ಆತನು ನನ್ನ ಮೇಲೆ ಕೋಪಿಸಿಕೊಂಡಿದ್ದಾನೆ. ಆದರೆ ನನ್ನ ಪರವಾಗಿ ಆತನು ವಾದಿಸುತ್ತಾನೆ. ನನಗೆ ಒಳ್ಳೆಯದನ್ನೇ ಆತನು ಮಾಡುತ್ತಾನೆ. ಆ ಬಳಿಕ ನನ್ನನ್ನು ಹೊರಗೆ ಬೆಳಕಿಗೆ ತರುವನು. ಆತನು ನೀತಿವಂತನೆಂಬುದು ಆಗ ನನಗೆ ತಿಳಿಯುವುದು.


ಜನರು ಕ್ರಿಸ್ತನನ್ನು ಬಯ್ದರೂ ಆತನು ಅವರನ್ನು ಬಯ್ಯಲಿಲ್ಲ. ಆತನು ಸಂಕಟವನ್ನು ಅನುಭವಿಸಿದರೂ ಜನರನ್ನು ಹೆದರಿಸಲಿಲ್ಲ. ಆತನು ತನ್ನ ಕಾರ್ಯವನ್ನು ದೇವರಿಗೆ ವಹಿಸಿದನು. ಸರಿಯಾದ ನ್ಯಾಯತೀರ್ಪು ನೀಡುವಾತನು ದೇವರೊಬ್ಬನೇ.


ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.


ಇಲ್ಲವಾದರೆ ಯೆಹೋವನು ನಿನಗೆ ವಿರೋಧವಾಗುವನು; ಯೆಹೋವನು ಬಲಿಷ್ಠನೂ ಅನಾಥರ ಪರವಾಗಿ ವಾದಿಸುವವನೂ ಆಗಿದ್ದಾನೆ.


ಯಾಕೆಂದರೆ ಯೆಹೋವನು ಅವರ ಪರವಾಗಿ ವಾದಿಸುವನು; ಅವರನ್ನು ದರೋಡೆ ಮಾಡಬೇಕೆಂದಿರುವವರ ಪ್ರಾಣಗಳನ್ನು ತೆಗೆದುಹಾಕುವನು.


ನ್ಯಾಯಾಧಿಪತಿಯು ದೇವರೇ. ಯಾರನ್ನು ಉದ್ಧಾರಮಾಡಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುವಾತನು ದೇವರೇ. ದೇವರು ಒಬ್ಬನನ್ನು ಉನ್ನತಿಗೇರಿಸುವನು; ಮತ್ತೊಬ್ಬನನ್ನು ಅವನತಿಗಿಳಿಸುವನು.


ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು.


ಒಬ್ಬನು ದಾವೀದನಿಗೆ, “ಅಬ್ಷಾಲೋಮನ ಜೊತೆಯಲ್ಲಿ ಉಪಾಯಗಳನ್ನು ಮಾಡಿದ ಜನರಲ್ಲಿ ಅಹೀತೋಫೆಲನೂ ಒಬ್ಬನು” ಎಂದು ಹೇಳಿದನು. ಆಗ ದಾವೀದನು, “ಯೆಹೋವನೇ, ಅಹೀತೋಫೆಲನ ಸಲಹೆಗಳನ್ನು ವಿಫಲಗೊಳಿಸು” ಎಂದು ಪ್ರಾರ್ಥಿಸಿದನು.


ಯುದ್ಧವು ದೇಶವನ್ನೆಲ್ಲ ವ್ಯಾಪಿಸಿತು. ಆದರೆ ಅಂದು ಕತ್ತಿಯಿಂದ ಸತ್ತ ಜನರಿಗಿಂತ ಹೆಚ್ಚು ಜನರು ಕಾಡಿನಲ್ಲಿ ಸತ್ತರು.


ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತಸ್ಥಾನದಲ್ಲಿ ಆಸೀನನಾಗು.


ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.


ದೇವರ ಕುರಿತು ಆಲೋಚಿಸದ ಅನ್ಯರು ನನಗೆ ವಿರೋಧವಾಗಿ ತಿರುಗಿದ್ದಾರೆ. ಆ ಬಲಾತ್ಕಾರಿಗಳು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ.


ಆ ಗರ್ವಿಷ್ಠರು ನನಗೆ ಉರುಲನ್ನು ಒಡ್ಡಿದ್ದಾರೆ; ನನ್ನನ್ನು ಹಿಡಿಯಲು ಬಲೆಯನ್ನು ಹಾಸಿದ್ದಾರೆ; ನನ್ನ ದಾರಿಯಲ್ಲಿ ಬೋನನ್ನು ಇಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು