Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:13 - ಪರಿಶುದ್ದ ಬೈಬಲ್‌

13 ಅಂತಃಪುರದಲ್ಲಿ ರಾಜಕುಮಾರಿಯು ವೈಭವದಿಂದಿರುವಳು; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ರಾಜಕುವರಿ ವಿರಾಜಿಸುತಿಹಳು ಅಂತಃಪುರದಲಿ I ಮೆರೆಯುತಿಹಳು ಜರತಾರಿ ವಸ್ತ್ರಾಭರಣಗಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅರಸನ ಮಗಳು ತನ್ನ ಅಂತಃಪುರದಲ್ಲಿ ಪೂರ್ಣ ವೈಭವದಿಂದ ಇದ್ದಾಳೆ. ಅವಳ ವಸ್ತ್ರವು ಚಿನ್ನದಿಂದ ನೇಯ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:13
16 ತಿಳಿವುಗಳ ಹೋಲಿಕೆ  

ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.


ನಂಬಿಕೆಯ ಮೂಲಕವಾಗಿ ಅಂದರೆ ಯೇಸು ಕ್ರಿಸ್ತನಲ್ಲಿ ನಂಬಿಕೆ ಇಡುವ ಎಲ್ಲಾ ಜನರನ್ನು ದೇವರು ನೀತಿವಂತರನ್ನಾಗಿ ಮಾಡುತ್ತಾನೆ. ಆತನಿಗೆ ಎಲ್ಲಾ ಜನರು ಒಂದೇ.


ನೀವು ಬುದ್ಧಿಹೀನರು! ಹೊರಭಾಗವನ್ನು ಮಾಡಿದಾತನೇ (ದೇವರು) ಒಳಭಾಗವನ್ನೂ ಮಾಡಿದ್ದಾನೆ.


ಅದೇ ರೀತಿಯಲ್ಲಿ ನೀವು ಜನರಿಗೆ ಬೆಳಕಾಗಿರಬೇಕು. ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.


ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.


ರಾಜಕುಮಾರಿಯೇ, ಪಾದರಕ್ಷೆಗಳಲ್ಲಿರುವ ನಿನ್ನ ಪಾದಗಳು ಎಷ್ಟೋ ಸುಂದರವಾಗಿವೆ. ನಿನ್ನ ದುಂಡಾದ ತೊಡೆಗಳು ಶಿಲ್ಪಿಯು ಮಾಡಿದ ಆಭರಣಗಳಂತಿವೆ.


ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.


ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.


ಸೊಲೊಮೋನನು ಎಂಭತ್ತು ಸಾವಿರ ಜನರನ್ನು ಬಲಾತ್ಕಾರದಿಂದ ಬೆಟ್ಟಪ್ರದೇಶದಲ್ಲಿ ಕೆಲಸ ಮಾಡಲು ನೇಮಿಸಿದನು. ಈ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿ ಎಪ್ಪತ್ತು ಸಾವಿರ ಜನರು ಕಲ್ಲುಗಳನ್ನು ಹೊರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು