Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:1 - ಪರಿಶುದ್ದ ಬೈಬಲ್‌

1 ಒಂದು ದಿವ್ಯ ವಿಷಯವನ್ನು ಹೇಳಲು ನನ್ನ ಹೃದಯವು ತವಕಪಡುತ್ತದೆ; ನನ್ನ ರಾಜನನ್ನು ಕುರಿತು ಸುಂದರವಾದ ಗೀತೆಯೊಂದನ್ನು ರಚಿಸುವೆ. ನನ್ನ ನಾಲಿಗೆಯು ಕವಿಯ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಒಂದು ದಿವ್ಯ ವಿಷಯವನ್ನು ಹೇಳುವದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೇ ಬರವಣಿಗಸ್ತನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:1
23 ತಿಳಿವುಗಳ ಹೋಲಿಕೆ  

ನಾನು ನಿಮಗೆ ಸುಜ್ಞಾನವನ್ನೂ ವಿವೇಕವನ್ನೂ ಬೋಧಿಸುವೆನು.


ನನ್ನ ಹೃದಯವು ಯಥಾರ್ಥವಾಗಿದೆ; ಆದ್ದರಿಂದ ನಾನು ಯಥಾರ್ಥವಾದ ಮಾತುಗಳನ್ನು ಹೇಳುವೆನು, ನನಗೆ ತಿಳಿದಿರುವ ಸಂಗತಿಗಳ ಬಗ್ಗೆ ಸತ್ಯವನ್ನು ಹೇಳುವೆನು.


ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.


ಜ್ಞಾನಿಯ ಹೃದಯವು ಅವನ ಬಾಯಿಗೆ ಮಾರ್ಗದರ್ಶನ. ಅವನ ಮಾತುಗಳು ಒಳ್ಳೆಯದಾಗಿವೆ; ಕೇಳಲು ಯೋಗ್ಯವಾಗಿವೆ.


ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.


ನನ್ನ ಪ್ರಿಯನನ್ನೂ ಆತನ ತೋಟವನ್ನೂ ಕುರಿತು ಗೀತೆಯೊಂದನ್ನು ಹಾಡುವೆ. ಫಲವತ್ತಾದ ಪ್ರದೇಶದಲ್ಲಿ ನನ್ನ ಪ್ರಿಯನಿಗೆ ದ್ರಾಕ್ಷಿತೋಟವಿತ್ತು.


ದೇವರೇ, ನನ್ನನ್ನು ರಕ್ಷಿಸು! ನನ್ನ ಕತ್ತಿನವರೆಗೂ ನೀರು ಏರಿಬಂದಿದೆ.


ಅಂತೆಯೇ ನಾವು ಈ ವಾದಗಳನ್ನು ಪರೀಕ್ಷಿಸಿ ನ್ಯಾಯವಾದದ್ದನ್ನೇ ಆರಿಸಿಕೊಳ್ಳೋಣ.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತಾಡುತ್ತಿದ್ದೇನೆ. ರಹಸ್ಯವಾದ ಈ ಸತ್ಯವು ಬಹು ಮುಖ್ಯವಾದದ್ದು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ.


ಓಲಗದ ಮೇಲೆ ಮಲಗಿರುವ ರಾಜನಿಗೆ ನನ್ನ ಸುಗಂಧದ್ರವ್ಯದ ಪರಿಮಳವು ಹರಡುವುದು.


ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಒಳ್ಳೆಯವನು ತನ್ನ ಹೃದಯದಲ್ಲಿ ಒಳ್ಳೆಯವುಗಳನ್ನು ಇಟ್ಟುಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಒಳ್ಳೆಯವುಗಳನ್ನೇ ಮಾತಾಡುತ್ತಾನೆ. ಆದರೆ ದುಷ್ಟನು ತನ್ನ ಹೃದಯದಲ್ಲಿ ಕೆಟ್ಟವುಗಳನ್ನು ಶೇಖರಿಸಿಕೊಂಡಿರುತ್ತಾನೆ. ಆದ್ದರಿಂದ ಅವನು ತನ್ನ ಹೃದಯದಿಂದ ಬರುವ ಕೆಟ್ಟವುಗಳನ್ನೇ ಮಾತಾಡುತ್ತಾನೆ.


ಇಸ್ರೇಲನ್ನು ಕಾಯುವ ಕುರುಬನೇ, ಯೋಸೇಫನ ಜನರನ್ನು ಕುರಿಮಂದೆಯಂತೆ ನಡೆಸುವಾತನೇ, ಕೆರೂಬಿ ದೂತರ ಮೇಲೆ ರಾಜನಂತೆ ಕುಳಿತಿರುವಾತನೇ, ಕಿವಿಗೊಡು. ನಾವು ನಿನ್ನನ್ನು ನೋಡುವಂತಾಗಲಿ.


ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಬಯಸುವಂತೆಯೇ ನನ್ನ ಆತ್ಮವು ನಿನ್ನನ್ನು ಬಯಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು